AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ‘ಮಠದಲ್ಲಿ ಇದ್ದವರೇ ತೊಂದರೆ ಮಾಡಿದಂಗೆ ಕಾಣುತ್ತೆ’ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ

ಮಠದಲ್ಲಿ ಇದ್ದವರೇ ತೊಂದರೆ ಮಾಡಿರುವ ಹಾಗೇ ಕಾಣುತ್ತೆ. ಈ ಬಗ್ಗೆ ದೂರು ಕೊಟ್ಟಿದ್ದಾರೆ ತನಿಖೆ ನಡೆಯುತ್ತಿದೆ. ಮುರುಘಾಮಠದಲ್ಲಿನ ಓರ್ವ ಉದ್ಯೋಗಿ ಸರಿಯಿರಲಿಲ್ಲ. ಅವರೇ ಏನೋ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ.

ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ: ‘ಮಠದಲ್ಲಿ ಇದ್ದವರೇ ತೊಂದರೆ ಮಾಡಿದಂಗೆ ಕಾಣುತ್ತೆ’ ಎಂದ ಗೃಹ ಸಚಿವ ಆರಗ ಜ್ಞಾನೇಂದ್ರ
ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Aug 27, 2022 | 6:00 PM

Share

ಶಿವಮೊಗ್ಗ: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಕಾಯ್ದೆಯಡಿ ಕೇಸ್ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿ, ಮಠದಲ್ಲಿ ಇದ್ದವರೇ ತೊಂದರೆ ಮಾಡಿದಂಗೆ ಕಾಣುತ್ತೆ. ದೂರು ಕೊಟ್ಟಿದ್ದಾರೆ ತನಿಖೆ ನಡೆಯುತ್ತಿದೆ ಎಂದು ಶಿವಮೊಗ್ಗದಲ್ಲಿ ಗೃಹ ಖಾತೆ ಸಚಿವ ಆರಗ ಜ್ಞಾನೇಂದ್ರ(Araga Jnanendra) ಪ್ರತಿಕ್ರಿಯೆ ನೀಡಿದ್ದಾರೆ.

ಮಠದಲ್ಲಿ ಇದ್ದವರೇ ತೊಂದರೆ ಮಾಡಿರುವ ಹಾಗೇ ಕಾಣುತ್ತೆ. ಈ ಬಗ್ಗೆ ದೂರು ಕೊಟ್ಟಿದ್ದಾರೆ ತನಿಖೆ ನಡೆಯುತ್ತಿದೆ. ಮುರುಘಾಮಠದಲ್ಲಿನ ಓರ್ವ ಉದ್ಯೋಗಿ ಸರಿಯಿರಲಿಲ್ಲ. ಅವರೇ ಏನೋ ಮಾಡುತ್ತಿದ್ದಾರೆ ಎಂಬ ಮಾಹಿತಿ ಇದೆ. ದೂರಿನ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ ಎಂದರು.

ರಾಜಕೀಯ ಕುತಂತ್ರದಿಂದ ಶ್ರೀಗಳ ವಿರುದ್ಧ ಷಡ್ಯಂತ್ರ ಮಾಡಲಾಯ್ತಾ?

ಮುರುಘಾ ಶ್ರೀಗಳ ಮೇಲಿನ ಆರೋಪಕ್ಕೆ ಜಿಲ್ಲೆಯ ಕೆಲ ದಲಿತ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ಶ್ರೀಗಳ ವಿಚಾರದಲ್ಲಿ ದಲಿತರನ್ನ ಬಳಸಿಕೊಂಡು ರಾಜಕೀಯ ಮಾಡುತ್ತಿದ್ದಾರೆ. ರಾಜಕೀಯ ಕುತಂತ್ರದಿಂದ, ಅಧಿಕಾರದ ದಾಹಕ್ಕಾಗಿಯೇ ಕೆಲವರು ಹೀಗೆ ಮಾಡಿದ್ದಾರೆ ಅಂತ ಹೇಳಿದ್ದಾರೆ. ಅಂದಹಾಗೆ ಈ ಹಿಂದೆ ಮಠದ ಆಡಳಿತಾಧಿಕಾರಿ ಆಗಿದ್ದ ಎಸ್​. ಕೆ ಬಸವರಾಜನ್ 2007ರಲ್ಲಿ ಮುರುಘಾಶ್ರೀಗಳ ಜೊತೆಗಿನ ಭಿನ್ನಾಭಿಪ್ರಾಯದಿಂದ ಮಠದಿಂದ ಹೊರಬಿದ್ದಿದ್ರು. ಬಳಿಕ ಇಬ್ಬರ ನಡುವೆ ನಿರಂತರ ಸಮರ ನಡೆಯುತ್ತಲೇ ಇತ್ತು. ಕಳೆದ ಮಾರ್ಚ್ 7ರಂದು ಬಸವರಾಜನ್ ಮತ್ತೆ​ ಎಂಟ್ರಿ ಕೊಟ್ಟಿದ್ರು. ಮುರುಘಾ ಶ್ರೀಗಳೇ ಮತ್ತೆ ಬಸವರಾಜನ್ ಮಠದ ಆಡಳಿತಾಧಿಕಾರಿ ಎಂದು ಘೋಷಿಸಿದ್ರು. ಆದ್ರೆ, ಸೆಕೆಂಡ್ ಇನ್ನಿಂಗ್ಸ್ ಬಹು ದಿನಗಳ ಕಾಲ ಉಳಿಲಿಲ್ಲ. ಕಳೆದ ಒಂದು ತಿಂಗಳಿಂದ ಮತ್ತೆ ಮಠದಲ್ಲಿ ಕದನ ಶುರುವಾಗಿತ್ತು. ಈ ಮೊದಲಿನಂತೆ ಆಡಳಿತಾಧಿಕಾರಿಗೆ ಅಧಿಕಾರ ನೀಡಿಲ್ಲ. ನಾಮಕಾವಾಸ್ತೆ ಆಡಳಿತಾಧಿಕಾರಿ ಎಂಬಂತಾಗಿದೆ ಎಂಬ ಮಾತು ಕೇಳಿ ಮತ್ತೆ ಇಬ್ಬರ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇದೇ ಬೆಳವಣಿಗೆ ಬೆನ್ನಲ್ಲೇ ಶ್ರೀಗಳ ವಿರುದ್ಧ ಈ ಆರೋಪ ಕೇಳಿ ಬಂದಿದೆ. ಇದನ್ನೂ ಓದಿ: ಫೋಕ್ಸೋ ಪ್ರಕರಣ: ನಾನು ಸಮರಕ್ಕೂ ಸಿದ್ಧ, ಸಂಧಾನಕ್ಕೂ ಸಿದ್ಧ ಎಂದ ಮುರುಘಾಶ್ರೀ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 5:54 pm, Sat, 27 August 22

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!