AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
ಗಣಪತಿ ಶರ್ಮಾ
|

Updated on: Apr 08, 2023 | 11:35 AM

Share

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು (Congress) ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು (BJP) ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಏನು ಮಾಡಲಿ. ಅದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಈಗಾಗಲೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಯಾರು ಕಷ್ಟದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಸಹಾಯ ಮಾಡುವುದಾಗಿ ಅವರು ಘೋಷಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಕೆ.ಎನ್ ರಾಜಣ್ಣ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂದಿರುವ ವಿಚಾರವಾಗಿ ಮಾತನಾಡಿದ ಅವರು ಎಲ್ಲರೂ ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರೂ ಕೈಹಿಡಿಯಲಿಲ್ಲ, ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ಏಪ್ರಿಲ್​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಅಂತಿಮ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್​​ಗಾಗಿ ಪೈಪೋಟಿ ಸಾಮಾನ್ಯ ಎಂದು ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 9 ರಂದೇ ರಾಜ್ಯಕ್ಕೆ ಆಗಮಿಸಲಿದ್ದು, ಹಾಗೇ ಅಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಕಷ್ಟು ಕುತೂಹಲ ಮೂಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?