AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕ್ಷಣ ಸಚಿವರ ತವರು ಜಿಲ್ಲೆಯೇ ಅವ್ಯವಸ್ಥೆಯ ಆಗರ: ಶಾಲಾ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಕೇಳುವ ಸ್ಥಿತಿ

ಶಿಕ್ಷಣ ಸಚಿವರ ತವರು ಜಿಲ್ಲೆ ಶಿವಮೊಗ್ಗದ ಸರಕಾರಿ ಪ್ರೌಢಶಾಲೆಯ ಅವ್ಯವಸ್ಥೆ ಹೇಳ ತೀರದ್ದು. ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು ವಿದ್ಯಾರ್ಥಿಗಳು ಶಾಲೆಯ ಒಳಗೂ ಛತ್ರಿ ಹಿಡಿದು ಪಾಠ ಕೇಳುವಂತಹ ಪರಿಸ್ಥಿತಿ ಇದೆ.

ಶಿಕ್ಷಣ ಸಚಿವರ ತವರು ಜಿಲ್ಲೆಯೇ ಅವ್ಯವಸ್ಥೆಯ ಆಗರ: ಶಾಲಾ ಕೊಠಡಿಯಲ್ಲಿ ಛತ್ರಿ ಹಿಡಿದು ಪಾಠ ಕೇಳುವ ಸ್ಥಿತಿ
ಶಿವಮೊಗ್ಗದ ಸರಕಾರಿ ಪ್ರೌಢಶಾಲೆ
Basavaraj Yaraganavi
| Edited By: |

Updated on: Jul 08, 2023 | 2:00 PM

Share

ಶಿವಮೊಗ್ಗ: ಸರಕಾರಿ ಶಾಲೆ ಅಂದ್ರೆ ಮೂಗು ಮುರಿಯುವವರೇ ಜಾಸ್ತಿ(Government School). ಎಷ್ಟೋ ಸರಕಾರಿ ಶಾಲೆಗಳಲ್ಲಿ ಇಂದಿಗೂ ಕನಿಷ್ಠ ಮೂಲಭೂತ ಸೌಲಭ್ಯ ಸಹ ಇಲ್ಲ. ಆದರೆ ದುಬಾರಿ ಶಿಕ್ಷಣ ವ್ಯವಸ್ಥೆಯಿಂದಾಗಿ ಬಡ ವಿದ್ಯಾರ್ಥಿಗಳು ವಿಧಿ ಇಲ್ಲದೇ ಸರಕಾರಿ ಶಾಲೆಯನ್ನೇ ಆಶ್ರಯಿಸುವಂತಾಗಿದೆ. ಅದರಲ್ಲೂ ಶಿಕ್ಷಣ ಸಚಿವರ(Madhu Bangarappa) ತವರು ಜಿಲ್ಲೆ ಶಿವಮೊಗ್ಗದ ಸರಕಾರಿ ಪ್ರೌಢಶಾಲೆಯ ಅವ್ಯವಸ್ಥೆ ಹೇಳ ತೀರದ್ದು. ಜಿಲ್ಲೆಯಲ್ಲಿ ವರುಣನ ಆರ್ಭಟ ಜೋರಾಗಿದ್ದು ವಿದ್ಯಾರ್ಥಿಗಳು ಶಾಲೆಯ ಒಳಗೂ ಛತ್ರಿ ಹಿಡಿದು ಪಾಠ ಕೇಳುವಂತಹ ಪರಿಸ್ಥಿತಿ ಇದೆ.

ಮಲೆನಾಡಿನಲ್ಲಿ ‌ಈಗಾಗಲೇ ಮಳೆಗಾಲ ಆರಂಭವಾಗಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಮಳೆ ಎಡಬಿಡದೇ ಸುರಿಯುತ್ತಿದೆ. ಆದರೆ ಸರಕಾರಿ ಪ್ರೌಢಶಾಲೆಯ ಮೇಲ್ಛಾವಣಿ ಶಿಥಿಲಗೊಂಡಿರುವ ಪರಿಣಾಮ ಶಾಲೆಯ ಮಾಳಿಗೆ ಸೋರುತ್ತಿದೆ. ಸೋರುತ್ತಿರುವ ಕೊಠಡಿಯೊಳಗೆ ವಿದ್ಯಾರ್ಥಿಗಳು ಛತ್ರಿ ಹಿಡಿದು ಪಾಠ ಕೇಳುವಂತಾಗಿದೆ. ಈ ಸರಕಾರಿ ಪ್ರೌಢಶಾಲೆಯಲ್ಲಿ 8 ರಿಂದ 10 ನೇ ತರಗತಿಯವರೆಗೆ ಸುಮಾರು 125 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವವರು ಎಲ್ಲರೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು. ಯಾವ ಸಂದರ್ಭದಲ್ಲಿ ಮೇಲ್ಛಾವಣಿ ಕುಸಿಯುತ್ತದೆ ಎಂಬ ಆತಂಕದಲ್ಲಿ ವಿದ್ಯಾರ್ಥಿಗಳು ಪಾಠ ಕೇಳುತ್ತಿದ್ದರೇ. ಶಿಕ್ಷಕರು ಆತಂಕದಲ್ಲೇ ಭೋಧನೆ ಮಾಡುವಂತಾಗಿದೆ.

Education Minister Home District Shimoga Govt School bad Condition Students Sit With An Umbrella In The School ayb

ಶಿವಮೊಗ್ಗದ ಸರಕಾರಿ ಪ್ರೌಢಶಾಲೆ

ಇದನ್ನೂ ಓದಿ: ದಿನ ಬೆಳಗಾದ್ರೆ ಸಾಕು ಪ್ರೌಢಶಾಲೆಯಲ್ಲಿ ಅಶ್ಲೀಲ ಗೋಡೆ ಬರಹ ನೋಡಿ ವಿದ್ಯಾರ್ಥಿನಿಯರು ಕಣ್ಣೀರುಡುತ್ತಿದ್ದಾರೆ, ಇದಕ್ಕೆಲ್ಲ ಕೊನೆ ಯಾವಾಗ?

ಪೋಷಕರು ಹಾಗು ಸ್ಥಳೀಯರು ಶಾಲಾ ಕಟ್ಟಡ ದುರಸ್ತಿಪಡಿಸುವಂತೆ ಹಲವು ಬಾರಿ ಅಧಿಕಾರಿಗಳಿಗೆ ಹಾಗು ಜನಪ್ರತಿನಿಧಿಗಳಿಗೆ ಮನವಿ ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ಜಿಲ್ಲಾ ಉಸ್ತುವಾರಿ ಸಚಿವ ಹಾಗು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಈ ಬಗ್ಗೆ ಗಮನ ಹರಿಸುತ್ತಾರಾ ಎಂಬ ನಿರೀಕ್ಷೆಯಲ್ಲಿದ್ದಾರೆ ಗ್ರಾಮಸ್ಥರು.

Education Minister Home District Shimoga Govt School bad Condition Students Sit With An Umbrella In The School ayb

ಶಿವಮೊಗ್ಗದ ಸರಕಾರಿ ಪ್ರೌಢಶಾಲೆ

ಶಿವಮೊಗ್ಗ ಜಿಲ್ಲೆಯ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ