AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Follow us
TV9 Web
| Updated By: ಗಂಗಾಧರ​ ಬ. ಸಾಬೋಜಿ

Updated on:Nov 25, 2022 | 5:48 PM

ಶಿವಮೊಗ್ಗ: ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ (maharashtra) ಮತ್ತು ಕರ್ನಾಟಕ (karnataka) ನಡುವಿನ ಗಡಿ ವಿವಾದವು ಗರಿಗೆದರಿದೆ. ಇಂದು (ನ. 25) ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (basavaraj bommai) ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ. ಈ ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯುಎಪಿಎ ಕಾಯ್ದೆ ದಾಖಲಾದ ಪ್ರಕರಣಗಳನ್ನು ಎನ್ಐಎ ತನಿಖಾ ಸಂಸ್ಥೆಗಳಿಗೆ ವಹಿಸಬೇಕಾಗಿದೆ. 24 ಗಂಟೆಗಳಲ್ಲೇ ರಾಜ್ಯ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಕರ್ನಾಟಕದ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮೂರು ದಿನಗಳ ಕಾಲ ಪ್ರಶಿಕ್ಷಣ ಶಿಬಿರ

ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ಪ್ರಶಿಕ್ಷಣ ಶಿಬಿರ ನಡೆಯುತ್ತಿದೆ. ರಾಷ್ಟ್ರದ ಅಭಿವೃದ್ದಿ ಕೇವಲ ಬಿಜೆಪಿಯ ಪಕ್ಷದಿಂದ ಮಾತ್ರ ಸಾಧ್ಯ. ಮೌಲ್ಯಾಧಾರಿತ ರಾಜಕಾರಣ ಮಾಡುವುದು ಬಿಜೆಪಿಗೆ ಮಾತ್ರ ಗೊತ್ತು. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಬಿಜೆಪಿಯ ಕುರಿತ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದೆ. ಸಂವಿಧಾನ ಬದಲು ಮಾಡುತ್ತಾರೆ ಎನ್ನುವ ಟೀಕೆ ಇತ್ತು. ಮೋದಿ ನೇತೃತ್ವದಲ್ಲಿ ಈಗ ಸಂವಿಧಾನದ ಅಡಿಯಲ್ಲಿ ಎಲ್ಲ ಅಭಿವೃದ್ದಿ ಕಾರ್ಯ ಮಾಡಲಾಗುತ್ತಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸಾಕಷ್ಟು ನೋವು ಕೊಟ್ಟಿದೆ. ಕಾಂಗ್ರೆಸ ಕೇವಲ ಲಾಭ ಪಡೆಯುವರು ಮಾತ್ರ. ಅವರಿಗೆ ಅಧಿಕಾರ ಬಿಟ್ಟರೆ ಏನು ಯೋಚನೆ ಇಲ್ಲ. ಅಂಬೇಡ್ಕರ್ ಸಂವಿಧಾನ ರಚಿಸಿದ ಬಳಿಕ ಅವರ ಹೆಸರನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಜನರ ಬದುಕು ಕಟ್ಟಿದ್ದು ಬಿಜೆಪಿ ಪಕ್ಷದ ಸಾಧನೆ

10 ಕೋಟಿ ರೂ. ಹೆಚ್ಚು ಮನೆಗೆ ಕುಡಿಯುವ ನೀರು ಕೇಂದ್ರ ಸರ್ಕಾರ ಹೇಳಿತ್ತು. ಅದರಂತೆ 7 ಕೋಟಿ ಅಧಿಕ ಈಗ ಮನೆಗೆ ನೀರು ಕೊಟ್ಟಿದ್ದಾರೆ. ಮೋದಿ ಅದನ್ನು ಕೃತಿಯಲ್ಲಿ ಮಾಡಿ ತೋರಿಸಿದ್ದಾರೆ. ಈ ಧೈರ್ಯ ಯಾರಿಗೂ ಇರುವುದಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಮಸ್ಯೆಗಳು ಬಂದರೆ ಈಗ ಅವರು ದೇಶದತ್ತ ತಿರುಗಿ ನೋಡುವಂತಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ ಬದುಕು ಕಟ್ಟಿದ್ದು ಬಿಜೆಪಿ ಪಕ್ಷದ ಸಾಧನೆ ಆಗಿದೆ. ದೇಶ ಈಗ ಆರ್ಥಿಕ ವಾಗಿ ಸದೃಢವಾಗಿದೆ. ರಾಜ್ಯ ಸರ್ಕಾರ ಕೊವಿಡ್ ಯಶಸ್ಸು ಆಗಿ ನಿರ್ವಹಣೆ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಕೂಡಲೇ ನಿಗಿಸಲಾಗಿತ್ತು. ವಿದೇಶಗಳಿಂದ ಆಕ್ಸೀಜನ್ ತರಲಾಯಿತು ಎಂದರು.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅತುತ್ತಮವಾಗಿ ಕೊವಿಡ್ ಸಮಸ್ಯೆಯ ನಿರ್ವಹಣೆ ಮಾಡಿದೆ. ರಾಜ್ಯದ ಆರ್ಥಿಕ ಸ್ಥಿತಿ ಗಟ್ಟಿಯಾಗಿದೆ. ಎಲ್ಲ ಮೂಲಗಳಿಂದ ಆದಾಯ ಸಂಗ್ರಹ ಆಗಿದೆ. ವಿವಿಧ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ಮೀಸಲು ಇಡಲಾಗಿದೆ. ರಾಜ್ಯವನ್ನು ಎಲ್ಲ ರೀತಿಯಿಂದಲ್ಲೂ ಭದ್ರವಾಗಿ ಕಟ್ಟಲಾಗುತ್ತಿದೆ. ಶಿಕ್ಷಣ ಅತೀ ಮುಖ್ಯವಾಗಿದ್ದು, ದಾಖಲೆ ಪ್ರಮಾಣದ ಕೊಠಡಿ ನಿರ್ಮಾಣ ಮಾಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:44 pm, Fri, 25 November 22

ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಏಕೆ ಎಫ್‌ಐಆರ್ ಹಾಕಿಲ್ಲ?; ನ್ಯಾ. ವರ್ಮಾ ವಿವಾದದ ಬಗ್ಗೆ ಉಪರಾಷ್ಟ್ರಪತಿ ಟೀಕೆ
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಬಿಡದಿ ದಿವ್ಯಾಂಗ ಬಾಲಕಿ ಸಾವಿನ ಬಗ್ಗೆ ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ SP
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಇವತ್ತೂ ನಗರದಲ್ಲಿ ಮಳೆ, ಮುಂದಿನ ಎರಡು ದಿನಗಳಲ್ಲೂ ಮಳೆ; ಬವಣೆ ತಪ್ಪಿದ್ದಲ್ಲ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹಬ್ಬಕ್ಕೆಂದು ಬೆಂಗಳೂರಿನಿಂದ ಬಂದವರು ಮಸಣಕ್ಕೆ: ಇಲ್ಲಿದೆ ಕೊನೆಯ ಕ್ಷಣ
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹೊಸಪೇಟೆಯಿಂದ ಬೆಂಗಳೂರಿಗೆ ವಾಪಸ್ಸು ಹೋಗುತ್ತಿದ್ದೇನೆ: ಶಿವಕುಮಾರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎನ್ನುತ್ತಾರೆ ಮೃತನ ಸಂಬಂಧಿ ಶಂಕರ್
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ಡಿಕೆ ಶಿವಕುಮಾರ್​
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ತಂದೆ-ತಾಯಿ ಇಲ್ಲದ ನನಗೆ ಶಿವಣ್ಣ-ಗೀತಕ್ಕನೇ ದೇವರು: ಕಾಫಿನಾಡು ಚಂದು
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಅಧಿಕಾರಿಗಳನ್ನು ಬಯ್ಯುವುದು ಬಿಟ್ರೆ ಸಿದ್ದರಾಮಯ್ಯ ಏನು ಮಾಡಿದ್ದಾರೆ? ಸಿಂಹ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ
ಮೂಲಭೂತ ಸೌಕರ್ಯಗಳಿಲ್ಲದ ಗ್ರೇಟರ್ ಬೆಂಗಳೂರು ಯಾರಿಗೆ ಬೇಕು? ನಿವಾಸಿ