AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ಆಗುಂಬೆಯಲ್ಲಿ ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು

ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ. ನಿರಂತರ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪದ ರಸ್ತೆ ತಡೆಗೋಡೆ ಕುಸಿತವಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಮುಂದುವರಿದ ಭಾರೀ ಮಳೆ: ಆಗುಂಬೆಯಲ್ಲಿ ನೀರಿನಲ್ಲೇ ಶವ ಹೊತ್ತು ಸಾಗಿದ ಗ್ರಾಮಸ್ಥರು
ಮಳೆಯಿಂದಾಗಿ ರಸ್ತೆಯಿಲ್ಲದೇ ಶವಸಂಸ್ಕಾರಕ್ಕೆ ಪರದಾಟ
TV9 Web
| Edited By: |

Updated on: Aug 07, 2022 | 11:53 AM

Share

ಶಿವಮೊಗ್ಗ: ರಸ್ತೆಯಿಲ್ಲದೇ ಶವವನ್ನು ನೀರಿನಲ್ಲೇ ಹೊತ್ತು ಗ್ರಾಮಸ್ಥರು (villagers)  ಸಾಗಿರುವಂತಹ ಘಟನೆ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ ನಡೆದಿದೆ. ಗ್ರಾಮದಿಂದ ಸ್ಮಶಾನ ಜಾಗಕ್ಕೆ ರಸ್ತೆಯಿಲ್ಲದೇ ಗ್ರಾಮಸ್ಥರು ಸಂಕಷ್ಟಕ್ಕೆ ಸಿಲುಕಿದ್ದು, ಕೋಡ್ಲು ಗ್ರಾಮದ ತಮ್ಮಯ್ಯ ಗೌಡ(80) ಶವ ನೀರಿನಲ್ಲೇ ಹೊತ್ತು ಗ್ರಾಮಸ್ಥರು ಸಾಗಿದ್ದಾರೆ. ವಯೋ ಸಹಜವಾಗಿ ಕೋಡ್ಲು ಗ್ರಾಮದ ತಮ್ಮಯ್ಯ ಗೌಡ ಸಾವನ್ನಪ್ಪಿದ್ದಾರೆ. ನೀರಿನಲ್ಲೇ ಹೊತ್ತು ಸಾಗಿ, ಸುರಿವ ಮಳೆಯಲ್ಲಿ ಗ್ರಾಮಸ್ಥರು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ಪ್ರತಿ ಮಳೆಗಾಲದಲ್ಲಿ ಅಂತ್ಯಕ್ರಿಯೆ ನಡೆಸಲು ಕೋಡ್ಲು ಗ್ರಾಮಸ್ಥರು ಪರದಾಡುತ್ತಾರೆ. ಮಳೆಗಾಲದಲ್ಲಿ 4-5 ತಿಂಗಳು ಸ್ಮಶಾನ ರಸ್ತೆ ಮುಳುಗಡೆಯಾಗುತ್ತದೆ. ಸ್ಮಶಾನಕ್ಕೆ ಎತ್ತರಿಸಿದ ರಸ್ತೆ ಮಾಡುವಂತೆ ಹಲವು ಬಾರಿ ಗ್ರಾಮಸ್ಥರು ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಜನಪ್ರತಿನಿಧಿ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕೋಡ್ಲು ಗ್ರಾಮಸ್ಥರಿಗೆ ಸಂಕಷ್ಟ ಎದುರಾಗಿದ್ದು, ಸ್ಮಶಾನಕ್ಕೆ ಹೋಗುವ ರಸ್ತೆ ಅಭಿವೃದ್ಧಿ ಪಡಿಸುವಂತೆ ಒತ್ತಾಯಿಸುದ್ದಾರೆ.

ಇದನ್ನೂ ಓದಿ: Karnataka Rain: ಕರ್ನಾಟಕದಾದ್ಯಂತ ಇಂದಿನಿಂದ 3 ದಿನ ಮಳೆಯಿಂದ ಹಳದಿ ಅಲರ್ಟ್​ ಘೋಷಣೆ

ಮಳೆ ಅವಾಂತರ: ರಸ್ತೆ ಮುಳುಗಡೆ

ಕೊಡಗು: ಜಿಲ್ಲೆಯಲ್ಲಿ ಮಳೆ ಅವಾಂತರದಿಂದಾಗಿ ಗ್ರಾಮೀಣ ರಸ್ತೆಗಳು ಮುಳುಗಡೆಯಾಗಿವೆ. ನಾಪೋಕ್ಲು-ಮೂರ್ನಾಡು ಸಂಪರ್ಕ ಕಡಿತವಾಗಿದೆ. ಮಡಿಕೇರಿ ತಾಲೂಕಿನ ಹೊದವಾಡ ಗ್ರಾಮದಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ತಗ್ಗು ಪ್ರದೇಶದ ಮನೆ, ಕಾಫಿತೋಟ ಕೃಷಿ ಭೂಮಿ ಮುಳುಗಡೆಯಾಗಿವೆ. ಮುನ್ನಚ್ಚರಿಕಾ ಫಲಕ, ಬ್ಯಾರಿಕೇಡ್ ಅಳವಡಿಸದೆ ಸ್ಥಳೀಯಾಡಳಿತ ನಿರ್ಲಕ್ಷ್ಯ ತೋರಿದೆ.

ಮುಂದವರೆದ ಮಳೆ ಆರ್ಭಟ: ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ 

ಹಾಸನ: ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಭಾರೀ ಮಳೆಗೆ ನಿರ್ಮಾಣ ಹಂತದ ರಾಷ್ಟ್ರೀಯ ಹೆದ್ದಾರಿ ಕೊಚ್ಚಿ ಹೋಗಿದೆ. ನಿರಂತರ ಮಳೆಯಿಂದ ಸಕಲೇಶಪುರ ತಾಲ್ಲೂಕಿನ ದೋಣಿಗಲ್ ಸಮೀಪದ ರಸ್ತೆ ತಡೆಗೋಡೆ ಕುಸಿತವಾಗಿದೆ. ನಿರಂತರ ಮಳೆಗೆ ಸುಮಾರು 25. ಮೀಟರ್ ಉದ್ದಕ್ಕೆ ಬೃಹತ್ ತಡೆಗೋಡೆ ಕೊಚ್ಚಿಹೋಗಿದೆ. ಚತುಷ್ಪತ ರಸ್ತೆ ನಿರ್ಮಾಣಕ್ಕಾಗಿ ಕೋಟ್ಯಾಂತರ ರೂ ವೆಚ್ಚದಲ್ಲಿ ನಿರ್ಮಿಸಿದ್ದ ತಡೆಗೋಡೆ ನಾಶವಾಗಿದೆ. ಸತತ ಆರು ದಿನಗಳಿಂದ ಮಲೆನಾಡಲ್ಲಿ  ಮಳೆ ಆರ್ಭಟ ನಿಂತಿಲ್ಲ. ಈ ಹಿಂದೆ ದೋಣಿಗಲ್ ಸಮೀಪ ಭೂ ಕುಸಿತವಾಗಿದ್ದ ಸ್ಥಳದಿಂದ ಒಂದು ಕಿಲೋಮೀಟರ್ ಹಿಂದೆ  ತಡೆಗೋಡೆ ಕೊಚ್ಚಿ ಹೋಗಿದೆ. ಮತ್ತಷ್ಟು ಮಳೆ ಹೆಚ್ಚಾದರೆ ಮುಖ್ಯ ರಸ್ತೆಗೆ ಹಾನಿಯಾಗೋ ಆತಂಕ ಎದುರಾಗಿದೆ.

ಕುಸಿದು ಬಿದ್ದ ಸೇತುವೆ

ರಾಮನಗರ: ಜಿಲ್ಲೆಯಲ್ಲಿ ಧಾರಾಕಾರ ಮಳೆ ಹಿನ್ನೆಲೆ ನೀರಿನ ರಭಸಕ್ಕೆ ಕೊಂಡಾಪುರ-ಬಾಣಹಳ್ಳಿ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ಸೇತುವೆ ಕುಸಿದು ಬಿದ್ದಿದೆ. ಕಣ್ವ ಜಲಾಶಯದಿಂದ ಹೆಚ್ಚಿನ ನೀರು ಹೊರ ಬಿಟ್ಟ ಹಿನ್ನೆಲೆ ಸೇತುವೆ ಕುಸಿದು ಬಿದ್ದಿದೆ. ಗ್ರಾಮಗಳಲ್ಲಿನ ಜನರು ಇದೀಗ ಹತ್ತಾರು ಕಿಮೀ ಗಟ್ಟಲೆ ಬಳಸಿಕೊಂಡು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?