ಮಾರುವೇಷದಲ್ಲಿ ದಾಳಿ, ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

ಶಿವಮೊಗ್ಗ: ಅರಣ್ಯ ಜಾಗೃತ ದಳದ ಅಧಿಕಾರಿಗಳು ಮಾರುವೇಷದಲ್ಲಿ ದಾಳಿ ನಡೆಸಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದಾರೆ. ಆರೋಪಿಯಿಂದ ಕಾಡುಕೋಣ ಕೊಂಬು, ಚಿಪ್ಪು, ಹಂದಿಯ ಚಿಪ್ಪು ವಶ ಪಡಿಸಿಕೊಳ್ಳಲಾಗಿದೆ. ಹೊಸನಗರ ತಾಲೂಕಿನ ನಗರ ಸಮೀಪದ ಬ್ರಾಹ್ಮಣವಾಡದಲ್ಲಿ ಮಾರುವೇಷ ತೊಟ್ಟು ವ್ಯಾಪಾರ ಮಾಡುವ ಸೋಗಿನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೃಷ್ಣಮೂರ್ತಿ(47) ಎಂಬ ಆರೋಪಿಯನ್ನ ಬಂಧಿಸಲಾಗಿದೆ. ಆರೋಪಿಯಿಂದ ಕಾಡುಕೋಣದ ಎರಡು ಕೊಂಬು, ಸುಮಾರು ಒಂದುವರೆ ಕೆಜಿ ಮುಳ್ಳು ಹಂದಿಯ ಚಿಪ್ಪು, ಕೃತ್ಯಕ್ಕೆ ಬಳಿಸಿದ ಬೈಕ್, ಒಂದು ನಾಡಬಂದೂಕು, […]

ಮಾರುವೇಷದಲ್ಲಿ ದಾಳಿ, ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿ ಅರೆಸ್ಟ್

Updated on: Feb 05, 2020 | 10:29 AM

ಶಿವಮೊಗ್ಗ: ಅರಣ್ಯ ಜಾಗೃತ ದಳದ ಅಧಿಕಾರಿಗಳು ಮಾರುವೇಷದಲ್ಲಿ ದಾಳಿ ನಡೆಸಿ ನಾಡ ಬಂದೂಕು ತಯಾರಿಸುತ್ತಿದ್ದ ವ್ಯಕ್ತಿಯನ್ನ ಬಂಧಿಸಿದ್ದಾರೆ. ಆರೋಪಿಯಿಂದ ಕಾಡುಕೋಣ ಕೊಂಬು, ಚಿಪ್ಪು, ಹಂದಿಯ ಚಿಪ್ಪು ವಶ ಪಡಿಸಿಕೊಳ್ಳಲಾಗಿದೆ.

ಹೊಸನಗರ ತಾಲೂಕಿನ ನಗರ ಸಮೀಪದ ಬ್ರಾಹ್ಮಣವಾಡದಲ್ಲಿ ಮಾರುವೇಷ ತೊಟ್ಟು ವ್ಯಾಪಾರ ಮಾಡುವ ಸೋಗಿನಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಕೃಷ್ಣಮೂರ್ತಿ(47) ಎಂಬ ಆರೋಪಿಯನ್ನ ಬಂಧಿಸಲಾಗಿದೆ.

ಆರೋಪಿಯಿಂದ ಕಾಡುಕೋಣದ ಎರಡು ಕೊಂಬು, ಸುಮಾರು ಒಂದುವರೆ ಕೆಜಿ ಮುಳ್ಳು ಹಂದಿಯ ಚಿಪ್ಪು, ಕೃತ್ಯಕ್ಕೆ ಬಳಿಸಿದ ಬೈಕ್, ಒಂದು ನಾಡಬಂದೂಕು, ತಯಾರಿ ಹಂತದಲ್ಲಿದ್ದ ಮೂರು ನಾಡ ಬಂದೂಕು ಮತ್ತು ಬಂದೂಕು ತಯಾರಿಸಲು ಬಳಸುತ್ತಿದ್ದ ಬಿಡಿ ಭಾಗಗಳನ್ನು ಜಪ್ತಿ ಮಾಡಲಾಗಿದೆ.

Published On - 10:28 am, Wed, 5 February 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
Follow Us