AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಪ್ರಕರಣ: ಮೃತ ಹರ್ಷನ ಮೊಬೈಲ್​ ಪತ್ತೆ, ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಹರ್ಷ ಹತ್ಯೆ ಪ್ರಕರಣದಲ್ಲಿ ಈವರೆಗೆ 8 ಆರೋಪಿಗಳ ಬಂಧನ ಮಾಡಲಾಗಿದೆ. ಮೊದಲು 6 ಆರೋಪಿಗಳು, ಈಗ ಇಬ್ಬರು ಆರೋಪಿಗಳು ಸೆರೆಯಾಗಿದ್ದಾರೆ. ಫರಾಜ್ ಪಾಷಾ (24), ಅಬ್ದುಲ್ ಖಾದರ್ ಜಿಲಾನ್‌ (25) ಸೆರೆ ಆಗಿದ್ದಾರೆ. ಈಗಾಗಲೇ 6 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ.

ಶಿವಮೊಗ್ಗ ಪ್ರಕರಣ: ಮೃತ ಹರ್ಷನ ಮೊಬೈಲ್​ ಪತ್ತೆ, ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ
ಬಜರಂಗದಳ ಕಾರ್ಯಕರ್ತ ಹರ್ಷ
TV9 Web
| Updated By: ganapathi bhat|

Updated on:Feb 23, 2022 | 8:01 PM

Share

ಶಿವಮೊಗ್ಗ: ನಗರದಲ್ಲಿ ಬಜರಂಗದಳ ಕಾರ್ಯಕರ್ತ (Bajarangdal Hindu Activist) ಕೊಲೆ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ರಿಹಾನ್ ಷರೀಫ್, ಆಸಿಫ್ ಉಲ್ಲಾ ಖಾನ್, ನಿಹಾನ್, ಅಬ್ದುಲ್ ಅಫ್ನಾನ್​ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಈ ಮಧ್ಯೆ, ಬಜರಂಗದಳ ಕಾರ್ಯಕರ್ತ, ಮೃತಪಟ್ಟಿರುವ ಹರ್ಷನ ಮೊಬೈಲ್​ ಪತ್ತೆಯಾಗಿದೆ. ವಿಶೇಷ ತಂಡ ಹರ್ಷನ ಮೊಬೈಲ್ ಪತ್ತೆಹಚ್ಚಿದೆ. ಈ ಕುರಿತು ಶಿವಮೊಗ್ಗ ಪೊಲೀಸ್​ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ಹರ್ಷ ಕೊನೇ ಕ್ಷಣದಲ್ಲಿ ಮಾಡಿದ್ದ ಕರೆಗಳ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಹರ್ಷ ಹತ್ಯೆ (Harsha Death) ಪ್ರಕರಣದಲ್ಲಿ ಈವರೆಗೆ 8 ಆರೋಪಿಗಳ ಬಂಧನ ಮಾಡಲಾಗಿದೆ. ಮೊದಲು 6 ಆರೋಪಿಗಳು, ಈಗ ಇಬ್ಬರು ಆರೋಪಿಗಳು ಸೆರೆಯಾಗಿದ್ದಾರೆ. ಫರಾಜ್ ಪಾಷಾ (24), ಅಬ್ದುಲ್ ಖಾದರ್ ಜಿಲಾನ್‌ (25) ಸೆರೆ ಆಗಿದ್ದಾರೆ. ಈಗಾಗಲೇ 6 ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಇಂದು ಬಂಧಿಸಿದ ಫರಾಜ್ ಮತ್ತು ಜಿಲಾನ್‌ ತೀವ್ರ ವಿಚಾರಣೆ ನಡೆಸಲಾಗುತ್ತಿದೆ. ನಾಳೆಯೊಳಗೆ ಆರೋಪಿಗಳನ್ನು ಪೊಲೀಸರು ಜಡ್ಜ್‌ ಮುಂದೆ ಹಾಜರುಪಡಿಸಲಿದ್ದಾರೆ. ಇಡೀ ದಿನ ಹರ್ಷ ಚಟುವಟಿಕೆ ಮೇಲೆ ನಿಗಾ ಇಟ್ಟಿದ್ದ ಫರಾಜ್, ಹತ್ಯೆ ನಡೆಸಲು ಸೆಕೆಂಡ್‌ ಹ್ಯಾಂಡ್ ಕಾರು ತಂದಿದ್ದ ಜಿಲಾನ್ ಎಂಬಾತನನ್ನು ಬಂಧಿಸಲಾಗಿದೆ.

ಹರ್ಷ ಕೊಲೆ ನಡೆಯುವ ಕೆಲ ಗಂಟೆ ಮೊದಲು ಹತ್ಯೆಗೆ ಸ್ಕೆಚ್

ನಗರದಲ್ಲಿ ಬಜರಂಗದಳ ಕಾರ್ಯಕರ್ತನ (Bajarangdal Hindu Activist) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮಹತ್ವದ ವಿಚಾರಗಳು ಬುಧವಾರ (ಫೆಬ್ರವರಿ 23) ಲಭ್ಯವಾಗಿದೆ. ಹರ್ಷ ಕೊಲೆ (Harsha Death) ನಡೆಯುವ ಕೆಲ ಗಂಟೆ ಮೊದಲು, ಹತ್ಯೆಗೆ ಸ್ಕೆಚ್ ಹಾಕಿದ್ದರು. ಸೆಕೆಂಡ್ ಹ್ಯಾಂಡ್ ಸ್ವಿಫ್ಟ್ ಕಾರ್​ನಲ್ಲಿ ಬಂದಿದ್ದ ಹಂತಕರು ಕೊಲೆಗೆ ಸ್ಕೆಚ್ ಹಾಕಿದ್ರು ಎಂದು ಮಾಹಿತಿ ಲಭ್ಯವಾಗಿದೆ. ಕಾರಿನಲ್ಲಿದ್ದ 6 ಜನ ಒಟ್ಟಿಗೆ ಭಾರತಿ ಕಾಲೋನಿಗೆ ಎಂಟ್ರಿ ಕೊಟ್ಟಿದ್ದರು. ಕಾರು ಡೀಲರ್​ ಬದ್ರುದ್ದೀನ್ ಮಗ ಜಿಲಾನ್ ಸಹ ಬಂದಿದ್ದ. ಪ್ರಮುಖ ಆರೋಪಿ ರಿಯಾನ್ ಬಾಲ್ಯ ಸ್ನೇಹಿತ ಜಿಲಾನ್ ಬಂದಿದ್ದ. ಹರ್ಷಗೂ ಜಿಲಾನ್​ಗೂ ಯಾವುದೇ ರೀತಿ ವೈರತ್ವ ಇರಲಿಲ್ಲ. ಆದರೆ ರಿಯಾನ್ ಸಹಾಯಕ್ಕೆಂದು ಜಿಲಾನ್ ಬಂದಿದ್ದ ಎಂದು ತಿಳಿದುಬಂದಿದೆ.

ಹಿಂದೂ ಕಾರ್ಯಕರ್ತ ಹರ್ಷ ಕೊಲೆ ನಂತರ ಎಲ್ಲರ ಮೊಬೈಲ್ ಆಫ್​ ಆಗಿತ್ತು. ಕಮ್ಯೂನಿಕೇಷನ್​ಗಾಗಿ ಹಂತಕರ ಒರ್ವನ ಮೊಬೈಲ್ ಮಾತ್ರ​ ಆನ್ ಇತ್ತು. ಭದ್ರಾವತಿ ಮೂಲಕ ರೈಲಿನ ಮೂಲಕ ಹಂತಕರು ಪರಾರಿಯಾಗಿದ್ದರು. ರಾತ್ರಿ 10.30 ಗಂಟೆಯ ಶಿವಮೊಗ್ಗ ಟು ಬೆಂಗಳೂರು, ಶಿವಮೊಗ್ಗ ಟು ಮೈಸೂರುಗೆ ಹೊರಡುವ ರೈಲಿನ ಮೂಲಕ ಪರಾರಿ ಆಗಿದ್ದರು. ಭದ್ರಾವತಿ ರೈಲ್ವೆ ಸ್ಟೆಷನ್​ವರೆಗೂ ಕಾರಿನಲ್ಲಿಯೇ ಬಂದಿದ್ದ ಹಂತಕರು ಬಳಿಕ, ಮೊದಲನೇ ಫ್ಲ್ಯಾನ್​​ನಂತೆ ಎಲ್ಲರೂ ಒಂದೊಂದು ಕಡೆ ಪಾರಾರಿ ಆಗಿದ್ದರು ಎಂದು ತಿಳಿದುಬಂದಿದೆ.

ಇದನ್ನೂ ಓದಿ: ಶಿವಮೊಗ್ಗ ಗಲಭೆ: ಮೃತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಇದನ್ನೂ ಓದಿ: ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ: ಬಂಧಿತ ಆರೋಪಿಗಳಿಗೆ ಇದೆ ಕ್ರಿಮಿನಲ್ ಹಿನ್ನೆಲೆ!

Published On - 7:37 pm, Wed, 23 February 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ