AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಅಭ್ಯರ್ಥಿಗಳಿಲ್ಲದ ಕಾಂಗ್ರೆಸ್, 2ನೇ ಪಟ್ಟಿ ಸಿದ್ಧತೆ ವೇಳೆ ಬಿಜೆಪಿಯವರನ್ನು ಸಂಪರ್ಕಿಸಿದ್ದ ಡಿಕೆಶಿ; ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Ganapathi Sharma
|

Updated on: Apr 08, 2023 | 11:35 AM

Share

ಶಿವಮೊಗ್ಗ: ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್​ನವರು (Congress) ಈ ಬಾರಿ ಹಿಂದಿನ ಚುನಾವಣೆಗಿಂತಲೂ ಹೀನಾಯವಾಗಿ ಸೋಲುತ್ತಾರೆ. ಕಾಂಗ್ರೆಸ್​​ಗೆ ಇನ್ನೂ 60 ಕ್ಷೇತ್ರಗಳಲ್ಲಿ ಸೂಕ್ತ ಅಭ್ಯರ್ಥಿಗಳು ಸಿಗುತ್ತಿಲ್ಲ. ಹೀಗಾಗಿ 2ನೇ ಪಟ್ಟಿ ಸಿದ್ಧತೆ ವೇಳೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಮ್ಮವರನ್ನು (BJP) ಸಂಪರ್ಕಿಸಿದ್ದರು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಹೇಳಿದ್ದಾರೆ. ಶಿವಮೊಗ್ಗದಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿದಿಗಳೊಂದಿಗೆ ಮಾತನಾಡಿದ್ದ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ನಟ ಕಿಚ್ಚ ಸುದೀಪ್ ಬಿಜೆಪಿಗೆ ಬೆಂಬಲ ಸೂಚಿಸಿರುವ ವಿಚಾರವಾಗಿ ಮಾತನಾಡಿದ ಅವರು, ನಾನು ಏನು ಮಾಡಲಿ. ಅದು ಅವರಿಗೆ ಬಿಟ್ಟ ವಿಚಾರ. ಸುದೀಪ್ ಈಗಾಗಲೇ ಈ ಕುರಿತು ಸ್ಪಷ್ಟಪಡಿಸಿದ್ದಾರೆ. ಯಾರು ಕಷ್ಟದಲ್ಲಿ ಸಹಾಯ ಮಾಡಿದ್ದಾರೆ. ಅವರಿಗೆ ಸಹಾಯ ಮಾಡುವುದಾಗಿ ಅವರು ಘೋಷಿಸಿದ್ದಾರೆ ಎಂದು ಸ್ಪಷ್ಟ ಪಡಿಸಿದರು.

ಕೆ.ಎನ್ ರಾಜಣ್ಣ ಸುದೀಪ್ ಅವರನ್ನು ಪ್ರಚಾರಕ್ಕೆ ಕರೆಯುತ್ತೇನೆ ಎಂದಿರುವ ವಿಚಾರವಾಗಿ ಮಾತನಾಡಿದ ಅವರು ಎಲ್ಲರೂ ಕರೆಯುತ್ತಾರೆ, ಹೋಗೋದು ಬಿಡೋದು ಅವರಿಗೆ ಬಿಟ್ಟ ವಿಚಾರ. ಅವರೇ ಹೇಳಿದ್ದಾರೆ ನನ್ನ ಕಷ್ಟ ಕಾಲದಲ್ಲಿ ಯಾರೂ ಕೈಹಿಡಿಯಲಿಲ್ಲ, ಬೊಮ್ಮಾಯಿ ಕೈಹಿಡಿದಿದ್ದರು ಸಹಾಯ ಮಾಡುತ್ತೇನೆ ಎಂದಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ: ನಂದಿನಿ ರಾಷ್ಟ್ರ ಮಟ್ಟದ ಬ್ರ್ಯಾಂಡ್​, ಕಾಂಗ್ರೆಸ್​ನಿಂದ ಅಮುಲ್ ವಿಚಾರದಲ್ಲಿ ರಾಜಕೀಯ; ಸಿಎಂ ಬೊಮ್ಮಾಯಿ

ಏಪ್ರಿಲ್​ 9ರಂದು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ಒಂದು ಕ್ಷೇತ್ರಕ್ಕೆ ಮೂವರು ಟಿಕೆಟ್​​​​ ಆಕಾಂಕ್ಷಿಗಳಿದ್ದಾರೆ. ಎಲ್ಲಾ ರೀತಿಯ ಪ್ರಕ್ರಿಯೆ ಮುಗಿಸಿ ದೆಹಲಿಗೆ ಪಟ್ಟಿ ಕಳುಹಿಸಲಾಗಿದೆ. ಅಂತಿಮ ಪಟ್ಟಿ ಸಿದ್ದಪಡಿಸಲಾಗುತ್ತಿದೆ. ಬಿಜೆಪಿ ಗೆಲ್ಲುವ ಪಕ್ಷ, ಹೀಗಾಗಿ ಟಿಕೆಟ್​​ಗಾಗಿ ಪೈಪೋಟಿ ಸಾಮಾನ್ಯ ಎಂದು ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಏಪ್ರಿಲ್​ 9 ರಂದೇ ರಾಜ್ಯಕ್ಕೆ ಆಗಮಿಸಲಿದ್ದು, ಹಾಗೇ ಅಂದೇ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಾಕಷ್ಟು ಕುತೂಹಲ ಮೂಡಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಂಬಂಧಿತ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಶಿವಣ್ಣನಿಗೆ ವಿಶ್ ಮಾಡಲು ಚಿಕ್ಕಮಗಳೂರಿನಿಂದ ಬಂದ ಕಾಫಿ ನಾಡು ಚಂದು
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
ಆರೋಗ್ಯವಂತ ಬಾಣಂತಿಯರ ಹಾಲನ್ನು ಮಾತ್ರ ಸಂಗ್ರಹಿಸಲಾಗುತ್ತದೆ: ವೈದ್ಯಾಧಿಕಾರಿ
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
Wimbledon 2025: ನೊವಾಕ್ ನಾಗಾಲೋಟಕ್ಕೆ ಸಿನ್ನರ್ ಬ್ರೇಕ್
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ
ಕೇಂದ್ರ ನೀಡುವ 5 ಕೇಜಿ ಅಕ್ಕಿ ಹಂಚುವ ಯೋಗ್ಯತೆ ರಾಜ್ಯ ಸರ್ಕಾರಕ್ಕಿಲ್ಲ: ಜೋಶಿ