AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Edited By: |

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?