AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು

ಜಿಲ್ಲೆ ಮಳೆಗೆ ನಲುಗಿದೆ. ಸೋಮಿನಕೊಪ್ಪದಲ್ಲಿ ಯುವಕನೊಬ್ಬ ಮೀನು ಹಿಡಿಯಲು ಹೋಗಿ ಮೃತಪ್ಟಿದ್ದಾನೆ. ಸೊರಬದಲ್ಲಿ ವರದಾ ನದಿಯ ನೀರು ನುಗ್ಗಿ ಐವತ್ತಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿವೆ. ಜಿಲ್ಲೆಯ ಹಲವೆಡೆ ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಸ್ವಚ್ಛತಾ ಕಾರ್ಯ ಆರಂಭಗೊಂಡಿದೆ.

Shivamogga: ಮಳೆಗೆ ನಲುಗಿದ ಶಿವಮೊಗ್ಗ; ಸೋಮಿನಕೊಪ್ಪದಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವು
ಸೊರಬ ತಾಲೂಕಿನ ನೆಲ್ಲಿಕೊಪ್ಪ ಗ್ರಾಮಕ್ಕೆ ನುಗ್ಗಿರುವ ವರದಾ ನದಿಯ ನೀರು
TV9 Web
| Edited By: |

Updated on: Jul 25, 2021 | 10:31 AM

Share

ಶಿವಮೊಗ್ಗ: ಶಿವಮೊಗ್ಗ ತಾಲೂಕಿನ ಸೋಮಿನಕೊಪ್ಪ ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ಯುವಕ ಸಾವಿಗೀಡಾಗಿದ್ದಾನೆ. ಯುವಕನನ್ನು ಸೋಮಿನಕೊಪ್ಪ ಗ್ರಾಮದ ಹಾಲೇಶ್(35) ಎಂದು ಗುರುತಿಸಲಾಗಿದೆ. ವಿನೋಬ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೊರಬ: ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ನೆಲ್ಲಿಕೊಪ್ಪ ಗ್ರಾಮಕ್ಕೆ ವರದಾ ನದಿಯ ನೀರು ನುಗ್ಗಿದೆ. ಗ್ರಾಮದ 50ಕ್ಕೂ ಹೆಚ್ಚು ಮನೆಗಳು ಜಲಾವೃತಗೊಂಡಿದೆ. ಸಮೀಪದ ಜಮೀನುಗಳಿಗೂ ನೀರು ನುಗ್ಗಿದ್ದು, ಶುಂಠಿ ಮತ್ತು ವಿವಿಧ ತರಕಾರಿ ಬೆಳೆಗಳು ನೀರು ಪಾಲಾಗಿವೆ. ಕಳೆದ ಎರಡು ದಿನಗಳಿಂದ ಗ್ರಾಮಸ್ಥರು ಪರದಾಟ ನಡೆಸುತ್ತಿದ್ದರೂ ಗ್ರಾಮಕ್ಕೆ ಭೇಟಿ ನೀಡದ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ವಿರುದ್ಧ ಜನರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಂಗಾ ಅಣೆಕಟ್ಟು: ಮಲೆನಾಡಿನ ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತುಂಗಾ ಡ್ಯಾಂನಿಂದ 72,717 ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದೆ. ತುಂಗಾ ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಮಳೆ ಹೆಚ್ಚಾದರೆ ಇನ್ನೂ ಹೆಚ್ಚು ನೀರು ಬಿಡುಗಡೆ ಸಾಧ್ಯತೆ ಇದೆ.

ಸಾಗರ: ಶಿವಮೊಗ್ಗ ಜಿಲ್ಲೆಯಲ್ಲಿ ವರದಾ ನದಿಯ ಪ್ರವಾಹಕ್ಕೆ ಸಿಲುಕಿ ಹಲವಾರು ಗ್ರಾಮಗಳು ನಲುಗಿ ಹೋಗಿವೆ. ಇಷ್ಟೇ ಅಲ್ಲ ಸಾಗರ ತಾಲೂಕಿನ ಸಿರವಾಳ ಗ್ರಾಮದಲ್ಲಿ ಧಾರಾಕಾರ ಮಳೆಗೆ ಮನೆಗಳು ಕುಸಿದು ಬಿದ್ದಿವೆ. ಈ ಕುರಿತ ವಿಡಿಯೊ ವರದಿ ಇಲ್ಲಿದೆ.

ಜಿಲ್ಲೆಯ ಕೆಲವು ಭಾಗದಲ್ಲಿ ಮಳೆ ತಗ್ಗಿದ ಹಿನ್ನೆಲೆಯಲ್ಲಿ ಸ್ವಚ್ಛತಾಕಾರ್ಯ ನಡೆಸಲಾಗುತ್ತಿದೆ. ಭಾರಿ ಮಳೆಯಿಂದಾಗಿ ಹಲವು ಮನೆಗಳಿಗೆ ನೀರು ನುಗ್ಗಿತ್ತು. ಈಗ ಮಳೆ ತಗ್ಗಿರುವುದರಿಂದ ವಿವಿಧ ಬಡಾವಣೆಗಳ ಮನೆಗಳಲ್ಲಿ ಕ್ಲೀನಿಂಗ್ ನಡೆಸಲಾಗುತ್ತಿದೆ.

ಇದನ್ನೂ ಓದಿ: Maharashtra Rains: ಮಹಾರಾಷ್ಟ್ರದಲ್ಲಿ ಮಳೆ, ಪ್ರವಾಹ..ಭೂಕುಸಿತ; ಸಹಾಯಕ್ಕೆ ಧಾವಿಸಿದ ಭಾರತೀಯ ವಾಯುಸೇನೆ

ಇದನ್ನೂ ಓದಿ: ಭಾರಿ ಮಳೆಗೆ ಬೆಳಗಾವಿ, ಉತ್ತರ ಕನ್ನಡ, ಮಲೆನಾಡಲ್ಲಿ ಹೆಚ್ಚು ಅನಾಹುತ; ಕಂದಾಯ ಸಚಿವ ಆರ್.ಅಶೋಕ್ ಮಾಹಿತಿ

(Heavy rain in Shivamogga; a youth from Sominakoppa dead while fishing in a lake)

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ