AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Edited By: |

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ