AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಶಿವಮೊಗ್ಗ ವನ್ಯಜೀವಿ ವಿಭಾಗದ ಪುರದಾಳ್​ ಮೀಸಲು ಅರಣ್ಯ ವ್ಯಾಪ್ತಿಯಲ್ಲಿನ ಅಡಿಕೆ ತೋಟದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಕೃಷಿ ಕಾರ್ಮಿಕ ಕಾಡಾನೆ ದಾಳಿಯಲ್ಲಿ ಮೃತಪಟ್ಟಿದ್ದಾನೆ.

ಶಿವಮೊಗ್ಗ: ಕಾಡಾನೆ ದಾಳಿಗೆ ಕೃಷಿ ಕಾರ್ಮಿಕ ಸಾವು; ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on: Aug 26, 2024 | 11:45 AM

Share

ಶಿವಮೊಗ್ಗ, ಆಗಸ್ಟ್​ 26: ಕಾಡಾನೆ (Elephant) ದಾಳಿಗೆ 41 ವರ್ಷದ ಕೃಷಿ ಕಾರ್ಮಿಕ ಮೃತಪಟ್ಟಿರುವ ಘಟನೆ ಶಿವಮೊಗ್ಗ (Shivamogga) ವನ್ಯಜೀವಿ ವಿಭಾಗದ ಪುರದಾಳ್​ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ನಡೆದಿದೆ. ಗದಗ (Gadag) ಜಿಲ್ಲೆಯ ಲಕ್ಷ್ಮೇಶ್ವರ ಮೂಲದ ಹನುಮಂತಪ್ಪ ಮೃತದುರ್ದೈವಿ. ಹನುಮಂತಪ್ಪ ಕಳೆದ ಐದು ವರ್ಷಗಳಿಂದ ಅಡಿಕೆ ತೋಟದಲ್ಲಿ ಕಾವಲುಗಾರನಾಗಿ ಕೆಲಸ ಮಾಡುತ್ತಿದ್ದನು.

ಘಟನೆ ಸಂಬಂಧ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಸನ್ನ ಕೃಷ್ಣ ಪಟಗಾರ ಮಾತನಾಡಿ, ಹನುಮಂತಪ್ಪ ಅವರು ಅಶ್ಫಾಕ್ ಅಹ್ಮದ್ ಖಾನ್ ಒಡೆತನದ ಎಸ್ಟೇಟ್‌ನಲ್ಲಿ ಕೆಲಸ ಮುಗಿಸಿ ಆಲದೇವರ ಹೊಸೂರಿನ ಮನೆಗೆ ವಾಪಸಾಗುತ್ತಿದ್ದಾಗ ಆನೆ ದಾಳಿ ಮಾಡಿದೆ. ಶವಪರೀಕ್ಷೆ ನಡೆಸಲಾಗಿದ್ದು, ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ ಎಂದು ತಿಳಿಸಿದರು.

ಘಟನೆ ಬಗ್ಗೆ ತನಿಖೆ ನಡೆಸಲಾಗುತ್ತಿದೆ. ಹನುಮಂತಪ್ಪ ಅವರ ಕುಟುಂಬಕ್ಕೆ ಕಾನೂನು ಪ್ರಕಾರ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಇದನ್ನೂ ಓದಿ: ಬೆಂಗಳೂರು: ಅರಣ್ಯ ಇಲಾಖೆಯ ಭರ್ಜರಿ ಕಾರ್ಯಾಚರಣೆ; ಆನೆ ದಂತ ಚೋರರ ಬಂಧನ

ಸ್ಥಳೀಯ ನಿವಾಸಿ ಬಸವರಾಜೇಂದ್ರ ಮಾತನಾಡಿ, ಹನುಮಂತಪ್ಪ ಸಾಮಾನ್ಯವಾಗಿ ರಾತ್ರಿ 7 ಗಂಟೆ ಸುಮಾರಿಗೆ ಮನೆಗೆ ವಾಪಾಸ್​ ಆಗುತ್ತಿದ್ದರು. ಆದರೆ ಭಾನುವಾರ ರಾತ್ರಿ ಎಟ್ಟೊತ್ತಾದರೂ, ಮನೆಗೆ ಹಿಂದಿರುಗಲಿಲ್ಲ. ಇದರಿಂದ ಹನುಮಂತಪ್ಪ ಅವರ ಪತ್ನಿ ಆತಂಕಗೊಂಡಿದ್ದರು. ಬಳಿಕ, ನಾವು ಹುಡುಕಾಟ ನಡೆಸಿದಾಗ ಒಂದು ಗಂಟೆಯ ನಂತರ ಹುಮಂತ್ತಪ್ಪ ಅವರ ಮೃತ ದೇಹವ ಪತ್ತೆಯಾಯಿತು ಎಂದು ಹೇಳಿದರು.

ಆನೆಗಳು ಪದೇ ಪದೇ ನಾಡಿಗೆ ಬಂದು ಬಾಳೆ, ಭತ್ತ, ಅಡಕೆ, ತೆಂಗು ಮುಂತಾದ ಬೆಳೆಗಳನ್ನು ಹಾನಿ ಮಾಡುತ್ತಿವೆ. ಆನೆಗಳ ಹಾವಳಿಯನ್ನು ನಿಯಂತ್ರಿಸಲು ಅರಣ್ಯ ಅಧಿಕಾರಿಗಳಿಗೆ ಸಾಕಷ್ಟು ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್