AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Edited By: |

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್