ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ

| Updated By: ಕಿರಣ್ ಹನುಮಂತ್​ ಮಾದಾರ್

Updated on: Sep 10, 2024 | 5:11 PM

ನಕಲಿ ಹಕ್ಕುಪತ್ರ ತಯಾರಿಸಿ ಜನರನ್ನು ವಂಚಿಸುತ್ತಿದ್ದ ಪ್ರಕರಣವನ್ನು ಹೊಸನಗರ ತಹಶೀಲ್ದಾರ್ ಭೇದಿಸಿದ್ದಾರೆ. ಈ ವೇಳೆ ವ್ಯಕ್ತಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್​ಗಳು ಪತ್ತೆಯಾಗಿವೆ.

ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್; ತಾಲೂಕು ಕಛೇರಿ, ನ್ಯಾಯಾಲಯ ಸೇರಿ 48 ವಿವಿಧ ನಕಲಿ ಸೀಲ್ ಪತ್ತೆ
ನಕಲಿ ಹಕ್ಕುಪತ್ರ ಜಾಲ ಭೇದಿಸಿದ ಹೊಸನಗರ ತಹಶೀಲ್ದಾರ್
Follow us on

ಶಿವಮೊಗ್ಗ, ಸೆ.10: ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಜಯನಗರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್.ಗುಡ್ಡೆಕೊಪ್ಪದಲ್ಲಿ ನಕಲಿ ದಾಖಲೆ ಸೃಷ್ಠಿಸುತ್ತಿದ್ದ ವ್ಯಕ್ತಿಯ ಮನೆ ಮೇಲೆ ಹೊಸನಗರ ತಹಶೀಲ್ದಾರ್ ಎಚ್.ಜೆ.ರಶ್ಮಿ ಅವರು ದಾಳಿ ಮಾಡಿದ್ದು, ಈ ವೇಳೆ ವ್ಯಕ್ತಿಯ ಮನೆಯಲ್ಲಿ 48 ನಕಲಿ ಸೀಲ್ ಪತ್ತೆಯಾಗಿದೆ. ಆರೋಪಿ ರಾಜೇಂದ್ರ ಎಂಬಾತ ನಕಲಿ ಹಕ್ಕುಪತ್ರ ತಯಾರಿಸಿ, ಜನರನ್ನು ವಂಚಿಸುತ್ತಿದ್ದ. ಈ ಕುರಿತು ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ತಹಶೀಲ್ದಾರ್ ದಾಳಿ ಮಾಡಿದ್ದಾರೆ.

8 ವಿವಿಧ ಸೀಲ್, ನೂರಾರು ನಕಲಿ ಹಕ್ಕುಪತ್ರಗಳು ಜಪ್ತಿ

ಈ ವೇಳೆ ಆರೋಪಿಯ ಮನೆಯಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಮೈಸೂರ್, ಕರ್ಣಾಟಕ ಬ್ಯಾಂಕ್, ಉಪನೊಂದಣಾಧಿಕಾರಿಗಳ ಕಛೇರಿ, ತಹಸೀಲ್ದಾರ್, ತಾಲೂಕು ಕಛೇರಿ, ನ್ಯಾಯಾಲಯ, ವಿವಿಧ ಗ್ರಾಮ ಪಂಚಾಯಿತಿ ಕಛೇರಿಗಳ 48 ವಿವಿಧ ನಕಲಿ ಸೀಲ್​ಗಳು, ನೂರಾರು ನಕಲಿ ಹಕ್ಕುಪತ್ರಗಳು, ಹಕ್ಕುಪತ್ರ ಮುದ್ರಿಸುವ ಕಾಗದ ಹಾಗೂ ನಕಲಿ ಸರ್ಕಾರಿ ದಾಖಲೆಗಳು ಸೇರಿದಂತೆ ಹಲವು ದಾಖಲಾತಿಗಳು ಪತ್ತೆಯಾಗಿವೆ. ಈ ಹಿನ್ನಲೆ ತಹಶೀಲ್ದಾರ್ ನಕಲಿ ದಾಖಲೆಗಳನ್ನು ವಶಕ್ಕೆ ಪಡೆದು, ಆರೋಪಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರದಲ್ಲಿ ನಕಲಿ ಹಕ್ಕುಪತ್ರ ಸೃಷ್ಟಿಸಿ ಸರ್ಕಾರಿ ಜಾಗವನ್ನೇ ಮಾರಾಟ ಮಾಡುವ ಜಾಲ ಬೆಳಕಿಗೆ

ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣ; ಇಬ್ಬರ ಬಂಧನ

ಚಿಕ್ಕಮಗಳೂರು: ಕರ್ತವ್ಯ ನಿರತ ಸರ್ಕಾರಿ ವೈದ್ಯನ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯನ ಮೇಲೆ ಹಲ್ಲೆ ಮಾಡಿದ್ದ ಇಬ್ಬರನ್ನು ಬಂಧಿಸಲಾಗಿದೆ. ಟಿಪ್ಪು ನಗರದ ನಿವಾಸಿಗಳಾದ ತಸೀಮಾ ,ಇರ್ಫಾನ್ ಬಂಧಿತ ಆರೋಪಿಗಳು. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಈ ಕುರಿತು ಎಫ್​ಐಆರ್​ ದಾಖಲಾಗಿತ್ತು. ಇದೀಗ ಇಬ್ಬರನ್ನು ಅರೆಸ್ಟ್​​ ಮಾಡಲಾಗಿದೆ. ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ತುರ್ತು ಸೇವಾ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ವೈದ್ಯ ವೆಂಕಟೇಶ ಮೇಲೆ ರೋಗಿಯ ಸಹೋದರಿ ತಸೀಮಾ ಹಲ್ಲೆ ನಡೆಸಿದ್ದರು. ಇನ್ನು ಈ ಹಲ್ಲೆ ಖಂಡಿಸಿ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿOPD ಬಂದ್ ಮಾಡಿ ಪ್ರತಿಭಟನೆ ವೈದ್ಯರು, ಸಿಬ್ಬಂದಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:06 pm, Tue, 10 September 24