AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಕ್ಕಿನ ಕಲ್ಮಠದ ಪರಮ ತಪಸ್ವಿ ಶ್ರೀಗುರುಬಸವ 110ನೇ ಪುಣ್ಯ ಸ್ಮರಣೆ; ಮಾಜಿ ಸಿಎಂ ಯಡಿಯೂರಪ್ಪಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ

ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ ಗುರುಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ತರಳಬಾಳು ಸ್ವಾಮೀಜಿ, ಸಚಿವ ಕೆ.ಎಸ್.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಬೆಕ್ಕಿನ ಕಲ್ಮಠದ ಪರಮ ತಪಸ್ವಿ ಶ್ರೀಗುರುಬಸವ 110ನೇ ಪುಣ್ಯ ಸ್ಮರಣೆ; ಮಾಜಿ ಸಿಎಂ ಯಡಿಯೂರಪ್ಪಗೆ ಗುರುಬಸವಶ್ರೀ ಪ್ರಶಸ್ತಿ ಪ್ರದಾನ
ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ
TV9 Web
| Updated By: preethi shettigar|

Updated on:Mar 05, 2022 | 7:51 PM

Share

ಶಿವಮೊಗ್ಗ: ಬೆಕ್ಕಿನ ಕಲ್ಮಠದ ಪರಮ ತಪಸ್ವಿ ಶ್ರೀಗುರುಬಸವರ 110ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಇಂದು(ಮಾರ್ಚ್​ 05) ನಡೆದಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪಗೆ( B.S. yediyurappa) ಗುರುಬಸವಶ್ರೀ ಪ್ರಶಸ್ತಿ(Gurubasavasree award) ನೀಡಿ ಗೌರವಿಸಲಾಗಿದೆ. ತರಳಬಾಳು ಸ್ವಾಮೀಜಿ, ಸಚಿವ ಕೆ.ಎಸ್.ಈಶ್ವರಪ್ಪ(K.S.Eshwarappa) ಸಂಸದ ಬಿ.ವೈ.ರಾಘವೇಂದ್ರ, ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಈ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

ಮಠ ನನ್ನನ್ನು ಗುರುತಿಸಿ ಪ್ರಶಸ್ತಿ ನೀಡಿದ್ದು ಸಂತಸ ತಂದಿದೆ. ಈ ಜಿಲ್ಲೆ ಶರಣ ಸಾಹಿತ್ಯಕ್ಕೆ ಅಪಾರ ಕೊಡುಗೆ ನೀಡಿದೆ. ಅನೇಕ ಶರಣ ಮತ್ತು ಶರಣೆಯರು ಶಿವಮೊಗ್ಗದಲ್ಲಿ ಜನ್ಮ ತಾಳಿದ್ದಾರೆ. ವಿವಿಧತೆಯಲ್ಲಿ ಏಕತೆ ಹೊಂದಿರುವ ಭೂಮಿ ಇದಾಗಿದೆ. ಸಮಾಜದ ಏಳಿಗೆಗೆ ಶ್ರಮವಹಿಸುತ್ತೇನೆ ಎಂದು ಪ್ರಶಸ್ತಿ ಸ್ವೀಕರಿಸಿದ ನಂತರ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಬಿಎಸ್​ವೈರಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಿದೆ: ಸಚಿವ ಕೆ.ಎಸ್.ಈಶ್ವರಪ್ಪ

ಶಿಕಾರಿಪುರದ ಬೆಂಕಿಯ ಚೆಂಡು ರಾಜ್ಯಾದ್ಯಂತ ಪ್ರವಾಸ ಮಾಡಿ ಬಿಜೆಪಿಯನ್ನು ಅಧಿಕಾರಕ್ಕೆ ತಂದಿದ್ದಾರೆ. ಈ ಮೂಲಕ ಬಿಜೆಪಿ ಸಂಘಟನೆ ರಾಜ್ಯದಲ್ಲಿ ಆಯ್ತು. ಬಿ.ಎಸ್​. ಯಡಿಯೂರಪ್ಪ ಸಂಘಟನೆ ಶಕ್ತಿಯಿಂದ 2023ರಲ್ಲಿ 150 ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ಬಿಜೆಪಿ ಪೂರ್ಣ ಬಹುಮತ ಬಿಎಸ್​ವೈ ಅವರ ಕನಸು ನನಸು ನಾವು ಮಾಡುತ್ತೇವೆ ಎಂದು ಬಿಎಸ್​ವೈ ಅವರನ್ನು ಸಚಿವ ಕೆ.ಎಸ್.ಈಶ್ವರಪ್ಪ ಹಾಡಿ ಹೊಗಳಿದ್ದಾರೆ. ಬಳಿಕ ಬಜೆಟ್ ಕುರಿತು ಮಾತನಾಡಿದ ಅವರು, ಬಸವರಾಜ್ ಬೊಮ್ಮಾಯಿ ಬಜೆಟ್ ಬೊಂಬಾಟ್​ ಅಗಿತ್ತು. ಸರ್ವ ವ್ಯಾಪ್ತಿ, ಸರ್ವ ಸ್ಪರ್ಶಿ ಬಜೆಟ್ ಸಿಎಂ ಬಸವರಾಜ್​ ಬೊಮ್ಮಾಯಿ ಅವರದ್ದು. ವಿರೋಧ ಪಕ್ಷದವರಿಗೂ ಟೀಕೆ ಅವಕಾಶ ನೀಡದ ಬಜೆಟ್ ಮಂಡನೆ ಬೊಮ್ಮಾಯಿ ಮಾಡಿದ್ದಾರೆ ಎಂದು ಹೇಳಿದ್ದಾರೆ.

ಅಧಿಕಾರಕ್ಕೆ ಬರುವ ಹಗಲು ಕನಸು ಕಾಂಗ್ರೆಸ್ ಕಾಣುತ್ತಿದೆ: ಬಿ.ಎಸ್​.ಯಡಿಯೂರಪ್ಪ

ಜೀವನದಲ್ಲಿ ನನಗೆ ತೃಪ್ತಿ ಇಂದು ಆಗಿದೆ. ಶಿಕಾರಿಪುರದ ಜನರ ಋಣವನ್ನು ತೀರಿಸಲು ಸಾಧ್ಯವಿಲ್ಲ. ಶಿಕಾರಿಪುರ ತಾಲೂಕಿನ ಏತ ನೀರಾವರಿ ಯೋಜನೆ ಪೂರ್ಣಗೊಂಡಿದೆ. ರೈತರಿಗೆ ಇನ್ನೂ ನೀರಿನ ಬರ ನೀಗಿಸಿರುವೆ. ರಾಜ್ಯದೆಲ್ಲೆಡೆ ನಾನು ಪ್ರವಾಸ ಮಾಡುತ್ತೇನೆ. ಅಧಿಕಾರಕ್ಕೆ ಬರುವ ಹಗಲು ಕನಸು ಕಾಂಗ್ರೆಸ್ ಕಾಣುತ್ತಿದೆ. ಸಾಮೂಹಿಕ ನಾಯಕತ್ವದಲ್ಲಿ ರಾಜ್ಯದ ಪ್ರವಾಸ ಮಾಡಲಿದ್ದೇವೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ  ಅಧಿಕಾರಕ್ಕೆ ತರುತ್ತೇವೆ. ಇನ್ನೂ ಬೊಮ್ಮಾಯಿ ಅತ್ಯುತ್ತಮ ಬಜೆಟ್ ಕೊಟ್ಟಿದ್ದಾರೆ. ಶಿಕಾರಿಪುರ ಮಾದರಿ ತಾಲೂಕು ಮಾಡುವ ಗುರಿ ಇದೆ ಎಂದು ಬಿ.ಎಸ್​.ಯಡಿಯೂರಪ್ಪ ಹೇಳಿದ್ದಾರೆ.

ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ: ಸಿಎಂ ಬೊಮ್ಮಾಯಿ

ನನಗೆ ಯಡಿಯೂರಪ್ಪ ಸಿಕ್ಕಿರುವುದು ಪೂರ್ವಜನ್ಮದ ಪುಣ್ಯ. ರಾಜಕೀಯದಲ್ಲಿ ಯಡಿಯೂರಪ್ಪನವರು ನನ್ನನ್ನು ಬೆಳೆಸಿದ್ದಾರೆ. ಬಿ.ಎಸ್.ಯಡಿಯೂರಪ್ಪ ದೂರದೃಷ್ಟಿಯಿರುವಂತಹ ನಾಯಕ. ಬಡವರ ಬಗ್ಗೆ ಅಪಾರ ಕಳಕಳಿ ಇರುವಂತಹ ವ್ಯಕ್ತಿ ಬಿಎಸ್​ವೈ. ಶಿಕಾರಿಪುರದಲ್ಲಿ ಸೂರ್ಯನಿಗೆ ದೀಪ ಹಿಡಿದಂಗೆ. ರಾಜ್ಯದ ಮೂಲೆಮೂಲೆಯಲ್ಲೂ ಬಿಎಸ್​ವೈ ಸೇವೆ ಸಲ್ಲಿಸಿದ್ದಾರೆ. ರಾಜಕೀಯವಾಗಿ ಬೆಳೆಯಲು, ಸಿಎಂ ಆಗಲು ಬಿಎಸ್​ವೈ ಕಾರಣ. ಸಿಎಂ ಸ್ಥಾನ ಬಿಟ್ಟಾಗ ಬಿಎಸ್​ವೈಗೆ ಎಲ್ಲಿಯೂ ಕಹಿ ಇರಲಿಲ್ಲ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ನಾನು ಬದ್ಧನಾಗಿರುವೆ ಎಂದು ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಸಿಎಂ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.

ಬೆಂಕಿಯಲ್ಲಿ ಅರಳಿದ ನಾಯಕ ಬಿಎಸ್​ವೈ: ಬಿ.ವೈ.ವಿಜಯೇಂದ್ರ

ಬೆಂಕಿಯಲ್ಲಿ ಅರಳಿದ ನಾಯಕ ಬಿಎಸ್​ವೈ ಆಗಿದ್ದಾರೆ. ಪರಿಶ್ರಮ, ಬೆವರು ಸುರಿಸಿ ಬಿಎಸ್​ವೈ ರೈತರ ಪರ ಹೋರಾಟ ಮಾಡಿದ್ದಾರೆ. ಬೊಮ್ಮಾಯಿ ಅತ್ಯುತ್ತಮ ಬಜೆಟ್ ನೀಡಿದ್ದಾರೆ. ನೀರಾವರಿಗೆ ಬೊಮ್ಮಾಯಿ ಹೆಚ್ಚು ಒತ್ತು ನೀಡಿದ್ದಾರೆ ಎಂದು ಶಿಕಾರಿಪುರದ ಪಟ್ಟಣದಲ್ಲಿ ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.

ಇದನ್ನೂ ಓದಿ: ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಯಾವಾಗ?; ಸಿಎಂ ಬೊಮ್ಮಾಯಿ ನೀಡಿದ್ರು ಉತ್ತರ

Ratan Tata: ಉದ್ಯಮಿ ರತನ್ ಟಾಟಾಗೆ ಅಸ್ಸಾಂ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿ ಅಸ್ಸಾಂ ಬೈಭವ್ ಪ್ರದಾನ

Published On - 7:40 pm, Sat, 5 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ