AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ಕೋಮುಗಲಭೆಗೆ ಸಾಕ್ಷಿಯಾಗಿದ್ದ ರಾಗಿಗುಡ್ಡದಲ್ಲಿ ಭಾವೈಕ್ಯತೆ ಅಲೆ, ಮುಸ್ಲಿಮರಿಂದ ಗಣಪನಿಗೆ ಹೂವಿನ ಹಾರ

ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ವಾತಾವರಣ ಪ್ರಕ್ಷ್ಯಬ್ಧಗೊಂಡಿದೆ. ಬುಧವಾರ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಕೋಮುಗಲಭೆ ಸಂಭವಿಸಿತ್ತು. ಈ ನಡುವೆ ಶಿವಮೊಗ್ಗದಲ್ಲಿ ಹಿಂದೂ, ಮುಸ್ಲಿಮರು ಒಂದಾಗಿ ಗಣೇಶ ವಿಸರ್ಜಣೆ ಮೆರವಣಿಗೆ ನಡೆಸಿದರು. ಶಿವಮೊಗ್ಗ ನಗರದಲ್ಲಿ ಭಾವೈಕ್ಯತೆ ಅಲೆ ಬೀಸಿದೆ.

Basavaraj Yaraganavi
| Edited By: |

Updated on:Sep 13, 2024 | 8:14 AM

Share

ಶಿವಮೊಗ್ಗ, ಸೆಪ್ಟೆಂಬರ್​ 13: ಕಳೆದ ವರ್ಷ ಈದ್​ ಮಿಲಾದ್​​ ಸಮಯದಲ್ಲಿ ಕೋಮುಗಲಭೆಗೆ ಸಾಕ್ಷಿಯಾಗಿದ್ದ ರಾಗಿಗುಡ್ಡದಲ್ಲಿ (Ragi Gudda) ಭಾವೈಕ್ಯತೆಯ ಅಲೆ ಬೀಸಿದೆ. ಗುರುವಾರ ನಡೆದ ಗಣೇಶ ವಿಸರ್ಜನೆ ಮೆರವಣಿಗೆ (Ganesha Visarjan) ವೇಳೆ ಇಮಾಮ್ ಬಾಡ ಮಸೀದಿಯವರು ಗಣಪನಿಗೆ ಹೂವಿನ ಹಾರ ಹಾಕಿ ಮೆರವಣಿಗೆಯಲ್ಲಿ ಕುಣಿದು ಕುಪ್ಪಳಿಸಿದ್ದಾರೆ‌. ಇದರಿಂದ ಗಣಪತಿ ವಿಸರ್ಜನಾ ಮಂಡಳಿಯ ಯುವಕರಿಗೆ ಸಂತೋಷವಾಗಿದೆ. ಈ ಬಾರಿ ಈದ್ ಮಿಲಾದ್ ಮೆರವಣಿಗೆಯಲ್ಲಿ ಭಾಗಿಯಾಗುವುದಾಗಿ ನೂರುಲ್ಲಾರಿಗೆ ಹಿಂದೂ ಯುವಕರು ಆಶ್ವಾಸನೆ ನೀಡಿದ್ದಾರೆ.

ಮತ್ತೊಂದು ಕಡೆ ಮುರಾದ್ ನಗರದಲ್ಲಿರುವ ಅಹಮದ್ ಕಾಲೋನಿಯ ಸೆಕೆಂಡ್ ಕ್ರಾಸ್​ನಲ್ಲಿ ಸ್ನೇಹಜ್ಯೋತಿ ಗೆಳೆಯರ ಬಳಗದವರು ಗಣಪತಿ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದರು. ಗುರುವಾರ ನಡೆದ ಗಣಪತಿ ವಿಸರ್ಜನೆ ಮೆರವಣಿಗೆ ಅಹಮದ್ ಕಾಲೋನಿಯ ಸೆಕೆಂಡ್ ಕ್ರಾಸ್​​ನಿಂದ ಕೆಜಿಎನ್ ಸರ್ಕಲ್, ಸಂದೇಶ್ ಮೋಟಾರ್ ಮೂಲಕ ಇಮಾಬಾಡ ಮಸೀದಿ ರಸ್ತೆಯ ಮೂಲಕ ಸೀಗೆಹಟ್ಟಿ ವೃತ್ತ ತಲುಪಿತ್ತು.

ಇದನ್ನೂ ಓದಿ:  ಗಲಭೆ ಬಳಿಕ ಸಹಜ ಸ್ಥಿತಿಗೆ ಮರಳುತ್ತಿರುವ ಶಿವಮೊಗ್ಗದ ರಾಗಿಗುಡ್ಡ ಪ್ರದೇಶ; ಸೆಕ್ಷನ್ 144 ಮುಂದುವರಿಕೆ

ಇಮಾಮ್ ಬಾಡ ಮಸೀದಿ ರಸ್ತೆಗೆ ಮೆರವಣಿಗೆ ಬಂದಾಗ ಮಸೀದಿ ಕಮಿಟಿಯ ನೂರುಲ್ಲಾರ್​​ ಮತ್ತು ಅವರ ಸಹಚರರು ಗಣಪನಿಗೆ ಹೂವಿನ ಹಾರಹಾಕಿ ನಮಸ್ಕರಿಸಿ ಸೌಹಾರ್ದಯುತಕ್ಕೆ ಸಾಕ್ಷಿಯಾದರು. ಈ ಹಿಂದೆ ಎರಡು ಬಾರಿ ಇಮಾಮ್ ಬಾಡ ಮಸೀದಿ ರಸ್ತೆಗೆ ಮೆರವಣಿಗೆ ಬಂದಾಗ ಮಾತಿನ ಚಕಮಕಿ ನಡೆದಿತ್ತು. ಆದರೆ ಈ ಬಾರಿ ಭಾವೈಕ್ಯತೆಯಿಂದ ಗಣಪತಿಯನ್ನು ವಿಸರ್ಜಿಸಲಾಗಿದೆ.

ರಾಗಿಗುಡ್ಡದಲ್ಲಿ ಗಲಭೆ

ಕಳೆದ ವರ್ಷ ಈದ್ ಮಿಲಾದ್ ಹಬ್ಬದಾಚರಣೆ ವೇಳೆ ರಾಗಿಗುಡ್ಡದಲ್ಲಿ ಪ್ರಚೋದನಾಕಾರಿ ಫ್ಲೇಕ್ಸ್ ಮತ್ತು ಕಟೌಟ್ ವಿವಾದ ಶುರುಗಾಗಿತ್ತು. ಇದು ಬಳಿಕ ಎರಡು ಕೋಮಿನ ನಡುವೆ ಹಿಂಸಾರೂಪ ಪಡೆದುಕೊಂಡಿತ್ತು. 15 ದಿನಗಳ ರಾಗಿಗುಡ್ಡದಲ್ಲಿ 144 ಸೆಕ್ಷನ್ ಜಾರಿ ಕೂಡ ಮಾಡಲಾಗಿತ್ತು. ಎಲ್ಲೆಂದರಲ್ಲಿ ಕಲ್ಲು ತೂರಾಟ, ಲಾಠಿ ಚಾರ್ಜ್, ಮನೆ ಮೇಲೆ ಕಲ್ಲುತೂರಾಟ ಸೇರಿದಂತೆ ಅನೇಕ ಹಿಂಸಾರೂಪದ ಘಟನೆಗಳು ನಡೆದಿದ್ದವು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 7:34 am, Fri, 13 September 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್