ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು ಮುಂಗೈ ತೆಗೆದ ವೈದ್ಯರು, ಇನ್ನೂ ಜಡ್ಡುಗಟ್ಟಿರುವ ಬೆಸ್ಕಾಂ ಅಧಿಕಾರಿಗಳು

ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ.

ಹೊಲದಲ್ಲಿ ಬಾಲಕನಿಗೆ ವಿದ್ಯುತ್ ಶಾಕ್ ಪ್ರಕರಣ: ಬೆರಳುಗಳು  ಮುಂಗೈ ತೆಗೆದ ವೈದ್ಯರು, ಇನ್ನೂ ಜಡ್ಡುಗಟ್ಟಿರುವ ಬೆಸ್ಕಾಂ ಅಧಿಕಾರಿಗಳು
ಬಾಲಕನಿಗೆ ವಿದ್ಯುತ್ ಶಾಕ್; ಬೆರಳುಗಳು ಮುಂಗೈ ಕಳೆದುಕೊಂಡ ಬಾಲಕ
Follow us
| Updated By: ಆಯೇಷಾ ಬಾನು

Updated on:Jan 09, 2024 | 3:55 PM

ಶಿವಮೊಗ್ಗ, ಜ.09: ರಾಜ್ಯದಲ್ಲಿ ಈಗಾಗಲೇ ಅನೇಕ ವಿದ್ಯುತ್ ಅವಘಡಗಳಲ್ಲಿ (Electrocution) ಸಾವು ನೋವು ಸಂಭವಿಸಿದೆ. ಆದರೆ ಶಿವಮೊಗ್ಗದಲ್ಲಿ (Shivamogga) ನಡೆದ ಘಟನೆ ಎಂತವರ ಕಣ್ಣಲ್ಲೂ ನೀರು ತರಿಸುವಂತಿದೆ. ತಾಯಿ ಜೊತೆ ಗದ್ದೆಗೆ ಹೋಗಿದ್ದ ಬಾಲಕನು ವಿದ್ಯುತ್ ಕಂಬದಲ್ಲಿ ನೇತು ಬಿದ್ದ ತಂತಿಯಿಂದ ವಿದ್ಯುತ್ ಶಾಕ್ ಹೊಡೆಸಿಕೊಂಡಿದ್ದಾನೆ. ಈ ಶಾಕ್ ಗೆ ತುತ್ತಾಗಿದ್ದ ವಿಕಲಚೇತನ ಬಾಲಕನ ಕೈ ಮತ್ತು ಕಾಲಿನ ಬೆರಳು ಕಟ್ ಮಾಡಿ ಆಪರೇಷನ್ ಮಾಡಲಾಗಿದೆ. ಬಾಲಕನ ರೋಧನೆ, ತಾಯಿಯ ಅಳಲು ಕಲ್ಲು ಹೃದಯಕ್ಕೂ ಕಣ್ಣೀರು ತರಿಸುವಂತಿದೆ. ಯಾರೋ ಮಾಡಿದ ತಪ್ಪಿಗೆ 11 ವರ್ಷದ ಬಾಲಕನ ಜೀವನಕ್ಕೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ವಿದ್ಯುತ್ ಶಾಕ್ ಹೊಡೆತಕ್ಕೆ ಕೈ ಮತ್ತು ಕಾಲಿನ ಮೂರು ಬೆರಳು ಕಳೆದುಕೊಂಡ ಬಾಲಕನ ನೋವಿನ ಕಥೆ ಇಲ್ಲಿದೆ ಓದಿ.

ದೀಲಿಪ್ ಎಂಬ 11 ವರ್ಷದ ದಲಿತ ವಿಕಲಚೇತನ ಬಾಲಕ ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಯ ಬೆಡ್ ಮೇಲೆ ಮಲಗಿ ಚಿತ್ರಹಿಂಸೆ ಅನುಭವಿಸುತ್ತಿದ್ದಾನೆ. ದಿಲೀಪ್ ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹೊಸ ಜೋಗ್ ಗ್ರಾಮದ ನಿವಾಸಿ. ಇದೇ ಗ್ರಾಮದಲ್ಲಿ ಡಿ. 3 ರಂದು ತಾಯಿ ಜೊತೆ ಗದ್ದೆಗೆ ಹೋದಾಗ ನೇತು ಬಿದ್ದ ವಿದ್ಯುತ್ ಕಂಬದ ತಂತಿಯಿಂದ ಬಾಲಕನಿಗೆ ಶಾಕ್ ಹೊಡೆದಿತ್ತು. ಈ ಶಾಕ್ ಹೊಡೆದ ಪರಿಣಾಮ ಆತನ ಬಲಗೈ ಮತ್ತು ಎಡಗಾಲಿಗೆ ಗಂಭೀರ ಗಾಯವಾಗಿತ್ತು. ಕೂಡಲೇ ಬಾಲಕನನ್ನು ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಕೈ ಮತ್ತು ಕಾಲಿನ ಮೂರು ಬೆರಳನ್ನು ಉಳಿಸಿಕೊಳ್ಳುವ ವೈದ್ಯರ ಪ್ರಯತ್ನ ವಿಫಲವಾಗಿದೆ. ಗಾಯ ದಿನೇ ದಿನೇ ಹೆಚ್ಚಾಗಿ ಗ್ಯಾಂಗರೀನ್ ಶುರುವಾಗಿತ್ತು. ಈ ಹಿನ್ನಲೆಯಲ್ಲಿ ವೈದ್ಯರು ಡಿ. 6 ರಂದು ಬಲಗೈ ಪೂರ್ಣ ಕಟ್ ಮಾಡಿದ್ದಾರೆ. ಮತ್ತು ಎಡಗಾಲಿನ ಮೂರು ಬೆರಳು ಕಟ್ ಮಾಡಿ ಆಪರೇಷನ್ ಮಾಡಿದ್ದಾರೆ.

ಇದನ್ನೂ ಓದಿ:  ಮತ್ತೊಂದು ವಿದ್ಯುತ್ ಅವಘಡ.. ವಿಕಲಚೇತನ ಬಾಲಕನಿಗೆ ಹೈ ಕರೆಂಟ್ ಶಾಕ್, ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿ, ಹೆತ್ತವರ ಕಣ್ಣೀರು

ಈ ಆಪರೇಶನ್ ಬಳಿಕ ಮಗು ಈಗ ಬೆಡ್ ಮೇಲೆ ಒದ್ದಾಡುತ್ತಿದೆ. ಆಪರೇಷನ್ ಬಳಿಕ ನೋವು ತಡೆದುಕೊಳ್ಳಲು ಆಗುತ್ತಿಲ್ಲ. ಚಿಕಿತ್ಸೆ ಮತ್ತು ಡ್ರೆಸ್ಸಿಂಗ್ ಮಾಡುವ ಸಂದರ್ಭದಲ್ಲಿ ಬಾಲಕನು ನೋವಿನಿಂದ ಒದ್ದಾಡುತ್ತಿದ್ದಾನೆ. ಆ ನೋವು ತಾಳಲಾರದೆ ನನ್ನನ್ನು ಸಾಯಿಸಿ ಬಿಡಿ ಎಂದು ವೈದ್ಯರ ಎದುರು ಕಣ್ಣೀರು ಹಾಕಿ ಬೇಡಿಕೊಳ್ಳುತ್ತಿದ್ದಾನೆ. ಇದನ್ನು ನೋಡಿದ ತಾಯಿ ಕಣ್ಣೀರು ಹಾಕಿ ಬೇಸರ ಹೊರಹಾಕುತ್ತಿದ್ದಾರೆ. ತಂದೆ ಇಲ್ಲದ ತಬ್ಬಿಲಿ ಮಗನಿಗೆ ಈ ರೀತಿ ಅನ್ಯಾಯವಾಗಿದೆ. ಬೆಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಗೆ ಈ ಅವಘಡ ನಡೆದಿದೆ. ತಮ್ಮ ಕುಟುಂಬಕ್ಕೆ ನ್ಯಾಯಬೇಕು. ಸರಕಾರವು ಪರಿಹಾರ ನೀಡಲು ಆಗದಿದ್ದರೇ ನಮ್ಮ ಕುಟುಂಬಕ್ಕೆ ವಿಷ ಕೊಟ್ಟು ಬಿಡಿ ಎಂದು ಬಾಲಕನ ತಾಯಿ ಹತಾಶಳಾಗಿ ಸರಕಾರದ ವಿರುದ್ದ ತನ್ನ ನೋವು ಹೊರಹಾಕಿದ್ದಾರೆ. ಬಾಲಕ ಕೂಡಾ ತಾನು ಐದನೇ ಕ್ಲಾಸ್ ವ್ಯಾಸಾಂಗ ಮಾಡುತ್ತಿದ್ದೆ. ದುರ್ಘಟನೆಯಲ್ಲಿ ನನ್ನ ಬಲಗೈ ಹೋಗಿದೆ. ನನಗೆ ಕೃತಕ ಕೈಗೆ ಸರಕಾರ ವ್ಯವಸ್ಥೆ ಮಾಡಿಕೊಡಬೇಕು. ನಾನು ವಿದ್ಯಾಭ್ಯಾಸ ಮುಂದುವರೆಸುತ್ತೇನೆ. ಓದಿ ದೊಡ್ಡ ವ್ಯಕ್ತಿ ಆಗುತ್ತೇನೆ. ನನಗೆ ಸರಕಾರದ ಸಹಾಯಬೇಕೆಂದು ಬಾಲಕ ಕಣ್ಣೀರು ಹಾಕಿದ್ದಾನೆ.

ಬಾಲಕನಿಗೆ ಶಾಕ್ ಹೊಡೆದು ಇಷ್ಟೆಲ್ಲಾ ಅವಾಂತರ ಆದ್ರೂ ಸ್ಥಳೀಯ ಶಾಸಕ ಶಾಂತನಗೌಡ ಸೇರಿದಂತೆ ಯಾವುದೇ ಆಧಿಕಾರಿಗಳು ಭೇಟಿ ನೀಡಿ ಯಾವುದೇ ಭರವಸೆ ಕುಟುಂಬಕ್ಕೆ ನೀಡಿಲ್ಲ. 10 ವರ್ಷ ಹಿಂದೆ ಮಗುವಿನ ತಂದೆ ಮೃತಪಟ್ಟಿದ್ದಾರೆ. ಸದ್ಯ ದೊಡ್ಡಪ್ಪ ವಿಜಯ ನಾಯ್ಕ, ತಮ್ಮನ ಹೆಂಡತಿ ಮತ್ತು ಇಬ್ಬರು ಮಕ್ಕಳನ್ನು ನೋಡಿಕೊಳ್ಳುತ್ತಿದ್ದಾರೆ. ಈ ನಡುವೆ ಬೇಸ್ಕಾಂ ಅಧಿಕಾರಿಗಳ ಬೇಜವಾಬ್ದಾರಿಯಿಂದ ಈ ಅನಾಹುತ ಸಂಭವಿಸಿದೆ. 11 ಕೆ.ವಿ ಭಾರದ ತಂತಿಗಳನ್ನು ಆ ಕಂಬಕ್ಕೆ ಹಾಕಿದ್ದರಿಂದ ಅವು ಜೋತು ಬಿದ್ದಿದ್ದವು. ಈ ಸಮಸ್ಯೆ ಕುರಿತು ಬೆಸ್ಕಾಂ ಅಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದ್ರೂ ಅವರು ಯಾವುದೇ ಕ್ರಮ ತೆಗೆದುಕೊಂಡಿರಲಿಲ್ಲ. ತಮ್ಮ ಮಗ ಗದ್ದೆಯಲ್ಲಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಜೋತು ಬಿದ್ದ ತಂತಿಯಿಂದ ವಿದ್ಯುತ್ ಹರಿದು ಆತ ಗಂಭೀರವಾಗಿ ಗಾಯಗೊಂಡಿದ್ದನು. ಘಟನೆ ನಡೆದು ಒಂದು ತಿಂಗಳು ಕಳೆದು ಬಾಲಕನಿಗೆ ಆಪರೇಷನ್ಆದ್ರೂ ಯಾರು ತಿರುಗಿ ನೋಡಿಲ್ಲ. ನಿತ್ಯ ಕಣ್ನೀರಿನಲ್ಲಿ ಕುಟುಂಬಸ್ಥರು ಕೈತೊಳೆದುಕೊಳ್ಳುತ್ತಿದ್ದಾರೆ. ರೈತಾಪಿ ಕುಟುಂಬದ ಪರಿಸ್ಥಿತಿ ಹೀಗಾಗಿದೆ. ಬಡ ರೈತರು ಅಂದ್ರೆ ಸರಕಾರಕ್ಕೆ ಬೆಲೆ ಇಲ್ಲದಂತಾಗಿದೆ. ರೈತ ಬಡ ಮಕ್ಕಳಿಗೆ ಇಷ್ಟೊಂದು ಸಮಸ್ಯೆ ಆದ್ರೂ ದಾವಣಗೆರೆಯ ಜಿಲ್ಲೆಯ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಗಪ್ ಚುಪ್ ಆಗಿರುವುದಕ್ಕೆ ಗಾಯಾಳು ಬಾಲಕನ ದೊಡ್ಡಪ್ಪ ವಿಜಯ್ ನಾಯ್ಕ್ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಸರಕಾರವು ಚುರುಕಾಗಿ ಜನರ ಸಮಸ್ಯೆಗಳಿಗೆ ಸ್ಪಂಧಿಸುತ್ತದೆ ಎನ್ನುವ ಬಡವರ ಲೆಕ್ಕಾಚಾರ ಸುಳ್ಳಾಗಿದೆ. ವಿದ್ಯುತ್ ಅವಘಡ ನಡೆದು ಒಂದು ತಿಂಗಳಾದ್ರೂ ಯಾರು ಗಮನ ಹರಿಸಿಲ್ಲ. ಇನ್ನೂ ಆಪರೇಶನ್ ಬಳಿಕ ಬಾಲಕನ ಬಲ ಕೈ ಮತ್ತು ಕಾಲಿನ ಮೂರು ಬೆರಳು ಇಲ್ಲದಂತಾಗಿದೆ. ಇಷ್ಟೊಂದು ಕಷ್ಟ ನೋವಿನಲ್ಲಿರುವ ಕುಟುಂಬಕ್ಕೆ ಸರಕಾರದಿಂದ ಯಾವುದೇ ಸಹಾಯ ಸಿಗುತ್ತಿಲ್ಲ. ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಲ್ಲಿ ಮಾನವೀಯತೆ ಈ ಪ್ರಕರಣದಲ್ಲಿ ಸತ್ತು ಹೋಗಿರುವುದು ಮಾತ್ರ ವಿಪರ್ಯಾಸ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 3:33 pm, Tue, 9 January 24

45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
45 ಲಕ್ಷ ರೂ. ನೋಟುಗಳಿಂದ ದುರ್ಗಾದೇವಿಗೆ ಅಲಂಕಾರ! ಬೆರಗಾದ ಭಕ್ತರು
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ