AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಬಿಗಿ ಬಂದೋಬಸ್ತ್​ಗೆ ವ್ಯವಸ್ಥೆ​​: ಎಡಿಜಿಪಿ ಆರ್ ಹಿತೇಂದ್ರ

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಮತ್ತು ಅ.1 ಕ್ಕೆ ಈದ್ ಮಿಲಾದ್ ಹಬ್ಬದ ಮೆರವಣಿಗೆ ಬಿಗಿ ಬಂದೋಬಸ್ತ್​​ ಒದಗಿಸಲಾಗಿದ್ದು, 15 ಕೆಎಸ್​ಆರ್​ಪಿ ತುಕಡಿ, 2000 ಪೊಲೀಸರು, 15 ಡಿವೈಎಸ್ಪಿ ಮತ್ತು ಒಂದು ಆರ್​​ಎಎಫ್ ತುಕಡಿ ನಿಯೋಜನೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಹೇಳಿದ್ದಾರೆ.    

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಬಿಗಿ ಬಂದೋಬಸ್ತ್​ಗೆ ವ್ಯವಸ್ಥೆ​​: ಎಡಿಜಿಪಿ ಆರ್ ಹಿತೇಂದ್ರ
ಎಡಿಜಿಪಿ ಆರ್ ಹಿತೇಂದ್ರ
Follow us
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ

Updated on: Sep 22, 2023 | 6:20 PM

ಶಿವಮೊಗ್ಗ, ಸೆಪ್ಟೆಂಬರ್​ 22: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ ಒಟ್ಟಿಗೆ ಬಂದಿವೆ. ಸೆ. 28 ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಮತ್ತು ಅ.1ಕ್ಕೆ ಈದ್ ಮಿಲಾದ್ ಹಬ್ಬದ ಮೆರವಣಿಗೆ ಇದೆ. ಹಾಗಾಗಿ 15 ಕೆಎಸ್​ಆರ್​ಪಿ ತುಕಡಿ, 2000 ಪೊಲೀಸರು, 15 ಡಿವೈಎಸ್ಪಿ, ಒಂದು ಆರ್​ಎಎಫ್ ತುಕಡಿ ಬಂದೋಬಸ್ತ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ (ADGP) ಆರ್ ಹಿತೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ತುಂಬಾ ಸೂಕ್ಷ್ಮ ಪ್ರದೇಶ ಆಗಿದೆ ಎಂದರು.

ನಿನ್ನೆ ತಡರಾತ್ರಿ ಒಂದೇ ದಿನ ಮೂರು ಘಟನೆಗಳಿಂದ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾರವಣ ನಿರ್ಮಾಣಗೊಂಡಿತ್ತು. ಕೂಡಲೇ ಪರಿಸ್ಥಿತಿಯನ್ನು ಪೊಲೀಸ್​ ಅಧಿಕಾರಿಗಳು ನಿಯಂತ್ರಣಕ್ಕೆ ಪಡೆದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಟಾಕಿ ಹಚ್ಚುವ ವಿಚಾರವಾಗಿ ಮಾತಿನ ಚಕಮಕಿ ಉಂಟಾಗಿದ್ದು, ಬಳಿಕ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಲೆನಾಡಿನಲ್ಲಿ ರೌಡಿಗಳ ಹಾವಳಿ ತಡೆಯಲು ಇಲಾಖೆಯಿಂದ ಕಠಿಣ ಕ್ರಮ

ಮಲೆನಾಡಿನಲ್ಲಿ ರೌಡಿಗಳ ಹಾವಳಿ ತಡೆಯಲು ಇಲಾಖೆಯಿಂದ ಕಠಿಣ ಕ್ರಮಕೈಗೊಳ್ಳಲಾಗಿದೆ. ಜೈಲಿನಿಂದ ರೌಡಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಬೆಳಕಿಗೆ ಬಂದಿದೆ. ರೌಡಿಗಳ ನಿಯಂತ್ರಣಕ್ಕೆ ಶಿವಮೊಗ್ಗ ಪೊಲೀಸರಿಂದ ಗಡಿಪಾರು ಸೇರಿದಂತೆ ಇತರೆ ಕ್ರಮ ಕೈಗೊಳ್ಳಲಾಗಿದೆ. ಉಗ್ರ ಚಟುವಟಿಕೆ ಮಟ್ಟಹಾಕಲು ಎನ್​ಐಎ, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ

ದೆಹಲಿಯಲ್ಲಿ ಓರ್ವ ಆರೋಪಿ ಬಂಧಿಸಿದ್ದು, NIA ತನಿಖೆ ನಡೆಸುತ್ತಿದೆ. ಕರ್ತವ್ಯಲೋಪ ಹಿನ್ನೆಲೆ ಭದ್ರಾವತಿ ನ್ಯೂಟೌನ್ ಠಾಣೆ PSI ಅಮಾನತು ಮಾಡಲಾಗಿದೆ. ರೌಡಿಸಂಗೆ 40 ವರ್ಷಗಳ ಇತಿಹಾಸವಿದೆ. ನಿರಂತರ ಆಪರೇಷನ್ ಮೂಲಕ ರೌಡಿಸಂ ಮಟ್ಟ ಹಾಕಲು ಸಾಧ್ಯ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲ ಗಾಂಜಾ ಹಾವಳಿ 

ಜಿಲ್ಲೆಯಲ್ಲಿ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಹಾವಳಿ ಜೋರಾಗಿದೆ. ಗಾಂಜಾ ದಂಧೆ ತಡೆಯಲು ಪೊಲೀಸ್ ಇಲಾಖೆ ದೊಡ್ಡ ಆಪರೇಶನ್ ಮಾಡಿವೆ. ಶಿವಮೊಗ್ಗಕ್ಕೆ ಆಂಧ್ರ ಮತ್ತು ಒಡಿಸ್ಸಾದಿಂದ ಗಾಂಜಾ ಪೂರೈಕೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿ 10 ರಿಂದ 12 ಟನ್ ಗಾಂಜಾ ಸೀಜ್ ಆಗಿದೆ. 5000 ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

ಗಾಂಜಾ ದಂಧೆ ತಡೆಗೆ ಪೊಲೀಸ್ ಇಲಾಖೆಗೆ ಇತರೆ ಇಲಾಖೆ ಕೈಜೋಡಿಸಬೇಕಿದೆ. ಬೇರು ಮಟ್ಟದಿಂದ ಗಾಂಜಾ ದಂಧೆ ಕಿತ್ತು ಹಾಕಬೇಕಿದೆ. ಗಾಂಜಾ ತಡೆಗೆ ನಿರಂತರ ಕಾರ್ಯಾಚರಣೆ ಅಗತ್ಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ