AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು

ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಕೂಡಿ ಬಂದಿರಲಿಲ್ಲ.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
TV9 Web
| Updated By: ಸಾಧು ಶ್ರೀನಾಥ್​|

Updated on: Aug 27, 2022 | 2:30 PM

Share

ಶಿವಮೊಗ್ಗ: ವ್ಯವಹಾರದ ಹಿನ್ನೆಲೆಯಲ್ಲಿ ಅಪ್ಪ ಮತ್ತು ಮಗನಿಗೆ ಕಂಟ್ರಾಕ್ಟರ್ ಚಾಕು ಇರಿದಿದ್ದಾನೆ. ಇದರಿಂದ ಚಾಕು ಇರಿತಕ್ಕೊಳಗಾದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗ ಶಿವಮೊಗ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶಿರಾಳಕೊಪ್ಪದ ಹಾರ್ಡ್ ವೇರ್ ಉದ್ಯಮಿ ದಯಾನಂದ ಹಾಗೂ ಇವರ ಪುತ್ರ ರಾಘವೇಂದ್ರ ಚಾಕು ಇರಿತಕ್ಕೊಳಗಾದವರು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ದಯಾನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟ್ರಾಕ್ಟರ್ ಕೋಟೇಶಪ್ಪ ಚಾಕು ಇರಿದ ಅರೋಪಿ. ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಸರಿ ಬರದ ಹಿನ್ನೆಲೆ, ಜೊತೆಗೆ ಕಾಮಗಾರಿ ಸರಿಯಾಗಿ ನಿರ್ವಹಿಸದಿದ್ದರಿಂದ ಕೋಟೇಶಪ್ಪನೊಂದಿಗಿನ ದಯಾನಂದ್ ವ್ಯವಹಾರ ಕಡಿದುಕೊಂಡಿದ್ದರು.

ಬಳಿಕ ದಯಾನಂದ ಅವರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೇರೆಯವರಿಗೆ ನೀಡಿದ್ದರು. ಇದರಿಂದ ಕೆರಳಿದ ಕೋಟೇಶಪ್ಪ, ಇಂದು ಬೆಳಗ್ಗೆ ದಯಾನಂದ ಹಾಗೂ ಅವರ ಪುತ್ರ ರಾಘವೇಂದ್ರ ತಮ್ಮ ಹಾರ್ಡ್ ವೇರ್ ಶಾಪ್ ಬಾಗಿಲು ತೆಗೆಯುತಿದ್ದಂತೆ ಏಕಾಏಕಿ ದಾಳಿ ನಡೆಸಿದ್ದಾನೆ. ದಾಳಿ ನಡೆಸಿ ದಯಾನಂದ್ ಹಾಗೂ ರಾಘವೇಂದ್ರ ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​