AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಈದ್​ ಗಲಾಟೆ: ಠಾಣಾಧಿಕಾರಿ ಸೇರಿ ಮೂವರು ಪೋಲಿಸ್ ಕಾನ್ಸ್​ಟೇಬಲ್​ ಅಮಾನತು

ಈದ್​ ಮಿಲಾದ್(Eid-Milad) ಮೆರವಣಿಗೆ ವೇಳೆ ನಗರದಲ್ಲಿ ನಡೆದ​ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಕಾನ್ಸ್​ಟೇಬಲ್​​ಗಳನ್ನು ಅಮಾನತುಗೊಳಿಸಲಾಗಿದೆ. ಶಿವಮೊಗ್ಗ (Shivamogga) ಎಸ್​ಪಿ ಜಿ.ಕೆ ಮಿಥುನ್ ಕುಮಾರ್ ಸಲ್ಲಿಸಿದ​​ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.

ಶಿವಮೊಗ್ಗ ಈದ್​ ಗಲಾಟೆ: ಠಾಣಾಧಿಕಾರಿ ಸೇರಿ ಮೂವರು ಪೋಲಿಸ್ ಕಾನ್ಸ್​ಟೇಬಲ್​ ಅಮಾನತು
ಪ್ರಾತಿನಿಧಿಕ ಚಿತ್ರ
Basavaraj Yaraganavi
| Edited By: |

Updated on:Oct 08, 2023 | 7:30 PM

Share

ಶಿವಮೊಗ್ಗ, ಅ.08: ಈದ್​ ಮಿಲಾದ್(Eid-Milad) ಮೆರವಣಿಗೆ ವೇಳೆ ನಗರದಲ್ಲಿ ನಡೆದ​ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಕಾನ್ಸ್​ಟೇಬಲ್​​ಗಳನ್ನು ಅಮಾನತುಗೊಳಿಸಲಾಗಿದೆ. ಶಿವಮೊಗ್ಗ (Shivamogga) ಎಸ್​ಪಿ ಜಿ.ಕೆ ಮಿಥುನ್ ಕುಮಾರ್ ಸಲ್ಲಿಸಿದ​​ ವರದಿ ಆಧರಿಸಿ, ರಾಗಿಗುಡ್ಡ ಗಲಾಟೆ ನಿಭಾಯಿಸಲು ವಿಫಲವಾದ ಹಿನ್ನಲೆ ಪೂರ್ವ ವಲಯ ಐಜಿಪಿ ತ್ಯಾಗರಾಜನ್​ ಅವರು ಪೋಲಿಸ್ ಠಾಣಾಧಿಕಾರಿ ಅಭಯ ಪ್ರಕಾಶ್ ಸೇರಿ ಕಾನ್ಸ್​ಟೇಬಲ್​ಗಳಾದ ಕಾಶಿನಾಥ್, ರಂಗನಾಥ್​ ಹಾಗೂ ಶಿವರಾಜ್ ಅವರನ್ನು ಅಮಾನತುಗೊಳಿಸಿ ​ ಆದೇಶ ಹೊರಡಿಸಿದ್ದಾರೆ.

ಘಟನೆ ವಿವರ

ಇದೇ ಅಕ್ಟೋಬರ್​ 1 ರಂದು ಶಿವಮೊಗ್ಗದಲ್ಲಿ ಅದ್ಧೂರಿ ಈದ್ ಮಿಲಾದ್ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದರು. ಅಷ್ಟೇ ಅಲ್ಲದೆ ಕೆಲ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದರು. ವಿಷಯ ತಿಳಿಯುತ್ತಿದ್ದಂತೆ ಜಿಲ್ಲಾಧಿಕಾರಿಗಳು ಕೂಡಲೇ ಶಿವಮೊಗ್ಗದ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದರು. ಇನ್ನು ಉದ್ವಿಗ್ನ ಪರಿಸ್ಥಿತಿ ನಿಭಾಯಿಸಲು ತೆಗೆದುಕೊಂಡ 144 ಸೆಕ್ಷನ್​ ಜಾರಿಯಿಂದ ಸಾರ್ವಜನಿಕರು ಸಂಕಷ್ಟಕ್ಕೆ ಸಿಲುಕಿದ್ದರು. ಹೌದು, ವ್ಯಾಪಾರ ವಹಿವಾಟಿಗೆ ಅವಕಾಶ ಇಲ್ಲದೆ ಬೇಕರಿ ಐಟಂಗಳು ಹಾಳಾಗಿ, ಸಾಲ ಮಾಡಿ ತಂದಿದ್ದ ಸ್ವೀಟ್ಸ್ , ಬ್ರೆಡ್​​ಗಳಿಗೆಲ್ಲಾ ಬೂಸ್ಟ್ ಬಂದು ಹಾಳಾಗಿತ್ತು.

ಇದನ್ನೂ ಓದಿ:ಶಿವಮೊಗ್ಗ ಗಲಾಟೆ: ಹರಿಹರ ಬ್ರಹ್ಮ ಬಂದರೂ ಹಿಂದುತ್ವ ಹತ್ತಿಕ್ಕಲು ಆಗುವುದಿಲ್ಲ; ಶಾಸಕ ಚನ್ನಬಸಪ್ಪ

ಇನ್ನುಗಲಾಟೆ ಕುರಿತು ಸೋಶಿಯಲ್​ ಮೀಡಿಯಾದಲ್ಲಿ ಊಹಾಪೋಹ ಹರಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಸ್​ಪಿ ಹೇಳಿದ್ದರು. ಈ ಘಟನೆಗೆ ಸಂಬಂಧಿಸದಂತೆ ರಾಗಿಗುಡ್ಡದಲ್ಲಿ ಯಾರೋ ಒಬ್ಬರನ್ನು ಎನ್ ಕೌಂಟರ್ ಮಾಡಲಾಗಿದೆ ಎನ್ನುವ ಊಹಾಪೋಹ ಹರಿದಾಡಿತ್ತು. ಈ ಹಿನ್ನಲೆ ಆ ರೀತಿ ಊಹಾಪೋಹಗಳ ಕುರಿತು ಈಗಾಗಲೇ ನಾವು ಸ್ಪಷ್ಟನೆಯನ್ನ ಪಡೆದುಕೊಂಡಿದ್ದೇವೆ. ಸಾರ್ವಜನಿಕರು ಯಾವುದೇ ಊಹಾಪೋಹಗಳಿಗೆ ಕಿವಿಗೊಡುವ ಅವಶ್ಯಕತೆ ಇಲ್ಲ ಎಂದಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Sun, 8 October 23

Follow Us
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?