AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Edited By: ಆಯೇಷಾ ಬಾನು|

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ