AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ

ಶಿವಮೊಗ್ಗದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ 2 ಕೋಮಿನ ಗುಂಪು ನಡುವೆ ನಡುವೆ ವಾಗ್ವಾದ ನಡೆದಿದೆ. ಇದರ ಬೆನ್ನಲ್ಲೇ ಇದೇ ಶಿವಮೊಗ್ಗದ ನಗರದಲ್ಲಿ ತಡರಾತ್ರಿ ಗುಂಪು ಗಲಾಟೆ ನಡೆದಿದ್ದು, ಗಲಾಟೆಯಲ್ಲಿ ಐವರಿಗೆ ಚಾಕುವಿನಿಂದ ಇರಿಯಲಾಗಿದೆ.

Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ
ಸಾಂದರ್ಭಿಕ ಚಿತ್ರ
Basavaraj Yaraganavi
| Edited By: |

Updated on:Sep 22, 2023 | 9:38 AM

Share

ಶಿವಮೊಗ್ಗ, (ಸೆಪ್ಟೆಂಬರ್ 22): ಹಳೇ ವೈಷಮ್ಯದ ಗುಂಪು ಗಲಾಟೆಯಲ್ಲಿ ಐವರಿಗೆ ಚಾಕು ಇರಿದಿರುವ ಘಟನೆ ಶಿವಮೊಗ್ಗದ (Shivamogga) ದ್ರೌಪದಮ್ಮ ಸರ್ಕಲ್​ನಲ್ಲಿ ಸೆಪ್ಟೆಂಬರ್ 21ರ ತಡರಾತ್ರಿ ನಡೆದಿದೆ. ಪವನ್ ಹಾಗೂ ಕಿರಣ್ ಎನ್ನುವರ ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಐವರಿಗೆ ಚಾಕು ಇರಿದಿದ್ದಾರೆ. ಹಲ್ಲೆಗೊಳಗಾದವರನ್ನು ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು ಈ ಬಗ್ಗೆ ಶಿವಮೊಗ್ಗದ ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

ಮತ್ತೊಂದೆಡೆ ಕೇಸರಿ ಪಡೆ ಗಣೇಶ ವಿಸರ್ಜನೆ (Ganesha Visarjane) ಮೆರವಣಿಗೆ ವೇಳೆ ಪಟಾಕಿ ಹೊಡೆಯುವ ವಿಚಾರವಾಗಿ ಎರಡು ಕೋಮಿನ ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಶಿವಮೊಗ್ಗದ (Shivamogga) ಟ್ಯಾಂಕ್ ಮೊಹಲ್ಲಾ ಪ್ರಾರ್ಥನಾ ಮಂದಿರದ ಬಳಿ ಘಟನೆ ನಡೆದಿದೆ. ಎರಡು ಕೋಮಿನ ಗುಂಪು ನಡುವೆ ಮಾತಿನ ಚಕಮಕಿ ಶುರುವಾಗುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ಎಸ್‌ಪಿ ಮಿಥುನ್ ಕುಮಾರ್ ಪರಿಸ್ಥಿತಿ ತಿಳಿಗೊಳಿಸಿದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾದ ಹಿನ್ನೆಲೆಯಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:12 am, Fri, 22 September 23

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ