AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ: ಬಲಭಾಗಕ್ಕೆ ಬಿದ್ದ ಹೂ, 150 ಸ್ಥಾನ ಗೆಲ್ತೇವೆ ಎಂದ ಬಿಎಸ್ ಯಡಿಯೂರಪ್ಪ

ಬಿಎಸ್​ ಯಡಿಯೂರಪ್ಪನವರು ಇಂದು ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮ ಹಿನ್ನೆಲೆ ಶಿಕಾರಿಪುರಕ್ಕೆ ಆಗಮಿಸಿದ್ದು ಈ ವೇಳೆ ದೇವರ ದರ್ಶನಕ್ಕೆ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ.

ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಪ್ರಾರ್ಥನೆ: ಬಲಭಾಗಕ್ಕೆ ಬಿದ್ದ ಹೂ, 150 ಸ್ಥಾನ ಗೆಲ್ತೇವೆ ಎಂದ ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on: Jan 07, 2023 | 2:07 PM

Share

ಶಿವಮೊಗ್ಗ: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರು ದೇವರಿಗೆ ಪೂಜೆ ಸಲ್ಲಿಸುವ ವೇಳೆ ಬಲಭಾಗಕ್ಕೆ ಹೂವು ಬಿದ್ದಿದೆ. ಶಿಕಾರಿಪುರದ ಹುಚ್ಚರಾಯಸ್ವಾಮಿ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ವಿಶೇಷ ಪೂಜೆ ಸಲ್ಲಿಸಿದ್ದ ಯಡಿಯೂರಪ್ಪನವರು ದೇವರಿಗೆ ಕೈ ಮುಗಿದು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈ ವೇಳೆ ದೇವರ ಬಲಭಾಗಕ್ಕೆ ಹೂವು ಬಿದ್ದಿದೆ.

ಬಿಎಸ್​ ಯಡಿಯೂರಪ್ಪನವರು ಇಂದು ಶಿಕಾರಿಪುರದಲ್ಲಿ‌ ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದರು. ಈ ಕಾರ್ಯಕ್ರಮ ಹಿನ್ನೆಲೆ ಶಿಕಾರಿಪುರಕ್ಕೆ ಆಗಮಿಸಿದ್ದು ಈ ವೇಳೆ ದೇವರ ದರ್ಶನಕ್ಕೆ ದೇವಸ್ಥಾನಕ್ಕೆ ಹೋಗಿದ್ದ ವೇಳೆ ಈ ಘಟನೆ ನಡೆದಿದೆ. ಬಿಜೆಪಿ ಬೂತ್ ವಿಜಯ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ ಅವರು ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ 140ರಿಂದ 150 ಸ್ಥಾನ ಗೆಲ್ಲಲಿದೆ. 140-150 ಸ್ಥಾನ ಗೆಲ್ಲುವುದನ್ನು ತಡೆಯಲು ಯಾರಿಂದಲೂ ಆಗಲ್ಲ. ಸೂರ್ಯ ಚಂದ್ರ ಇರುವುದು ಎಷ್ಟು ಸತ್ಯವೋ ಬಿಜೆಪಿ ಬಹುಮತದೊಂದಿಗೆ ಅಧಿಕಾರಕ್ಕೆ ಬರುವುದು ಅಷ್ಟೇ ಸತ್ಯ ಎಂದರು.

ಇದನ್ನೂ ಓದಿ: ಮುಂಬರುವ ಆಸೆಂಬ್ಲಿ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಸ್​ಡಿಪಿಐ!

ಸಿದ್ದರಾಮಯ್ಯಗೆ ತಾವು ನಿಂತಿರುವ ನೆಲವೇ ಕುಸಿಯುತ್ತಿದೆ

ಯಾರೋ ನಾನೇ ಮುಖ್ಯಮಂತ್ರಿ, ನಾನೇ ಮುಖ್ಯಮಂತ್ರಿ ಅಂತ ಬಡಿದಾಡುತ್ತಿದ್ದಾರೋ ಕಾಂಗ್ರೆಸ್ ನಲ್ಲಿ ಅದು ಕೇವಲ ತಿರುಕನ ಕನಸಾಗುತ್ತೆ ಹೊರತು ಅದು ಯಾವುದೇ ಕಾರಣಕ್ಕೂ ಸಾಧ್ಯ ಇಲ್ಲ ಅನ್ನೋದು ಅವರಿಗೂ ಸಹ ಮನವರಿಕೆ ಆಗಿದೆ. ಪ್ರಧಾನಿ ನರೇಂದ್ರ ಮೋದಿಯವರಂತ ನಾಯಕತ್ವ ನಮಗಿರಬೇಕಾದರೇ ಈ ಚುನಾವಣೆಯಲ್ಲಿ ಜಯಭೇರಿ ಪಡೆಯುವುದರಲ್ಲಿ ಯಾವುದೇ ಅನುಮಾನ ಇಲ್ಲ. ಎಲ್ಲಾ ಕಾರ್ಯಕರ್ತರು ಬೂತ್ ಬಲ ಪಡಿಸಿ ಮತದಾರರನ್ನು ಮನವಲಿಸಿ ಮತಗಟ್ಟೆಗೆ ಕರೆದುಕೊಂಡು ಬಂದು ಮತದಾನ ಮಾಡಿಸಬೇಕಿದೆ. ನಾವು ಈ ಬಾರಿ ಜಯಭೇರಿ ಬಾರಿಸಲಿದ್ದೇವೆ ಅನ್ನೋದು ಕಾಂಗ್ರೆಸ್ ನವರಿಗೂ ಸಹ ಮನವರಿಕೆ ಆಗಿದೆ. ಎರಡ್ಮೂರು ದಿನದಲ್ಲಿ ಸಚಿವ ಸಂಪುಟ ವಿಸ್ತರಣೆ ಆಗುತ್ತೆ.

ಎರಡ್ಮೂರು ದಿನದಲ್ಲಿ ಕೇಂದ್ರದಲ್ಲಿ ತೀರ್ಮಾನ ತೆಗೆದುಕೊಳ್ಳುವರಿದ್ದಾರೆ ಯಾರನ್ನು ತೆಗೆದುಕೊಳ್ಳಬೇಕು ಎನ್ನುವುದು ಪ್ರಧಾನಿ, ಕೇಂದ್ರದ ನಾಯಕರಿಗೆ ಬಿಟ್ಟಿದ್ದು. ಸಿದ್ದರಾಮಯ್ಯ ನವರು ತಾವು ನಿಂತಿರುವ ನೆಲವೇ ಕುಸಿಯುತ್ತಿದೆ ಅನ್ನುವ ಅರಿವಿಲ್ಲದೇ ಬಹಳ ಹಗುರವಾಗಿ ಮುಖ್ಯಮಂತ್ರಿಗಳ ಬಗ್ಗೆ ಆರ್​ಎಸ್​ಎಸ್ ಬಗ್ಗೆ ಟೀಕೆ ಮಾಡುತ್ತಿದ್ದಾರೆ. ಇದಕ್ಕೆ ತಕ್ಕಪಾಠವನ್ನು ರಾಜ್ಯದ ಜನ ಕಲಿಸುತ್ತಾರೆ ಎಂದು ಬಿಎಸ್ ಯಡಿಯೂರಪ್ಪ ವಾಗ್ದಾಳಿ ನಡೆಸಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ