AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ

Araga Jnanendra: ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು.

ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
ಭದ್ರಾವತಿ ಜಂಕ್ಷನ್ ಬಳಿ ಗೃಹ ಸಚಿವ ಆರಗ ಜ್ಞಾನೇಂದ್ರ ಬೆಂಗಾವಲು ಜೀಪ್ ಅಪಘಾತ
Follow us
TV9 Web
| Updated By: ಸಾಧು ಶ್ರೀನಾಥ್​

Updated on:Aug 15, 2022 | 5:54 PM

ಶಿವಮೊಗ್ಗ: ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ (Home minister Araga Jnanendra) ಬೆಂಗಾವಲು ಜೀಪ್ (convoy vehicle ) ಅಪಘಾತಕ್ಕೀಡಾಗಿದೆ. ಭದ್ರಾವತಿ ಜಂಕ್ಷನ್ ಬಳಿ (bhadravathi junction) ಈ ಅಪಘಾತವಾಗಿದ್ದು, ಬೆಂಗಾವಲು ಜೀಪಿಗೆ ಎದುರಿನಿಂದ ಬಂದ ಕಾರು ಡಿಕ್ಕಿ ಹೊಡೆದಿದೆ. ಸಚಿವರು ತುಮಕೂರಿನಿಂದ ತೀರ್ಥಹಳ್ಳಿಗೆ ಬರುತ್ತಿದ್ದರು. ಡಿಕ್ಕಿ ಹೊಡೆದ ಕಾರು ಬೆಂಗಳೂರು ಕಡೆಗೆ ಹೋಗುತ್ತಿತ್ತು. ಅದೃಷ್ಟವಶಾತ್ ಎಲ್ಲರೂ ಪಾರಾಗಿದ್ದಾರೆ.

ಶಿವಮೊಗ್ಗ ಗಲಾಟೆ ಪ್ರಕರಣ: ಶಿವಮೊಗ್ಗದಲ್ಲಿ ವೀರ್ ಸಾವರ್ಕರ್ v\s ಟಿಪ್ಪು ಸುಲ್ತಾನ್ ಪ್ರಕರಣ ಭುಗಿಲೆದ್ದಿದ್ದು, ಇಬ್ಬರು ಯುವಕರಿಗೆ ಚೂರಿ ಇರಿತವಾಗಿದೆ. ಹಿಂಸಾಚಾರ ಸ್ಥಳಕ್ಕೆ ಗೃಹ ಸಚಿವರು ಹೋಗುತ್ತಾ ಇದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವುದು ಗಮನಾರ್ಹವಾಗಿದೆ. ಮಹತ್ವದ ಸ್ವಾತಂತ್ರ ದಿನಾಚಣೆ ಸಂದರ್ಭದಲ್ಲಿ ಶಿವಮೊಗ್ಗದಲ್ಲಿ ಸಾವರ್ಕರ್​ ಫ್ಲೆಕ್ಸ್​ ತೆರವು ವಿಚಾರದಲ್ಲಿ ಘರ್ಷಣೆಗಳುಂಟಾಗಿದ್ದು, ಕೂಡಲೇ ಸ್ಥಳಕ್ಕೆ ತೆರಳುವಂತೆ ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸೂಚಿಸಿರುವುದಾಗಿ ಸಿಎಂ ಬೊಮ್ಮಾಯಿ ಇದೇ ವೇಳೆ ಹೇಳಿದ್ದಾರೆ.

ಕಂಟೇನರ್ ಡಿಕ್ಕಿ, ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವು

ಬೀದರ್: ಬೀದರ್​ ತಾಲೂಕಿನ ಬಂಗೂರು ಬಳಿ ಕಂಟೇನರ್ ಡಿಕ್ಕಿಯಾಗಿ ಎರ್ಟಿಗಾ ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ, ಆರು ಜನರಿಗೆ ಗಾಯಗಳಾಗಿವೆ. ಮೃತಪಟ್ಟವರು ಹೈದ್ರಾಬಾದ್ ನ ಬೇಗಂ ಪೇಟ್ ನಿವಾಸಿಗಳಾಗಿದ್ದಾರೆ. ಹೈದ್ರಾಬಾದ್ ನಿಂದ ಕಲ್ಬುರ್ಗಿಯ ಗಾಣಗಾಪುರ ದೇವಸ್ಥಾನಕ್ಕೆ ಹೋಗುತ್ತಿದ್ದರು. ಬೀದರ್ ತಾಲೂಕಿನ ಬಂಗೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿಈ ರಸ್ತೆ ಅಪಘಾತ ನಡೆದಿದೆ.

Published On - 5:38 pm, Mon, 15 August 22