AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್

ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
10 ರೂ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ 52 ರೂ ಟಿಕೆಟ್, ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್
TV9 Web
| Edited By: |

Updated on: Jan 02, 2022 | 1:20 PM

Share

ಶಿವಮೊಗ್ಗ: ನಮ್ಮ ಸುತ್ತಮುತ್ತಲು ನಡೆಯುವ ಕೆಲವೊಂದು ಘಟನೆಗಳು ನಮಗೆ ಅಚ್ಚರಿ ಮೂಡಿಸುತ್ತವೆ. ಸದ್ಯ ಶಿವಮೊಗ್ಗ ಜಿಲ್ಲೆಯಲ್ಲಿ ಇಂತಹದ್ದೇ ಒಂದು ಸಂಗತಿಯು ನಡೆದಿದ್ದು ಅದು ಆಶ್ಚರ್ಯ ಮತ್ತು ತಮಾಷೆಯಿಂದ ಕೂಡಿದೆ. ಕೇವಲ 10 ರೂಪಾಯಿ ಕೊಟ್ಟು ಖರೀದಿಸಿದ್ದ ಕೋಳಿ ಮರಿಗೆ ಬರೋಬ್ಬರಿ 52 ರೂ. ಬಸ್ ಚಾರ್ಜ್ ನೀಡಲಾಗಿದೆ.

ಶಿವಮೊಗ್ಗ ಜಿಲ್ಲೆಯ ಹೊಸನಗರ ಪಟ್ಟಣದ ಬಸ್ ನಿಲ್ದಾಣದಲ್ಲಿ ಇಂತಹದೊಂದು ಘಟನೆ ನಡೆದಿದೆ. ಹೊಸನಗರ ಪಟ್ಟಣದಿಂದ ಬೈಂದೂರಿನ ಶಿರೂರಿಗೆ ಹೊರಟಿದ್ದ ಅಲೆಮಾರಿ ಕುಟುಂಬವೊಂದು ಸರ್ಕಾರಿ ಬಸ್ ಹತ್ತಿದ್ದರು. ಬಸ್‌ನ ಕಂಡಕ್ಟರ್ ಬಂದು ಎಲ್ಲಿಗೆ? ಎಂದು ಕೇಳಿದಾಗ ಶಿರೂರು ಹೋಗಬೇಕು ಮೂರು ಟಿಕೆಟ್ ಕೊಡಿ ಎಂದು ಹೇಳಿದ್ದಾರೆ. ಈ ವೇಳೆ ಪುಟ್ಟ ಚೀಲದಿಂದ ಚಿವ್… ಚಿವ್ ಎಂದು ಶಬ್ದ ಬರುತ್ತಿದ್ದನ್ನು ಆಲಿಸಿದ ಬಸ್ ಕಂಡಕ್ಟರ್ ಅದು ಏನು? ಎಂದು ಪ್ರಶ್ನಿಸಿದ್ದಾರೆ. ಆಗ ಅದು ಒಂದು ಕೋಳಿ ಮರೀರಿ ಎಂದು ಅಲೆಮಾರಿ ಕುಟುಂಬ ಪ್ರತಿಕ್ರಿಯೆ ನೀಡಿದೆ.

ಕೂಡಲೇ ಕಂಡಕ್ಟರ್ ಅದಕ್ಕೂ ಟಿಕೆಟ್ ಮಾಡಬೇಕು. ಅದಕ್ಕೂ ರೂಲ್ಸ್ ಇದೆ ಎಂದು ಅರ್ಧ ಚಾರ್ಜ್ ಮಾಡಿ, ಬರೋಬ್ಬರಿ 52 ರೂಪಾಯಿ ತೆಗೆದುಕೊಂಡು ಕೋಳಿ ಮರಿಗೂ ಆಫ್ ಟಿಕೆಟ್ ಕೊಟ್ಟಿದ್ದಾರೆ. ಮುಖಮುಖ ನೋಡಿಕೊಂಡ ಆ ಮೂವರು ಬೇರೆ ದಾರಿ ಕಾಣದೆ ಟಿಕೆಟ್ ತೆಗೆದುಕೊಂಡಿದ್ದಾರೆ. ಶಿರಸಿ ಸಿದ್ದಾಪುರದಿಂದ ಬಂದ ಆ ಕುಟುಂಬ ರೂ.10 ಕೊಟ್ಟು ಮರಿ ತಂದಿದ್ದರು. ಬಸ್‌ನ ಟಿಕೆಟ್ ದರ ನೋಡಿ ಮೂಗಿಗಿಂತ ಮೂಗುತಿ ಭಾರ ಅಂದಂಗಾಯ್ತು. ಸದ್ಯ ಈ 10 ರೂಪಾಯಿ ಕೋಳಿ ಮರಿಗೆ ಟಿಕೆಟ್ ಪಡೆದಿರುವ ದೃಶ್ಯ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜ.4ಕ್ಕೆ ಪ್ರಧಾನಿ ಮೋದಿ ತ್ರಿಪುರಾ ಭೇಟಿ; ಭಾರತ-ಬಾಂಗ್ಲಾದೇಶ ಗಡಿಯಲ್ಲಿ ಭದ್ರತೆ ಇನ್ನಷ್ಟು ಬಿಗಿಗೊಳಿಸಿದ ಬಿಎಸ್​ಎಫ್​

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?