AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ವಿರುದ್ಧ ಫೇಸ್​ಬುಕ್​​ನಲ್ಲಿ ಅವಹೇಳನಾಕರಿಯಾಗಿ ಕಾಮೆಂಟ್​ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ. 

ಶಿವಮೊಗ್ಗ: ಕಾಂಗ್ರೆಸ್​ ಕಾರ್ಯಕರ್ತೆ ವಿರುದ್ಧ ಅವಹೇಳನಕಾರಿ ಪೋಸ್ಟ್​​; ಚಕ್ರವರ್ತಿ ಸೂಲಿಬೆಲೆ ವಿರುದ್ಧ ಎಫ್​ಐಆರ್​ ದಾಖಲು
ಅವಹೇಳನಕಾರಿ ಕಾಮೆಂಟ್​ (ಎಡಚಿತ್ರ) ಚಕ್ರವರ್ತಿ ಸೂಲಿಬೆಲೆ (ಬಲಚಿತ್ರ)
Basavaraj Yaraganavi
| Edited By: |

Updated on:Aug 28, 2023 | 12:34 PM

Share

ಶಿವಮೊಗ್ಗ ಆಗಸ್ಟ್​ 28: ಕೆಪಿಸಿಸಿ (KPCC) ಸಾಮಾಜಿಕ ಜಾಲತಾಣ (Social Media) ವಿಭಾಗದ ಉಪಾಧ್ಯಕ್ಷೆ ವಿರುದ್ಧ ಫೇಸ್​ಬುಕ್​ನಲ್ಲಿ (Fecbook) ​ಅವಹೇಳನಕಾರಿಯಾಗಿ ಕಾಮೆಂಟ್​​ ಮಾಡಿದ ಆರೋಪದಡಿ ಚಿಂತಕ ಚಕ್ರವರ್ತಿ ಸೂಲಿಬೆಲೆ (Chakravarti Sulibele) ಅವರ ವಿರುದ್ಧ ಶಿವಮೊಗ್ಗದ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ರಾಜ್ಯ ಉಪಾಧ್ಯಕ್ಷೆ ಸೌಗಂಧಿಕಾ ರಘುನಾಥ್​ಗೆ ಅವರಿಗೆ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರು ಫೇಸ್​​ಬುಕ್​ನಲ್ಲಿ ಅವಾಚ್ಯ ಶಬ್ದದಿಂದ ನಿಂಧಿಸಿರುವ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಸೌಂಗಧಿಕಾ ಅವರು ಪಕ್ಷದ ಕಾರ್ಯಕರ್ತೆಯರೊಂದಿಗೆ ವಿನೋಬನಗರ ಪೊಲೀಸ್‌ ಠಾಣೆ ತೆರಳಿ ದೂರು ದಾಖಲಿಸಿದ್ದಾರೆ. ಐಪಿಸಿ ಸೆಕ್ಷನ್ 504, 509ರ ಅಡಿ ಎಫ್​ಐಆರ್​ ದಾಖಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಪ್ರೀತಿಗೆ ಹುಡುಗಿ ಮನೆಯವರ ನಿರಾಕರಣೆ; ಪ್ರೇಯಸಿ ಮನೆ ಹತ್ತಿರ ಹೋಗಿದ್ದ ಪ್ರೀಯಕರನಿಗೆ ಹಿಗ್ಗಾ ಮುಗ್ಗಾ ಥಳಿತ

ಚಂದ್ರಯಾನ 3 ಯಶಸ್ವಿಯಾಗಲು ದೇವರಿಗೆ ಕೈ ಮುಗಿದು ಫೋಟೋ ಹಾಕಿ ಎಂದು ಚಕ್ರವರ್ತಿ ಸೂಲಿಬೆಲೆ ಅವರು ಫೇಸ್​ಬುಕ್​​​​ನಲ್ಲಿ ಪೋಸ್ಟ್​ ಹಾಕಿದ್ದರು. ಇದಕ್ಕೆ ಸೌಗಂಧಿಕ ರಘುನಾಥ್ ಅವರು ವಿಜ್ಞಾನಿಗಳ ಶ್ರಮಕ್ಕೆ ಯಶಸ್ಸು ಸಿಗಲಿ ಎಂದು ದೇವರಲ್ಲಿ ಪ್ರಾರ್ಥಿಸಿ. ಆದರೆ ಅದನ್ನು ತೋರಿಕೆಗಾಗಿ ಆಗಲಿ ಅಥವಾ ಫೋಟೋಗಾಗಿ ದೇವರ ಮುಂದೆ ನಿಲ್ಲಬೇಡಿ ಎಂದು  ಪ್ರತಿಕ್ರಿಯಿಸಿರುತ್ತಾರೆ.

ಪ್ರತಿಯಾಗಿ ಚಕ್ರವರ್ತಿ ಸೂಲಿಬೆಲೆ ಅವರು “ನಿನಗೆ ಎಲ್ಲಿ ಯಾಕೆ ಉರಿ ಬಂತು” ಎಂದು ಪ್ರತಿಕ್ರಿಯಿಸಿದ್ದಾರೆ. ಈ ಹಿನ್ನೆಯಲ್ಲಿ ಕಾಂಗ್ರೆಸ್ಸಿನ ಮಹಿಳಾ ಮುಖಾಂಡರಾದ ಸ್ಟೇಲ್ಲಾ ಮಾರ್ಟೀನ್, ಅರ್ಚನಾ, ಸಂಧ್ಯಾರಾಣಿ, ಶಮೀಮ್ ಭಾನು, ಶೋಭಾ, ನಾಗರತ್ನ, ಗ್ಲಾಡಿ, ರಸಿಯ, ಸಲೀಮ ಅವರು ವಿನೋಬನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದರು. ಹಾಗೆಯೇ ಫೇಕ್ ಅಕೌಂಟ್ ಮೂಲಕ ಸಿದ್ದರಾಮಯ್ಯ ಅವರ ಬಗ್ಗೆ ಅಸಭ್ಯವಾಗಿ ಪೋಸ್ಟ್ ಮಾಡಿದವರ ವಿರುದ್ಧವು ದೂರು ದಾಖಲಿಸಲಾಯಿತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 10:04 am, Mon, 28 August 23

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?