AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು

ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಕೂಡಿ ಬಂದಿರಲಿಲ್ಲ.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
TV9 Web
| Edited By: |

Updated on: Aug 27, 2022 | 2:30 PM

Share

ಶಿವಮೊಗ್ಗ: ವ್ಯವಹಾರದ ಹಿನ್ನೆಲೆಯಲ್ಲಿ ಅಪ್ಪ ಮತ್ತು ಮಗನಿಗೆ ಕಂಟ್ರಾಕ್ಟರ್ ಚಾಕು ಇರಿದಿದ್ದಾನೆ. ಇದರಿಂದ ಚಾಕು ಇರಿತಕ್ಕೊಳಗಾದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗ ಶಿವಮೊಗ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶಿರಾಳಕೊಪ್ಪದ ಹಾರ್ಡ್ ವೇರ್ ಉದ್ಯಮಿ ದಯಾನಂದ ಹಾಗೂ ಇವರ ಪುತ್ರ ರಾಘವೇಂದ್ರ ಚಾಕು ಇರಿತಕ್ಕೊಳಗಾದವರು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ದಯಾನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟ್ರಾಕ್ಟರ್ ಕೋಟೇಶಪ್ಪ ಚಾಕು ಇರಿದ ಅರೋಪಿ. ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಸರಿ ಬರದ ಹಿನ್ನೆಲೆ, ಜೊತೆಗೆ ಕಾಮಗಾರಿ ಸರಿಯಾಗಿ ನಿರ್ವಹಿಸದಿದ್ದರಿಂದ ಕೋಟೇಶಪ್ಪನೊಂದಿಗಿನ ದಯಾನಂದ್ ವ್ಯವಹಾರ ಕಡಿದುಕೊಂಡಿದ್ದರು.

ಬಳಿಕ ದಯಾನಂದ ಅವರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೇರೆಯವರಿಗೆ ನೀಡಿದ್ದರು. ಇದರಿಂದ ಕೆರಳಿದ ಕೋಟೇಶಪ್ಪ, ಇಂದು ಬೆಳಗ್ಗೆ ದಯಾನಂದ ಹಾಗೂ ಅವರ ಪುತ್ರ ರಾಘವೇಂದ್ರ ತಮ್ಮ ಹಾರ್ಡ್ ವೇರ್ ಶಾಪ್ ಬಾಗಿಲು ತೆಗೆಯುತಿದ್ದಂತೆ ಏಕಾಏಕಿ ದಾಳಿ ನಡೆಸಿದ್ದಾನೆ. ದಾಳಿ ನಡೆಸಿ ದಯಾನಂದ್ ಹಾಗೂ ರಾಘವೇಂದ್ರ ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!