AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​​​ಆರ್​ಟಿಸಿ ಚಾಲಕ-ಕಂ-ನಿರ್ವಾಹಕ

ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಶಿವಮೊಗ್ಗ ನಗರದ ಕೆಎಸ್​​​ಆರ್​ಟಿಸಿ ಬಸ್ ನಿಲ್ದಾಣದಲ್ಲಿಯೇ ಚಾಲಕ-ಕಂ-ನಿರ್ವಾಹಕ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದಾನೆ. ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿರುವ ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ.

ಶಿವಮೊಗ್ಗ: ಅಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​​​ಆರ್​ಟಿಸಿ ಚಾಲಕ-ಕಂ-ನಿರ್ವಾಹಕ
ಆತ್ಮಹತ್ಯೆಗೆ ಯತ್ನಿಸಿದ ಕೆಎಸ್​ಆರ್​ಟಿಸಿ ಸಿಬ್ಬಂದಿ
Follow us
Basavaraj Yaraganavi
| Updated By: ವಿವೇಕ ಬಿರಾದಾರ

Updated on: Mar 23, 2024 | 6:28 PM

ಶಿವಮೊಗ್ಗ, ಮಾರ್ಚ್​ 23: ಅಧಿಕಾರಿಗಳ ಕಿರುಕುಳಕ್ಕೆ (Harassment) ಬೇಸತ್ತು ಕರ್ತವ್ಯ ನಿರತ ಚಾಲಕ-ಕಂ-ನಿರ್ವಾಹಕ (Driver come conductor) ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿರುವ ಘಟನೆ ಶಿವಮೊಗ್ಗ (Shivamogga) ನಗರದ ಕೆಎಸ್​​​ಆರ್​ಟಿಸಿ (KSRTC) ಬಸ್ ನಿಲ್ದಾಣದಲ್ಲಿ ನಡೆದಿದೆ. ಬಸವರಾಜು ಟಿ.ವಿ ಆತ್ಮಹತ್ಯೆಗೆ ಯತ್ನಿಸಿದ ಚಾಲಕ-ಕಂ-ನಿರ್ವಾಹಕ.

ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಹೊನ್ನಾಳಿ ಘಟಕದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇದೇ ಘಟಕದಲ್ಲಿ ಕೆ.ರೇಣುಕಾ ಎಂಬುವರು ಮೆಕ್ಯಾನಿಕ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಗಲಾಟೆಯಾಗಿತ್ತು. ಈ ವಿಚಾರ ಮೇಲಿನ ಅಧಿಕಾರಿಗಳಿಗೂ ತಿಳಿದಿದೆ. ಮೇಲಿನ ಅಧಿಕಾರಿಗಳ ಬೆಂಬಲದೊಂದಿಗೆ ಕೆ. ರೇಣುಕಾ ಅವರು ಬಸವರಾಜು ಟಿ.ವಿ ಮತ್ತು ಮತ್ತೋರ್ವ ಚಾಲಕ ಸಿ. ಮಹೇಶ್ವರ ವಿರುದ್ಧ ಹೊನ್ನಾಳಿ ಪೋಲೀಸ್ ಠಾಣೆಯಲ್ಲಿ ಲೈಂಗಿಕ ಕಿರುಕುಳ ಹಾಗೂ ಜಾತಿ ನಿಂದನೆ ದೂರು ನೀಡಿದ್ದು, ಎಫ್​ಐಆರ್ ದಾಖಲಾಗಿದೆ.

ಇದನ್ನೂ ಓದಿ: KSRTC ಮಹಿಳಾ ಕಂಡಕ್ಟರ್​ಗಳಿಗೆ ಅಧಿಕಾರಿಗಳಿಂದ ಟಾರ್ಚರ್; ಕಣ್ಣೀರು ಹಾಕಿ ನೋವು ಹೇಳಿಕೊಂಡ ಸಿಬ್ಬಂದಿ

ಎಫ್​ಐಆರ್​​ ದಾಖಲಾಗುತ್ತಿದ್ದಂತೆ ಬಸವರಾಜು ಟಿ.ವಿ ​ಶಿವಮೊಗ್ಗ ವಿಭಾಗೀಯ ಅಧಿಕಾರಿಗಳ ಬಳಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ಆದರೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಚಾಲಕ ಬಸವರಾಜು ಅವರಿಗೆ ಸ್ಪಂದಿಸಿಲ್ಲ. ಇದರಿಂದ ನೊಂದ ಬಸವರಾಜು ಟಿ.ವಿ ಶಿವಮೊಗ್ಗ ವಿಭಾಗದ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್ಸಿನಲ್ಲಿಯೇ ವಿಷ ಸೇವಿಸಿ ಅತ್ಮಹತ್ಯೆ ಯತ್ನಿಸಿದ್ದಾರೆ. ವಿಚಾರ ತಿಳಿದು ಅಕ್ಕ-ಪಕ್ಕದಲ್ಲಿದ್ದ ಸಿಬ್ಬಂದಿ ಅವರನ್ನು ಕೂಡಲೆ ಶಿವಮೊಗ್ಗದ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

ನನ್ನ ಸಾವಿಗೆ ಶಿವಮೊಗ್ಗ ವಿಭಾಗದ ಅಧಿಕಾರಿಗಳು ಹಾಗೂ ಮೆಕ್ಯಾನಿಕ್ ಕೆ. ರೇಣುಕಾ ಕಾರಣವೆಂದು ಬಸವರಾಜು ಟಿ.ವಿ ಡೆತ್ ನೋಟ್ ಬರೆದಿದ್ದಾರೆ. ದೊಡ್ಡಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಜಮೀರ್ ಜೊತೆ ಸಿಎಂ ಸಹ ನೈತಿಕ ಹೊಣೆಹೊತ್ತು ರಾಜೀನಾಮೆ ಸಲ್ಲಿಸಲಿ: ಅಶೋಕ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಮೈ ಕೈ ಮುಟ್ಟಿ ಎಳೆದಾಡಿದ ಗಾಂಜಾ ಗ್ಯಾಂಗ್​, ಭಯಾನಕ ಸಂಗತಿ ಬಿಚ್ಚಿಟ್ಟ ಯುವತಿ
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಹಾಸನದಲ್ಲಿ 2 ವರ್ಷದಲ್ಲಿ 507 ಜನರಿಗೆ ಹೃದಯಾಘಾತ: ಕಾರಣ ಬಿಚ್ಚಿಟ್ಟ DHO
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಕಾಂಗ್ರೆಸ್ ಏನು ಮಾಡಿದೆ ಅಂತ ತೋರಿಸ್ತೇವೆ, ಕುಮಾರಸ್ವಾಮಿ ಬರಲಿ: ರವಿ ಗಣಿಗ
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಸಚಿವ ಕೃಷ್ಣಭೈರೇಗೌಡ ಸಭೆಯಲ್ಲಿ ರೀಲ್ಸ್ ನೋಡುತ್ತಾ ಕುಳಿತ ಅಧಿಕಾರಿಗಳು
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಚಿಕ್ಕಮಗಳೂರಿನಲ್ಲಿ ಪ್ರವಾಸಿಗರ ಹುಚ್ಚಾಟ: ಸೀತಾಳಯ್ಯನಗಿರಿಯಲ್ಲಿ ಹೊಡೆದಾಟ
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಗೋಕರ್ಣದಲ್ಲಿ ಮತಾಂತರ ಶಂಕೆ: ಬಡವರು, ರೋಗ ಪಿಡಿತರೇ ಟಾರ್ಗೆಟ್!
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ಬಿಜೆಪಿ ಮತ್ತು ನಾನು ಪರಸ್ಪರ ಅವಲಂಬಿತರಾಗಿದ್ದೇವೆ: ಬಸನಗೌಡ ಯತ್ನಾಳ್
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಷ್ಟ್ರಪತಿ ಭೇಟಿಗೆ ತೆರಳುವೆ, ಮೋದಿ ಭೇಟಿಗೂ ಸಮಯ ಕೇಳಿದ್ದೇನೆ: ಸಿಎಂ
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?
ರಾಜ್ಯ ರಾಜ್ಯಕಾರಣದಲ್ಲಿ ಯಡಿಯೂರಪ್ಪ ಸಕ್ರಿಯರಾಗುವ ಹಿಂದೆ ಕಾರಣವಿದೆಯೇ?