AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು

ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಕೂಡಿ ಬಂದಿರಲಿಲ್ಲ.

ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
ಶಿವಮೊಗ್ಗ: ಅಪ್ಪ ಮತ್ತು ಮಗನಿಗೆ ಚಾಕು ಇರಿದ ಕಂಟ್ರಾಕ್ಟರ್ -ತಂದೆ ಸ್ಥಳದಲ್ಲೇ ಸಾವು
TV9 Web
| Edited By: ಸಾಧು ಶ್ರೀನಾಥ್​|

Updated on: Aug 27, 2022 | 2:30 PM

Share

ಶಿವಮೊಗ್ಗ: ವ್ಯವಹಾರದ ಹಿನ್ನೆಲೆಯಲ್ಲಿ ಅಪ್ಪ ಮತ್ತು ಮಗನಿಗೆ ಕಂಟ್ರಾಕ್ಟರ್ ಚಾಕು ಇರಿದಿದ್ದಾನೆ. ಇದರಿಂದ ಚಾಕು ಇರಿತಕ್ಕೊಳಗಾದ ತಂದೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಗ ಶಿವಮೊಗ್ಗ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಿವಮೊಗ್ಗ ಜಿಲ್ಲೆ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಶಿರಾಳಕೊಪ್ಪದ ಹಾರ್ಡ್ ವೇರ್ ಉದ್ಯಮಿ ದಯಾನಂದ ಹಾಗೂ ಇವರ ಪುತ್ರ ರಾಘವೇಂದ್ರ ಚಾಕು ಇರಿತಕ್ಕೊಳಗಾದವರು. ಚಾಕು ಇರಿತದಿಂದ ಗಂಭೀರವಾಗಿ ಗಾಯಗೊಂಡ ದಯಾನಂದ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಂಟ್ರಾಕ್ಟರ್ ಕೋಟೇಶಪ್ಪ ಚಾಕು ಇರಿದ ಅರೋಪಿ. ಮೃತಪಟ್ಟ ದಯಾನಂದ್ ಅವರು ಶಿರಾಳಕೊಪ್ಪದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿ ಆರಂಭಿಸಿದ್ದರು. ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಆರಂಭದಲ್ಲಿ ಕೋಟೇಶಪ್ಪ ಎಂಬ ಕಂಟ್ರಾಕ್ಟರ್ ಗೆ ನೀಡಿದ್ದರು. ಆದರೆ ಇಬ್ಬರಿಗೂ ವ್ಯವಹಾರ ಸರಿ ಬರದ ಹಿನ್ನೆಲೆ, ಜೊತೆಗೆ ಕಾಮಗಾರಿ ಸರಿಯಾಗಿ ನಿರ್ವಹಿಸದಿದ್ದರಿಂದ ಕೋಟೇಶಪ್ಪನೊಂದಿಗಿನ ದಯಾನಂದ್ ವ್ಯವಹಾರ ಕಡಿದುಕೊಂಡಿದ್ದರು.

ಬಳಿಕ ದಯಾನಂದ ಅವರು ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಬೇರೆಯವರಿಗೆ ನೀಡಿದ್ದರು. ಇದರಿಂದ ಕೆರಳಿದ ಕೋಟೇಶಪ್ಪ, ಇಂದು ಬೆಳಗ್ಗೆ ದಯಾನಂದ ಹಾಗೂ ಅವರ ಪುತ್ರ ರಾಘವೇಂದ್ರ ತಮ್ಮ ಹಾರ್ಡ್ ವೇರ್ ಶಾಪ್ ಬಾಗಿಲು ತೆಗೆಯುತಿದ್ದಂತೆ ಏಕಾಏಕಿ ದಾಳಿ ನಡೆಸಿದ್ದಾನೆ. ದಾಳಿ ನಡೆಸಿ ದಯಾನಂದ್ ಹಾಗೂ ರಾಘವೇಂದ್ರ ಇಬ್ಬರಿಗೂ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಈ ಸಂಬಂಧ ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಬೆಂಗಳೂರಿನಾದ್ಯಂತ ಡಿಕೆ ಶಿವಕುಮಾರ್ ಫ್ಲೆಕ್ಸ್, ಕಟೌಟ್​​ಗಳ ಅಬ್ಬರ!
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ
ಕ್ಯಾಪ್ಸಿ ಆರ್ಭಟಕ್ಕೆ ತತ್ತರಿಸಿದ ಟೀಮ್ ಇಂಡಿಯಾ