AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ

ನಕಲಿ ಹಕ್ಕುಪತ್ರ ತಯಾರಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ಹೊಸನಗರ ತಹಶೀಲ್ದಾರ್ ಭೇದಿಸಿದ್ದಾರೆ. ಈ ವೇಳೆ ವ್ಯಕ್ತಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್​ಗಳು ಪತ್ತೆಯಾಗಿವೆ.

ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ
ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್
Basavaraj Yaraganavi
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 10, 2024 | 5:11 PM

Share

ಶಿವಮೊಗ್ಗ, ಸೆ.10: ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದಲ್ಲಿ ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆ ಮೇಲೆ ಹೊಸನಗರ ತಹಶೀಲ್ದಾರ್ ಎಚ್.ಜೆ.ರಶ್ಮಿ ಅವರು ದಾಳಿ ಮಾಡಿದ್ದು, ಈ ವೇಳೆ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್ ಪತ್ತೆಯಾಗಿದೆ. ಆರೋಪಿ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ. ಈ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ದಾಳಿ ಮಾಡಿದ್ದಾರೆ.

8 ವಿವಿಧ ಸೀಲ್, ನೂರಾರು ನಕಲಿ ಹಕ್ಕುಪತ್ರಗಳು ಜಪ್ತಿ

ಈ ವೇಳೆ ಆರೋಪಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್​ಗಳು, ನೂರಾರು ನಕಲಿ ಹಕ್ಕುಪತ್ರಗಳು, ಹಕ್ಕುಪತ್ರ ಮುದ್ರಿಸುವ ಕಾಗದ ಹಾಗೂ ನಕಲಿ ಸರ್ಕಾರಿ ದಾಖಲೆಗಳು ಸೇರಿದಂತೆ ಹಲವು ದಾಖಲಾತಿಗಳು ಪತ್ತೆಯಾಗಿವೆ. ಈ ಹಿನ್ನಲೆ ತಹಶೀಲ್ದಾರ್ ನಕಲಿ ದಾಖಲೆಗಳನ್ನು ವಶಕ್ಕೆ ಪಡೆದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಮಾರಾಟ ಮಾಡುವ ಜಾಲ ಬೆಳಕಿಗೆ

ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಚಿಕ್ಕಮಗಳೂರು: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯನ ಮೇಲೆ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಟಿಪ್ಪು ನಗರದ ನಿವಾಸಿಗಳಾದ ತಸೀಮಾ ,ಇರ್ಫಾನ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್​ಐಆರ್​ ದಾಖಲಾಗಿತ್ತು. ಇದೀಗ ಇಬ್ಬರನ್ನು ಅರೆಸ್ಟ್​​ ಮಾಡಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಸೇವಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ವೆಂಕಟೇಶ ಮೇಲೆ ರೋಗಿಯ ಸಹೋದರಿ ತಸೀಮಾ ಹಲ್ಲೆ ನಡೆಸಿದ್ದರು. ಇನ್ನು ಈ ಹಲ್ಲೆ ಖಂಡಿಸಿ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿOPD ಬಂದ್ ಮಾಡಿ ಪ್ರತಿಭಟನೆ ವೈದ್ಯರು, ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Tue, 10 September 24

Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?