AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ: ಸಿಎಂ ಬೊಮ್ಮಾಯಿ ಸ್ಪಷ್ಟನೆ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
TV9 Web
| Edited By: |

Updated on:Nov 25, 2022 | 5:48 PM

Share

ಶಿವಮೊಗ್ಗ: ಉಭಯ ರಾಜ್ಯಗಳ ಮುಖ್ಯಮಂತ್ರಿಗಳು ಮತ್ತು ನಾಯಕರ ಹೇಳಿಕೆಗಳ ನಂತರ ಮಹಾರಾಷ್ಟ್ರ (maharashtra) ಮತ್ತು ಕರ್ನಾಟಕ (karnataka) ನಡುವಿನ ಗಡಿ ವಿವಾದವು ಗರಿಗೆದರಿದೆ. ಇಂದು (ನ. 25) ಜಿಲ್ಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (basavaraj bommai) ಪ್ರತಿಕ್ರಿಯೆ ನೀಡಿದ್ದು, ಮಹಾರಾಷ್ಟ್ರ ಗಡಿ ವಿವಾದ ಕುರಿತು ಸರ್ಕಾರ ಸ್ಪಷ್ಟ ನಿಲುವು ಹೊಂದಿದೆ. ಈಗಾಗಲೇ ಏನು ಮಾಡಬೇಕು ಅದನ್ನೆಲ್ಲಾ ರಾಜ್ಯ ಸರ್ಕಾರ ಮಾಡಿದೆ. ಈ ವಿವಾದಾತ್ಮಕ ವಿಷಯದ ಕುರಿತು ಮುಂದಿನ ವಾರ ಸರ್ವಪಕ್ಷ ಸಭೆ ನಡೆಸಲಾಗುವುದು ಸ್ಪಷ್ಟಪಡಿಸಿದರು.

ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ಯುಎಪಿಎ ಕಾಯ್ದೆ ದಾಖಲಾದ ಪ್ರಕರಣಗಳನ್ನು ಎನ್ಐಎ ತನಿಖಾ ಸಂಸ್ಥೆಗಳಿಗೆ ವಹಿಸಬೇಕಾಗಿದೆ. 24 ಗಂಟೆಗಳಲ್ಲೇ ರಾಜ್ಯ ಪೊಲೀಸರು ಪ್ರಕರಣವನ್ನು ಭೇದಿಸಿದ್ದಾರೆ. ಕರ್ನಾಟಕದ ಪೊಲೀಸರು ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.

ಮೂರು ದಿನಗಳ ಕಾಲ ಪ್ರಶಿಕ್ಷಣ ಶಿಬಿರ

ಶಿವಮೊಗ್ಗದಲ್ಲಿ ಮೂರು ದಿನಗಳ ಕಾಲ ಪ್ರಶಿಕ್ಷಣ ಶಿಬಿರ ನಡೆಯುತ್ತಿದೆ. ರಾಷ್ಟ್ರದ ಅಭಿವೃದ್ದಿ ಕೇವಲ ಬಿಜೆಪಿಯ ಪಕ್ಷದಿಂದ ಮಾತ್ರ ಸಾಧ್ಯ. ಮೌಲ್ಯಾಧಾರಿತ ರಾಜಕಾರಣ ಮಾಡುವುದು ಬಿಜೆಪಿಗೆ ಮಾತ್ರ ಗೊತ್ತು. ಪಕ್ಷ ಸಂಘಟನೆಗೆ ಹೆಚ್ಚು ಒತ್ತು ನೀಡಬೇಕು. ಬಿಜೆಪಿಯ ಕುರಿತ ಸಾಕಷ್ಟು ಅಪಪ್ರಚಾರ ಮಾಡಲಾಗುತ್ತಿದೆ. ಸಂವಿಧಾನ ಬದಲು ಮಾಡುತ್ತಾರೆ ಎನ್ನುವ ಟೀಕೆ ಇತ್ತು. ಮೋದಿ ನೇತೃತ್ವದಲ್ಲಿ ಈಗ ಸಂವಿಧಾನದ ಅಡಿಯಲ್ಲಿ ಎಲ್ಲ ಅಭಿವೃದ್ದಿ ಕಾರ್ಯ ಮಾಡಲಾಗುತ್ತಿದೆ. ಅಂಬೇಡ್ಕರ್ ಅವರಿಗೆ ಕಾಂಗ್ರೆಸ್ ಸಾಕಷ್ಟು ನೋವು ಕೊಟ್ಟಿದೆ. ಕಾಂಗ್ರೆಸ ಕೇವಲ ಲಾಭ ಪಡೆಯುವರು ಮಾತ್ರ. ಅವರಿಗೆ ಅಧಿಕಾರ ಬಿಟ್ಟರೆ ಏನು ಯೋಚನೆ ಇಲ್ಲ. ಅಂಬೇಡ್ಕರ್ ಸಂವಿಧಾನ ರಚಿಸಿದ ಬಳಿಕ ಅವರ ಹೆಸರನ್ನು ಪ್ರಚಾರಕ್ಕೆ ಬಳಕೆ ಮಾಡಿಕೊಂಡಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ ಮಾಡಿದರು.

ಜನರ ಬದುಕು ಕಟ್ಟಿದ್ದು ಬಿಜೆಪಿ ಪಕ್ಷದ ಸಾಧನೆ

10 ಕೋಟಿ ರೂ. ಹೆಚ್ಚು ಮನೆಗೆ ಕುಡಿಯುವ ನೀರು ಕೇಂದ್ರ ಸರ್ಕಾರ ಹೇಳಿತ್ತು. ಅದರಂತೆ 7 ಕೋಟಿ ಅಧಿಕ ಈಗ ಮನೆಗೆ ನೀರು ಕೊಟ್ಟಿದ್ದಾರೆ. ಮೋದಿ ಅದನ್ನು ಕೃತಿಯಲ್ಲಿ ಮಾಡಿ ತೋರಿಸಿದ್ದಾರೆ. ಈ ಧೈರ್ಯ ಯಾರಿಗೂ ಇರುವುದಿಲ್ಲ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಯಾವುದೇ ಸಮಸ್ಯೆಗಳು ಬಂದರೆ ಈಗ ಅವರು ದೇಶದತ್ತ ತಿರುಗಿ ನೋಡುವಂತಾಗಿದೆ. ಕೋವಿಡ್ ಸಂದರ್ಭದಲ್ಲಿ ಜನರ ಬದುಕು ಕಟ್ಟಿದ್ದು ಬಿಜೆಪಿ ಪಕ್ಷದ ಸಾಧನೆ ಆಗಿದೆ. ದೇಶ ಈಗ ಆರ್ಥಿಕ ವಾಗಿ ಸದೃಢವಾಗಿದೆ. ರಾಜ್ಯ ಸರ್ಕಾರ ಕೊವಿಡ್ ಯಶಸ್ಸು ಆಗಿ ನಿರ್ವಹಣೆ ಮಾಡಿದ್ದಾರೆ. ಆಕ್ಸಿಜನ್ ಕೊರತೆ ಕೂಡಲೇ ನಿಗಿಸಲಾಗಿತ್ತು. ವಿದೇಶಗಳಿಂದ ಆಕ್ಸೀಜನ್ ತರಲಾಯಿತು ಎಂದರು.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅತುತ್ತಮವಾಗಿ ಕೊವಿಡ್ ಸಮಸ್ಯೆಯ ನಿರ್ವಹಣೆ ಮಾಡಿದೆ. ರಾಜ್ಯದ ಆರ್ಥಿಕ ಸ್ಥಿತಿ ಗಟ್ಟಿಯಾಗಿದೆ. ಎಲ್ಲ ಮೂಲಗಳಿಂದ ಆದಾಯ ಸಂಗ್ರಹ ಆಗಿದೆ. ವಿವಿಧ ನೀರಾವರಿ ಯೋಜನೆಗಳಿಗೆ ಸಾವಿರಾರು ಕೋಟಿ ಮೀಸಲು ಇಡಲಾಗಿದೆ. ರಾಜ್ಯವನ್ನು ಎಲ್ಲ ರೀತಿಯಿಂದಲ್ಲೂ ಭದ್ರವಾಗಿ ಕಟ್ಟಲಾಗುತ್ತಿದೆ. ಶಿಕ್ಷಣ ಅತೀ ಮುಖ್ಯವಾಗಿದ್ದು, ದಾಖಲೆ ಪ್ರಮಾಣದ ಕೊಠಡಿ ನಿರ್ಮಾಣ ಮಾಡಲಾಗಿದೆ. 15 ಸಾವಿರ ಶಿಕ್ಷಕರ ನೇಮಕಾತಿ ಆಗಿದೆ. ಮತ್ತೆ 15 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:44 pm, Fri, 25 November 22

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ