AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಗ್ರೆಸ್ ಕೆಲ ಸೀಟ್ ಗೆಲ್ಲುವುದಕ್ಕೆ ಅವಕಾಶ ನೀಡಿದೆ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ

ಕಾಂಗ್ರೆಸ್ ಕೆಲ ಸೀಟ್ ಗೆಲ್ಲುವುದಕ್ಕೆ ಅವಕಾಶ ನೀಡಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ. ಎಲ್ಲಿ ಬಿಜೆಪಿಗೆ ವ್ಯತ್ಯಾಸವಾಗಿದೆ ಅಲ್ಲಿ ಸರಿಪಡಿಸುತ್ತೇವೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶ ವಿಚಾರಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಕಾಂಗ್ರೆಸ್ ಕೆಲ ಸೀಟ್ ಗೆಲ್ಲುವುದಕ್ಕೆ ಅವಕಾಶ ನೀಡಿದೆ: ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ
ಸಚಿವ ಕೆ.ಎಸ್.ಈಶ್ವರಪ್ಪ
TV9 Web
| Edited By: |

Updated on:Jan 01, 2022 | 2:51 PM

Share

ಶಿವಮೊಗ್ಗ: ಚುನಾವಣೆ ಅಂದ ಮೇಲೆ ಕಾಂಗ್ರೆಸ್ ಬದುಕಿರಬೇಕಲ್ಲವೇ. ನಮಗೆ ವಿರೋಧ ಪಕ್ಷವೇ ಇಲ್ಲ ಅಂದರೆ ಗತಿಯೇನು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿರೋಧ ಪಕ್ಷ ಇರಬೇಕು. ಕಾಂಗ್ರೆಸ್ (Congress) ಕೆಲ ಸೀಟ್ ಗೆಲ್ಲುವುದಕ್ಕೆ ಅವಕಾಶ ನೀಡಿದ್ದಾರೆ. ಇದನ್ನು ನಾನು ಸ್ವಾಗತಿಸುತ್ತೇನೆ. ಎಲ್ಲಿ ಬಿಜೆಪಿಗೆ ವ್ಯತ್ಯಾಸವಾಗಿದೆ ಅಲ್ಲಿ ಸರಿಪಡಿಸುತ್ತೇವೆ ಎಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ (local body election) ಫಲಿತಾಂಶ ವಿಚಾರಕ್ಕೆ ಸಂಬಂಧಪಟ್ಟಂತೆ ಶಿವಮೊಗ್ಗದಲ್ಲಿ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಹೇಳಿದ್ದಾರೆ.

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದವರನ್ನು ಹುಡುಕಬೇಕು: ಸಚಿವ ವಿ.ಸುನಿಲ್ ಕುಮಾರ್ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗೆದ್ದವರನ್ನು ಹುಡುಕಬೇಕು. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಹುಡುಕಬೇಕೆಂದು ಶಿವಮೊಗ್ಗದಲ್ಲಿ ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿಕೆ ನೀಡಿದ್ದಾರೆ. ಬಳಿಕ ಮಾತಾಡಿದ ಅವರು, ನಿರಂತರ ಜ್ಯೋತಿ ಯೋಜನೆ 2017ರಲ್ಲಿ ರಾಜ್ಯಕ್ಕೆ ಮಂಜೂರು ಆಗಿತ್ತು. ಇದು ಶಿವಮೊಗ್ಗ ಜಿಲ್ಲೆಗೆ ಮಂಜೂರಾದ 220 ಕೋಟಿ ರೂಪಾಯಿ ಯೋಜನೆಯಾಗಿತ್ತು. ಯೋಜನೆ ಕಾಮಗಾರಿ ಎಲ್ಲ ಹಂತದಲ್ಲೂ ಲೋಪದೋಷವಾಗಿದೆ. ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾಮಗಾರಿ ಹಳ್ಳ ಹಿಡಿದಿದೆ ಎಂದು ಇಂಧನ ಇಲಾಖೆ ವೈಫಲ್ಯ ಬಹಿರಂಗಪಡಿಸಿದ್ದಾರೆ.

ಕಾರ್ಮಿಕ ಇಲಾಖೆಯ ಅಧಿಕಾರಿಗಳು ನಿಯಾವಳಿ ಪಾಲಿಸಿಲ್ಲ. ಕೇಂದ್ರದ ಯೋಜನೆಗೆ ಪ್ರಧಾನಿ ಭಾವಚಿತ್ರ ಹಾಕಬೇಕಾಗಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿಯ ಭಾವಚಿತ್ರವನ್ನೇ ಹಾಕಿಲ್ಲ. 24 ಗಂಟೆಯಲ್ಲಿ ಅಧಿಕಾರಿಗಳನ್ನು ಅಮಾನತು ಮಾಡಬೇಕು ಎಂದು ಮೆಸ್ಕಾಂ ಎಂಡಿ ಪ್ರಶಾಂತ್‌ಗೆ ಸಚಿವ ವಿ.ಸುನಿಲ್ ಕುಮಾರ್ ಸೂಚಿಸಿದ್ದಾರೆ.

24 ಘಂಟೆಯಲ್ಲಿ ಇಬ್ಬರು ಅಧಿಕಾರಿಗಳನ್ನು ಅಮಾನತ್ತು ಮಾಡಬೇಕು. ಇಂಧನ ಇಲಾಖೆ ಕಾರ್ಯದರ್ಶಿ  ಜೊತೆ ಚರ್ಚಿಸಿ ಎಸಿಬಿ ಅಥವಾ ಇಲಾಖೆ ಅಥವಾ ಇತರೆ ತನಿಖೆಯ ಮೂಲಕ ಈ ಕುರಿತು ನಿರ್ಧಾರ ಮಾಡಲಾಗುತ್ತದೆ. ಈ ತನಿಖೆ ಮೂಲಕ ಎಲ್ಲ ಅವ್ಯವಹಾರ ಬಯಲಿಗೆ ಬರಲಿದೆ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದ್ದಾರೆ.

ಇದನ್ನೂ ಓದಿ: 

ಬೆಂಗಳೂರು: ಹೆಬ್ಬಗೋಡಿ ನಗರಸಭೆ ಬಿಜೆಪಿ ಪಾಲಿಗೆ, ಕಾಂಗ್ರೆಸ್​ಗೆ ಜಿಗಣಿ, ಬಿಜೆಪಿಗೆ ಚಂದಾಪುರ ಪುರಸಭೆ

ಮೂರು ತಿಂಗಳಲ್ಲಿ ಜಿಪಂ, ತಾಪಂ ಚುನಾವಣೆ ಸಾಧ್ಯತೆ: ಸಚಿವ ಕೆಎಸ್ ಈಶ್ವರಪ್ಪ

Published On - 2:46 pm, Sat, 1 January 22

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​
ಡ್ರಗ್ಸ್​ ದಂಧೆಕೋರರಿಗೆ ಶಾಕ್​: 3 ಕೆ.ಜಿ. MDMA ಸೀಜ್​, ಇಬ್ಬರು ಅರೆಸ್ಟ್​