AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಓಪನ್: ಅವಹೇಳನಕಾರಿ ಪೋಸ್ಟ್

ಸಚಿವ ಮಧು ಬಂಗಾರಪ್ಪ ಅವರ ಹೆಸರಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ ಖಾತೆ ತೆರೆಯಲಾಗಿದ್ದು, ಕಾಂಗ್ರೆಸ್​, ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಫೋಟೋ ಹಾಕಿ ಅವಹೇಳನಕಾರಿ ಪೋಸ್ಟ್​ ಹಾಕಿದ್ದಾರೆ. ಈ ಬಗ್ಗೆ ಶಿವಮೊಗ್ಗ ಸಿಇಎನ್‌ ಕ್ರೈಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಸಚಿವ ಮಧು ಬಂಗಾರಪ್ಪ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ಓಪನ್: ಅವಹೇಳನಕಾರಿ ಪೋಸ್ಟ್
ಸಚಿವ ಮಧು ಬಂಗಾರಪ್ಪ
Follow us
Basavaraj Yaraganavi
| Updated By: ರಮೇಶ್ ಬಿ. ಜವಳಗೇರಾ

Updated on:Nov 28, 2023 | 7:05 AM

ಶಿವಮೊಗ್ಗ,(ನವೆಂಬರ್ 28): ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu bangarappa) ಅವರ ಹೆಸರಲ್ಲಿ ಫೇಸ್‌ಬುಕ್‌ನಲ್ಲಿ ನಕಲಿ (Fake Facebook) ಖಾತೆ ತೆರೆದು ಅವರ ವ್ಯಕ್ತಿತ್ವ, ಪಕ್ಷ ಚುಟುವಟಿಕೆಗೆ ಧಕ್ಕೆ ಬರುವಂತಹ ಪೋಸ್ಟ್‌ಗಳನ್ನು ಹಾಕುತ್ತಿರುವುದು ಬೆಳಕಿಗೆ ಬಂದಿದೆ. ‘ಶ್ರೀಮಾನ್ಯ ಮಧು ಬಂಗಾರಪ್ಪ ಜಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವರು’ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಗ್ರೂಪ್‌ ತೆರೆದು ಡಿಪಿಗೆ ಸಚಿವರ ಫೋಟೋ ಬಳಸಿ ಹಲವು ಪೋಸ್ಟ್‌ಗಳನ್ನು ಹಾಕಲಾಗಿದೆ.

ಮುಖ್ಯವಾಗಿ ಎಐಸಿಸಿ ಮುಖಂಡರಾದ ಸೋನಿಯಾಗಾಂಧಿ, ರಾಹುಲ್‌ ಅವರು ಹಣ ಲೂಟಿ ಹೊಡೆದಿದ್ದಾರೆ ಎಂದೂ, ರಾಜ್ಯ ಕಾಂಗ್ರೆಸ್‌ ಸರಕಾರದ ಗ್ಯಾರಂಟಿ ಯೋಜನೆಗಳನ್ನು ಅಪಹಾಸ್ಯ ಮಾಡಿದಂತೆ ಪೋಸ್ಟ್‌ಗಳಿವೆ. ಆ ಮೂಲಕ ಸಚಿವರಿಗೆ ಕೆಟ್ಟ ಹೆಸರು ಬರುವಂತೆ ಮತ್ತು ಅವರ ಘನತೆಗೆ ಧಕ್ಕೆ ತರುವಂತೆ ಮಾಡಲಾಗಿದೆ. ಕುಂದಾಪುರ ವಿರಾಟ ಹೆಸರಿನ ಫೇಸ್​ಬುಕ್ ಬಳಕೆದಾರರಿಂದ ದುರ್ಬಳಕೆ ಮಾಡಿದ್ದಾರೆ ಎನ್ನುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: ಶಿವಮೊಗ್ಗ: ಆರು ವರ್ಷ ಪ್ರೀತಿಸಿ ಕೈಕೊಟ್ಟ ಯುವಕ, ವಿಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿದ ಯುವತಿ

ಅಚ್ಚೆದಿನ್ ವಿಚಾರವಾಗಿ ಸಚಿವರ ಹಾಗೂ ಕಾಂಗ್ರೆಸ್ ಪಕ್ಷದ ವಿರುದ್ಧವಾದಂತಹ ಫೋಸ್ಟ್​ ಹಾಕಲಾಗಿದೆ. ಯೇ ಹೈ ಅಚ್ಚೇ ದಿನ್ ದೇಶವನ್ನು ನುಂಗಿ ನೀರು ಕುಡಿದಿದ್ದ ಕಾಂಗ್ರೆಸ್​. ಬಹಳ ಜನ ಅಚ್ಚೇ ದಿನ್ ಎಲ್ಲಿ ಅಂತ ಕೇಳಿದ್ರು .ಇದು ಅಚ್ಚೇ ದಿನ್ ನೋಡಿ ಖುಷಿ ಪಡಿ ಎಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಫೋಟೋ ಹಾಕಿ ಅವಹೇಳನ ಮಾಡಲಾಗಿದೆ.

ಈ ಬಗ್ಗೆ ಕಾಂಗ್ರೆಸ್ ಮುಖಂಡ ಜಿಡಿ ಮಂಜುನಾಥ್ ಎನ್ನುವರು ಶಿವಮೊಗ್ಗದ ಸಿಇಎನ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಐಟಿ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:04 am, Tue, 28 November 23

ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ವಿಮಾನದಲ್ಲಿ ಪ್ರಯಾಣಿಸುತ್ತಿದ್ದವರೆಲ್ಲ ಸತ್ತಿರುವ ಶಂಕೆಯಿದೆ: ಪರಮೇಶ್ವರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ದುರಂತದಲ್ಲಿ ಮಡಿದವರು ಭಾರತೀಯರು; ಕನ್ನಡ, ತೆಲುಗು ತಾರತಮ್ಯ ಬೇಡ: ಶಿವಕುಮಾರ್
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಏರ್ ಇಂಡಿಯಾ ವಿಮಾನ ಪತನವಾದ ಜಾಗದಲ್ಲಿ ಬಿದ್ದ ಪ್ರಯಾಣಿಕರ ಲಗೇಜ್ ರಾಶಿ
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್
ಚಾಲಕನ ಹುಚ್ಚು ಸಾಹಸ: ಹಳ್ಳದಲ್ಲಿ ಸಿಲುಕಿದ ಜನರಿದ್ದ ಟ್ರ್ಯಾಕ್ಟರ್