AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಳೆಗೊನೆಯಲ್ಲಿ, ಸಿಬ್ಬಂದಿ ಒಳ ಉಡುಪಿನಲ್ಲಿ ಜೈಲಿಗೆ ಬಂತು ಗಾಂಜಾ! ಪರಪ್ಪನ ಅಗ್ರಹಾರ ಬಳಿಕ ಶಿವಮೊಗ್ಗದಲ್ಲಿ ಕೈದಿಗಳ ಹೈಟೆಕ್ ಬದುಕು ಬಯಲು

ಶಿವಮೊಗ್ಗದ ಕೇಂದ್ರ ಕಾರಾಗೃಹದಲ್ಲಿ ಬಾಳೆಹಣ್ಣಿನ ಗೊನೆಯಲ್ಲಿ ಗಾಂಜಾ ಪತ್ತೆಯಾಗಿರುವುದು ಇದೀಗ ಇಡೀ ಜೈಲು ಅಧಿಕಾರಿಗಳನ್ನೇ ಆಘಾತಕ್ಕೊಳಗಾಗಿಸಿದೆ. ಮತ್ತೊಂದೆಡೆ, ಜೈಲಿಗೆ ಸಿಬ್ಬಂದಿ ಎಂಟ್ರಿಯಾಗುವ ಮುನ್ನವೇ, ಸಿಬ್ಬಂದಿ ಒಳ ಉಡುಪಿನಲ್ಲಿ ಗಾಂಜಾ ಪತ್ತೆಯಾಗಿರುವುದು ಇಡೀ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿದೆ. ಸದಾ ಹದ್ದಿನ ಕಣ್ಣಿಡಲಾಗುವ ಕಾರಾಗೃಹಗಳಲ್ಲಿ ಕೈದಿಗಳ ಬದುಕು ಹೈಟೆಕ್ ಆಗಿದೆ.

ಬಾಳೆಗೊನೆಯಲ್ಲಿ, ಸಿಬ್ಬಂದಿ ಒಳ ಉಡುಪಿನಲ್ಲಿ ಜೈಲಿಗೆ ಬಂತು ಗಾಂಜಾ! ಪರಪ್ಪನ ಅಗ್ರಹಾರ ಬಳಿಕ ಶಿವಮೊಗ್ಗದಲ್ಲಿ ಕೈದಿಗಳ ಹೈಟೆಕ್ ಬದುಕು ಬಯಲು
ಶಿವಮೊಗ್ಗ ಕೇಂದ್ರ ಕಾರಾಗೃಹ
Basavaraj Yaraganavi
| Edited By: |

Updated on: Nov 22, 2025 | 7:52 AM

Share

ಶಿವಮೊಗ್ಗ, ನವೆಂಬರ್ 22: ನವೆಂಬರ್ 19 ಮಧ್ಯಾಹ್ನ ಸುಮಾರು 2.15 ರ ಹೊತ್ತಿಗೆ ಶಿವಮೊಗ್ಗದ (Shivamogga) ಕೇಂದ್ರ ಕಾರಾಗೃಹಕ್ಕೆ (Shivamogga Central Jail) ಆಟೋವೊಂದು ಬಂದಿದ್ದು, ಆಟೋ ಚಾಲಕ ಅನಾಮತ್ತಾಗಿ ಬಾಳೆಹಣ್ಣಿನ 5 ಗೊನೆಗಳನ್ನು ಇಟ್ಟು ಹೋಗಿದ್ದ. ಇದನ್ನು ಪ್ರಶ್ನಿಸಿದ ಜೈಲು ಭದ್ರತಾ ಸಿಬ್ಬಂದಿಗೆ, ಜೈಲಿನ ಕ್ಯಾಂಟಿನ್​ನವರು ಬಾಳೆಹಣ್ಣು ತರಲು ಹೇಳಿದ್ದರು ಎಂದು ಗೊನೆಗಳನ್ನು ಗೇಟಿನ ಬಳಿ ಇಳಿಸಿ ವಾಪಾಸ್ ತೆರಳಿದ್ದ. ಆದರೆ, ಈ ಬಾಳೆಹಣ್ಣಿನ ಗೊನೆಗಳನ್ನು ಪರಿಶೀಲಿಸಿದ ಕೆಎಸ್​ಐಎಸ್​ಎಫ್ ಪೊಲೀಸರು ಒಮ್ಮೆಲೇ ಆಘಾತಕ್ಕೊಳಗಾಗಿದ್ದರು. ಯಾಕೆಂದರೆ, ಈ ಬಾಳೆಗೊನೆ ದಿಂಡನ್ನು ಕೊರೆದು ನೋಡಿದ ಭದ್ರತಾ ಸಿಬ್ಬಂದಿಗೆ ಅದರೊಳಗೆ ಗಾಂಜಾ ಹಾಗೂ ಸಿಗರೇಟನ್ನು ಟೇಪ್​ನಲ್ಲಿ ಸುತ್ತಿ ಇಟ್ಟಿರುವುದು ಪತ್ತೆಯಾಗಿದೆ. ಹೀಗೂ ಇರುತ್ತಾ ಎಂದು ಕಕ್ಕಾಬಿಕ್ಕಿಯಾದ ಭದ್ರತಾ ಸಿಬ್ಬಂದಿ, ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರಿಗೆ ವಿಷಯ ತಿಳಿಸಿದ್ದಾರೆ. ಬಳಿಕ ಬಾಳೆಗೊನೆ ಪರಿಶೀಲಿಸಿದ ವೇಳೆ, 123 ಗ್ರಾಂ ಗಾಂಜಾ ಮತ್ತು ಒಟ್ಟು 40 ಸಿಗರೇಟ್ ಸಿಕ್ಕಿವೆ.

ಬಾಳೆಹಣ್ಣಿನ ಗೊನೆಯಲ್ಲಿ ಗಾಂಜಾ ಸಿಕ್ಕ ಬೆನ್ನಲ್ಲೇ ಜೈಲು ಸಿಬ್ಬಂದಿ ಬಳಿಯೇ ಗಾಂಜಾ ಪತ್ತೆಯಾಗಿದೆ. ಶಿವಮೊಗ್ಗ ಜೈಲಿನ ಸಿಬ್ಬಂದಿಯೇ ಬಂಧನಕ್ಕೊಳಗಾಗಿರುವುದು ಇಡೀ ವ್ಯವಸ್ಥೆಯನ್ನೇ ಪ್ರಶ್ನೆ ಮಾಡುವಂತಾಗಿದೆ. ಒಳ ಉಡುಪಿನಲ್ಲಿ ಗಾಂಜಾ ಪೊಟ್ಟಣ ಇಟ್ಟುಕೊಂಡು ಬಂದಿದ್ದ ಜೈಲು ಸಿಬ್ಬಂದಿ 25 ವರ್ಷದ ಸಾತ್ವಿಕ್, ಜೈಲು ಪ್ರವೇಶಿಸುವಾಗಲೇ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ. ಕೇಂದ್ರ ಕಾರಾಗೃಹದಲ್ಲಿ ಎಸ್​​ಡಿಎ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿಬ್ಬಂದಿ ಸಾತ್ವಿಕ್ ಬಳಿ 170 ಗ್ರಾಂ ಮಾದಕ ವಸ್ತು ಗಾಂಜಾ ದೊರಕಿದೆ. ಗುರುವಾರ ಕರ್ತವ್ಯಕ್ಕೆ ಹಾಜರಾಗಲು ಬಂದಾಗ ತಪಾಸಣೆಗೊಳಪಡಿಸಿದ್ದ ಭದ್ರತಾ ಸಿಬ್ಬಂದಿಗೆ, ಸಾತ್ವಿಕ್ ಒಳ ಉಡುಪಿನಲ್ಲಿ ಗಮ್​ಟೇಪಿನಲ್ಲಿ ಸುತ್ತಿರುವ ಗಾಂಜಾ ಪೊಟ್ಟಣ ಸಿಕ್ಕಿದೆ. ಇದು ಬೇಲಿಯೇ ಎದ್ದು ಹೊಲ ಮೇಯ್ದಂತಾಗಿದೆ. ಇದು ಜೈಲು ಅಧಿಕಾರಿಗಳಿಗೆ ಶಾಕ್ ಜೊತೆಗೆ ಇರಿಸುಮುರುಸು ಉಂಟು ಮಾಡಿದೆ.

ಗೃಹ ಇಲಾಖೆ ವೈಫಲ್ಯವೇ ಕಾರಣ: ಸಂಸದ ಬಿವೈ ರಾಘವೇಂದ್ರ ಟೀಕೆ

ಈ ಘಟನೆಗಳ ಬಗ್ಗೆ ಧಿಗ್ಭ್ರಮೆ ವ್ಯಕ್ತಪಡಿಸಿರುವ ಸಂಸದ ಬಿವೈ ರಾಘವೇಂದ್ರ, ಪರಪ್ಪನ ಅಗ್ರಹಾರ, ಶಿವಮೊಗ್ಗ ಜೈಲಿನಲ್ಲಿ ಗಾಂಜಾ ಪೂರೈಕೆ, ಅಕ್ರಮ ಚಟುವಟಿಕೆಗಳಿಗೆ ನೇರವಾಗಿ ರಾಜ್ಯ ಸರ್ಕಾರದ ಗೃಹ ಇಲಾಖೆಯ ವೈಫಲ್ಯವೇ ಕಾರಣ ಎಂದು ಟೀಕಿಸಿದ್ದಾರೆ. ಈಗಾಗಲೇ ಪರಪ್ಪನ ಅಗ್ರಹಾರ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಮಂತ್ರಾಲಯದ ಸಭೆಯಲ್ಲಿ ಗಮನ ಸೆಳೆಯಲಾಗಿದೆ ಎಂದು ಅವರು ತಿಳಿಸಿದ್ದಾರೆ. ಅಲ್ಲದೆ, ಶಿವಮೊಗ್ಗ ಜೈಲಿನಲ್ಲಿ ಇಂಥ ಕೃತ್ಯ ನಡೆದಿರುವುದು ರಾಜ್ಯ ಗೃಹ ಸಚಿವರ ವೈಫಲ್ಯ ಎಂದು ಟೀಕಿಸಿದ್ದಾರೆ.

ಇದನ್ನೂ ಓದಿ: ಪರಪ್ಪನ ಅಗ್ರಹಾರ ಜೈಲಿನ ಉಗ್ರ ಫೋನ್ ಬಳಕೆ, ಏರ್​ಪೋರ್ಟ್​​ ನಮಾಜ್-ದೆಹಲಿ ಸ್ಫೋಟಕ್ಕೂ ಲಿಂಕ್: ಅಶೋಕ್ ಅನುಮಾನ

ಒಟ್ಟಾರೆ, ಬಾಳೆಗೊನೆಯಲ್ಲಿ ಗಾಂಜಾ ಪತ್ತೆ ಹಾಗೂ ಜೈಲಿನೊಳಗೆ ಗಾಂಜಾ ಪೂರೈಕೆ ಸಂಬಂಧಪಟ್ಟಂತೆ ತುಂಗಾನಗರ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜೈಲು ಸಿಬ್ಭಂದಿಯೇ ಕಾರಾಗೃಹದಲ್ಲಿ ಸೆರೆಯಾಗುವಂತಾಗಿರುವುದು ವಿಪರ್ಯಾಸ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ
CID ತನಿಖೆ ವೇಳೆ ಹಲವು ಸ್ಫೋಟಕ ಅಂಶಗಳು ಪತ್ತೆ