AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಬಿಗಿ ಬಂದೋಬಸ್ತ್​ಗೆ ವ್ಯವಸ್ಥೆ​​: ಎಡಿಜಿಪಿ ಆರ್ ಹಿತೇಂದ್ರ

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಮತ್ತು ಅ.1 ಕ್ಕೆ ಈದ್ ಮಿಲಾದ್ ಹಬ್ಬದ ಮೆರವಣಿಗೆ ಬಿಗಿ ಬಂದೋಬಸ್ತ್​​ ಒದಗಿಸಲಾಗಿದ್ದು, 15 ಕೆಎಸ್​ಆರ್​ಪಿ ತುಕಡಿ, 2000 ಪೊಲೀಸರು, 15 ಡಿವೈಎಸ್ಪಿ ಮತ್ತು ಒಂದು ಆರ್​​ಎಎಫ್ ತುಕಡಿ ನಿಯೋಜನೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್ ಹಿತೇಂದ್ರ ಹೇಳಿದ್ದಾರೆ.    

ಸೆ. 28ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಬಿಗಿ ಬಂದೋಬಸ್ತ್​ಗೆ ವ್ಯವಸ್ಥೆ​​: ಎಡಿಜಿಪಿ ಆರ್ ಹಿತೇಂದ್ರ
ಎಡಿಜಿಪಿ ಆರ್ ಹಿತೇಂದ್ರ
Basavaraj Yaraganavi
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 22, 2023 | 6:20 PM

Share

ಶಿವಮೊಗ್ಗ, ಸೆಪ್ಟೆಂಬರ್​ 22: ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಹಬ್ಬ ಒಟ್ಟಿಗೆ ಬಂದಿವೆ. ಸೆ. 28 ಕ್ಕೆ ಹಿಂದೂ ಮಹಾಸಭಾ ಗಣೇಶ ವಿಸರ್ಜನೆ ಮೆರವಣಿಗೆ ಮತ್ತು ಅ.1ಕ್ಕೆ ಈದ್ ಮಿಲಾದ್ ಹಬ್ಬದ ಮೆರವಣಿಗೆ ಇದೆ. ಹಾಗಾಗಿ 15 ಕೆಎಸ್​ಆರ್​ಪಿ ತುಕಡಿ, 2000 ಪೊಲೀಸರು, 15 ಡಿವೈಎಸ್ಪಿ, ಒಂದು ಆರ್​ಎಎಫ್ ತುಕಡಿ ಬಂದೋಬಸ್ತ್​​ಗೆ ವ್ಯವಸ್ಥೆ ಮಾಡಲಾಗಿದೆ ಎಂದು ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ (ADGP) ಆರ್ ಹಿತೇಂದ್ರ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗ ಜಿಲ್ಲೆ ತುಂಬಾ ಸೂಕ್ಷ್ಮ ಪ್ರದೇಶ ಆಗಿದೆ ಎಂದರು.

ನಿನ್ನೆ ತಡರಾತ್ರಿ ಒಂದೇ ದಿನ ಮೂರು ಘಟನೆಗಳಿಂದ ಶಿವಮೊಗ್ಗ ನಗರದಲ್ಲಿ ಬಿಗುವಿನ ವಾತಾರವಣ ನಿರ್ಮಾಣಗೊಂಡಿತ್ತು. ಕೂಡಲೇ ಪರಿಸ್ಥಿತಿಯನ್ನು ಪೊಲೀಸ್​ ಅಧಿಕಾರಿಗಳು ನಿಯಂತ್ರಣಕ್ಕೆ ಪಡೆದಿದ್ದಾರೆ. ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಪಟಾಕಿ ಹಚ್ಚುವ ವಿಚಾರವಾಗಿ ಮಾತಿನ ಚಕಮಕಿ ಉಂಟಾಗಿದ್ದು, ಬಳಿಕ ಪರಿಸ್ಥಿತಿಯನ್ನು ಪೊಲೀಸರು ತಿಳಿಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಮಲೆನಾಡಿನಲ್ಲಿ ರೌಡಿಗಳ ಹಾವಳಿ ತಡೆಯಲು ಇಲಾಖೆಯಿಂದ ಕಠಿಣ ಕ್ರಮ

ಮಲೆನಾಡಿನಲ್ಲಿ ರೌಡಿಗಳ ಹಾವಳಿ ತಡೆಯಲು ಇಲಾಖೆಯಿಂದ ಕಠಿಣ ಕ್ರಮಕೈಗೊಳ್ಳಲಾಗಿದೆ. ಜೈಲಿನಿಂದ ರೌಡಿಯೊಬ್ಬ ಬೆದರಿಕೆ ಕರೆ ಮಾಡಿದ್ದು ಬೆಳಕಿಗೆ ಬಂದಿದೆ. ರೌಡಿಗಳ ನಿಯಂತ್ರಣಕ್ಕೆ ಶಿವಮೊಗ್ಗ ಪೊಲೀಸರಿಂದ ಗಡಿಪಾರು ಸೇರಿದಂತೆ ಇತರೆ ಕ್ರಮ ಕೈಗೊಳ್ಳಲಾಗಿದೆ. ಉಗ್ರ ಚಟುವಟಿಕೆ ಮಟ್ಟಹಾಕಲು ಎನ್​ಐಎ, ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: Shivamogga: ಶಿವಮೊಗ್ಗದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ, ಐವರಿಗೆ ಚಾಕು ಇರಿತ

ದೆಹಲಿಯಲ್ಲಿ ಓರ್ವ ಆರೋಪಿ ಬಂಧಿಸಿದ್ದು, NIA ತನಿಖೆ ನಡೆಸುತ್ತಿದೆ. ಕರ್ತವ್ಯಲೋಪ ಹಿನ್ನೆಲೆ ಭದ್ರಾವತಿ ನ್ಯೂಟೌನ್ ಠಾಣೆ PSI ಅಮಾನತು ಮಾಡಲಾಗಿದೆ. ರೌಡಿಸಂಗೆ 40 ವರ್ಷಗಳ ಇತಿಹಾಸವಿದೆ. ನಿರಂತರ ಆಪರೇಷನ್ ಮೂಲಕ ರೌಡಿಸಂ ಮಟ್ಟ ಹಾಕಲು ಸಾಧ್ಯ ಎಂದು ಹೇಳಿದ್ದಾರೆ.

ಜಿಲ್ಲೆಯಲ್ಲ ಗಾಂಜಾ ಹಾವಳಿ 

ಜಿಲ್ಲೆಯಲ್ಲಿ ಸೇರಿದಂತೆ ರಾಜ್ಯದಲ್ಲಿ ಗಾಂಜಾ ಹಾವಳಿ ಜೋರಾಗಿದೆ. ಗಾಂಜಾ ದಂಧೆ ತಡೆಯಲು ಪೊಲೀಸ್ ಇಲಾಖೆ ದೊಡ್ಡ ಆಪರೇಶನ್ ಮಾಡಿವೆ. ಶಿವಮೊಗ್ಗಕ್ಕೆ ಆಂಧ್ರ ಮತ್ತು ಒಡಿಸ್ಸಾದಿಂದ ಗಾಂಜಾ ಪೂರೈಕೆ ಮಾಡಲಾಗುತ್ತಿದ್ದು, ರಾಜ್ಯದಲ್ಲಿ 10 ರಿಂದ 12 ಟನ್ ಗಾಂಜಾ ಸೀಜ್ ಆಗಿದೆ. 5000 ಕೇಸ್ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಶಿವಮೊಗ್ಗ: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ 2 ಕೋಮಿನ ಗುಂಪು ನಡುವೆ ವಾಗ್ವಾದ

ಗಾಂಜಾ ದಂಧೆ ತಡೆಗೆ ಪೊಲೀಸ್ ಇಲಾಖೆಗೆ ಇತರೆ ಇಲಾಖೆ ಕೈಜೋಡಿಸಬೇಕಿದೆ. ಬೇರು ಮಟ್ಟದಿಂದ ಗಾಂಜಾ ದಂಧೆ ಕಿತ್ತು ಹಾಕಬೇಕಿದೆ. ಗಾಂಜಾ ತಡೆಗೆ ನಿರಂತರ ಕಾರ್ಯಾಚರಣೆ ಅಗತ್ಯ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಇಂಗ್ಲೆಂಡ್​ಗೆ ಉಚಿತವಾಗಿ ವಿಕೆಟ್ ನೀಡಿದ ರಿಷಭ್ ಪಂತ್
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್