AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Updated By: ಆಯೇಷಾ ಬಾನು|

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ