AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹರ್ಷ ಕೊಲೆ ನಡೆಯುವ ಕೆಲ ಗಂಟೆ ಮೊದಲು ಹತ್ಯೆಗೆ ಸ್ಕೆಚ್; ಮಹತ್ವದ ವಿಚಾರಗಳು ಬಹಿರಂಗ

ಪ್ರಕರಣ ಸಂಬಂಧಿಸಿ ಖಾಸಿಫ್​ನನ್ನು ಭದ್ರಾವತಿಯಲ್ಲಿಯೇ ಪೊಲೀಸರು ಬಂಧಿಸಿದ್ದಾರೆ. ಹಾಸನದಲ್ಲಿ ಮೂವರು ರಿಹಾನ್, ಆಶೀಪ್, ನೀಹಾಲ್, ಶಿವಮೊಗ್ಗದಲ್ಲಿ ನದೀಮ್​, ಬೆಂಗಳೂರು ಜಿಲಾನ್, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಫ್ನಾನ್​ ಬಂಧಿಸಲಾಗಿದೆ.

ಹರ್ಷ ಕೊಲೆ ನಡೆಯುವ ಕೆಲ ಗಂಟೆ ಮೊದಲು ಹತ್ಯೆಗೆ ಸ್ಕೆಚ್; ಮಹತ್ವದ ವಿಚಾರಗಳು ಬಹಿರಂಗ
ಬಜರಂಗದಳ ಕಾರ್ಯಕರ್ತ ಹರ್ಷ
TV9 Web
| Edited By: |

Updated on:Feb 23, 2022 | 8:01 PM

Share

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತನ (Bajarangdal Hindu Activist) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ವಿಚಾರಗಳು ಬುಧವಾರ (ಫೆಬ್ರವರಿ 23) ಲಭ್ಯವಾಗಿದೆ. ಹರ್ಷ ಕೊಲೆ (Harsha Death) ನಡೆಯುವ ಕೆಲ ಗಂಟೆ ಮೊದಲು, ಹತ್ಯೆಗೆ ಸ್ಕೆಚ್ ಹಾಕಿದ್ದರು. ಸೆಕೆಂಡ್ ಹ್ಯಾಂಡ್ ಸ್ವಿಫ್ಟ್ ಕಾರ್​ನಲ್ಲಿ ಬಂದಿದ್ದ ಹಂತಕರು ಕೊಲೆಗೆ ಸ್ಕೆಚ್ ಹಾಕಿದ್ರು ಎಂದು ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿದ್ದ 6 ಜನ ಒಟ್ಟಿಗೆ ಭಾರತಿ ಕಾಲೋನಿಗೆ ಎಂಟ್ರಿ ಕೊಟ್ಟಿದ್ದರು. ಕಾರು ಡೀಲರ್​ ಬದ್ರುದ್ದೀನ್ ಮಗ ಜಿಲಾನ್ ಸಹ ಬಂದಿದ್ದ. ಪ್ರಮುಖ ಆರೋಪಿ ರಿಯಾನ್ ಬಾಲ್ಯ ಸ್ನೇಹಿತ ಜಿಲಾನ್ ಬಂದಿದ್ದ. ಹರ್ಷಗೂ ಜಿಲಾನ್​ಗೂ ಯಾವುದೇ ರೀತಿ ವೈರತ್ವ ಇರಲಿಲ್ಲ. ಆದರೆ ರಿಯಾನ್ ಸಹಾಯಕ್ಕೆಂದು ಜಿಲಾನ್ ಬಂದಿದ್ದ ಎಂದು ತಿಳಿದುಬಂದಿದೆ.

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಂತರ ಎಲ್ಲರ ಮೊಬೈಲ್ ಆಫ್​ ಆಗಿತ್ತು. ಕಮ್ಯೂನಿಕೇಷನ್​ಗಾಗಿ ಹಂತಕರ ಒರ್ವನ ಮೊಬೈಲ್ ಮಾತ್ರ​ ಆನ್ ಇತ್ತು. ಭದ್ರಾವತಿ ಮೂಲಕ ರೈಲಿನ ಮೂಲಕ ಹಂತಕರು ಪರಾರಿಯಾಗಿದ್ದರು. ರಾತ್ರಿ 10.30 ಗಂಟೆಯ ಶಿವಮೊಗ್ಗ ಟು ಬೆಂಗಳೂರು, ಶಿವಮೊಗ್ಗ ಟು ಮೈಸೂರುಗೆ ಹೊರಡುವ ರೈಲಿನ ಮೂಲಕ ಪರಾರಿ ಆಗಿದ್ದರು. ಭದ್ರಾವತಿ ರೈಲ್ವೆ ಸ್ಟೆಷನ್​ವರೆಗೂ ಕಾರಿನಲ್ಲಿಯೇ ಬಂದಿದ್ದ ಹಂತಕರು ಬಳಿಕ, ಮೊದಲನೇ ಫ್ಲ್ಯಾನ್​​ನಂತೆ ಎಲ್ಲರೂ ಒಂದೊಂದು ಕಡೆ ಪಾರಾರಿ ಆಗಿದ್ದರು ಎಂದು ತಿಳಿದುಬಂದಿದೆ.

ಸಂಜೆ 4 ಗಂಟೆಗೆ ಕಾರ್ ಹೊರ ತಂದಿದ್ದ ಜಿಲಾನ್​, ರಾತ್ರಿ 8.30 ರ ವರೆಗೂ​ ಸಿಟಿ ಸುತ್ತಾಡಿರುವ ಹಂತಕರು. ಸಂಜೆ 4 ಗಂಟೆಯಿಂದಲೇ ಹಂತರಕ ಟೀಂ ಶಿವಮೊಗ್ಗ ಸಿಟಿ ರೌಡ್ಸ್ ಹಾಕಿತ್ತು ಎಂದು ತಿಳಿದುಬಂದಿದೆ. ಸಿಗೆಹಟ್ಟಿ, ಭಾರತಿ ನಗರ ಆಸುಪಾಸಿನಲ್ಲಿ ಹಂತರಕ ಟೀಂ ಫುಲ್​ರೌಂಡ್ಸ್​​ ಹಾಕಿತ್ತು. ಕಾರ್​​ನಲ್ಲಿ ಸುತ್ತಾಡಿಕೊಂಡೇ ಹರ್ಷ ಚಲನವಲನದ ಬಗ್ಗೆ ಗಮನ ಹರಿಸಲಾಗಿತ್ತು ಎಂದು ಮಾಹಿತಿ ಲಭಿಸಿದೆ.

ಪ್ರಕರಣ ಸಂಬಂಧಿಸಿ ಖಾಸಿಫ್​ನನ್ನು ಭದ್ರಾವತಿಯಲ್ಲಿಯೇ ಪೊಲೀಸರು ಬಂಧಿಸಿದ್ದಾರೆ. ಹಾಸನದಲ್ಲಿ ಮೂವರು ರಿಹಾನ್, ಆಶೀಪ್, ನೀಹಾಲ್, ಶಿವಮೊಗ್ಗದಲ್ಲಿ ನದೀಮ್​, ಬೆಂಗಳೂರು ಜಿಲಾನ್, ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಫ್ನಾನ್​ ಬಂಧಿಸಲಾಗಿದೆ.

ಈ ಮಧ್ಯೆ, ಶಿವಮೊಗ್ಗ ಮೆಗ್ಗಾನ್​ ಆಸ್ಪತ್ರೆಗೆ ಸಚಿವ ಕೆ.ಎಸ್​. ಈಶ್ವರಪ್ಪ ಭೇಟಿ ನೀಡಿದ್ದಾರೆ. ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ್ದಾರೆ. ಹರ್ಷನ ಶವಯಾತ್ರೆ ವೇಳೆ ಕಲ್ಲುತೂರಾಟ, ಗಲಾಟೆ ನಡೆದಿತ್ತು. ಗಲಾಟೆಯಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಲು ಕೆ.ಎಸ್. ಈಶ್ವರಪ್ಪ ಮೆಗ್ಗಾನ್ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.

ಇದನ್ನೂ ಓದಿ: ಶಿವಮೊಗ್ಗ ಪ್ರಕರಣ: ಮೃತ ಹರ್ಷನ ಮೊಬೈಲ್​ ಪತ್ತೆ, ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ಇದೆ ಕ್ರಿಮಿನಲ್ ಹಿನ್ನೆಲೆ!

Published On - 7:55 pm, Wed, 23 February 22

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು