ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ

ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

ಶಿವಮೊಗ್ಗದಲ್ಲಿ ಹೋಟೆಲ್ ಮಾಲೀಕನ ಆರ್​ಸಿಬಿ ಅಭಿಮಾನ; ರಾಯಲ್ ಚಾಲೆಂಜರ್ಸ್​ಗೆ ವಿಭಿನ್ನ ರೀತಿಯ ಬೆಂಬಲ
ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ
Follow us
| Updated By: ganapathi bhat

Updated on: Apr 11, 2021 | 5:16 PM

ಶಿವಮೊಗ್ಗ: ಕ್ರಿಕೆಟ್ ಲೋಕದ ವರ್ಣರಂಜಿತ ಪಂದ್ಯಾವಳಿ ಐಪಿಎಲ್ 2021 ಸಾಲಿನ 14ನೇ ಆವೃತ್ತಿಯ ಉದ್ಘಾಟನೆ ಪಂದ್ಯ ಶುಕ್ರವಾರ ನಡೆಯಿತು. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ತಂಡಗಳ ಸೆಣೆಸಾಟದಲ್ಲಿ ಆರ್​ಸಿಬಿ ತಂಡ ಗೆಲವು ಸಾಧಿಸಿದೆ. ಕಳೆದ 13 ಆವೃತ್ತಿಯಿಂದಲೂ ಈ ಸಲ ಕಪ್ ನಮ್ದೆ ಎನ್ನುತ್ತಿರುವ ಅಭಿಮಾನಿಗಳ‌ ಸಂಖ್ಯೆಗೇನೂ ಕೊರತೆ ಇಲ್ಲ. ಅದು ಈ ಬಾರಿ ಕೂಡ ಯತಾಪ್ರಕಾರ ಮುಂದುವರಿದಿದೆ. ಇದಕ್ಕೆ ಕಮ್ಮಕ್ಕು ನೀಡುವಂತೆ ಸಾಗರ ನಗರದ ಗಾಂಧಿನಗರ ಸರ್ಕಲ್​ನಲ್ಲಿ ಇರುವ ಸದ್ಗುರು ಹೋಟೆಲ್ ಮಾಲಿಕ ಸಂತೋಷ್ ಸದ್ಗುರು ಅವರು ವಿಶಿಷ್ಟ ರೀತಿಯಲ್ಲಿ ಈ ಸಲ ಕಪ್ ನಮ್ದೆ ಎಂದು ಹೇಳಿದ್ದಾರೆ.

ಸಂತೋಷ ಸದ್ಗುರು ಗಾಂಧಿನಗರ ಸರ್ಕಲ್​ನಲ್ಲಿ ಸದ್ಗುರು ಹೋಟೆಲ್ ಎಂಬ ಹೋಟೆಲ್ ಉದ್ಯಮ ನಡೆಸಿಕೊಂಡು ಬರುತ್ತಿದ್ದು, ಇವರ ಹೋಟೆಲ್​ಗೆ ಬರುವ ಗ್ರಾಹಕರಿಗೆ ಕಂಪ್ಯೂಟರಿಕೃತ ಬಿಲ್ ನೀಡುವ ವೇಳೆ ‌ ಬಿಲ್ ಕೆಳಭಾಗದಲ್ಲಿ ವಿಸಿಟ್ ಎಗೈನ್ ಮತ್ತು ಈ ಸಲ ಕಪ್ ನಮ್ದೆ ಎನ್ನುವ‌ ಬರಹ ಸೇರಿಸಿ ವಿಭಿನ್ನವಾಗಿ ಸಾರ್ವಜನಿಕ ವಲಯದಲ್ಲಿ ಗಮನಸೆಳೆಯುತ್ತಿದ್ದಾರೆ .

ಇದರ ಜೊತೆಗೆ ಸಂತೋಷ್ ರವರ ಬಜಾಜ್ ಸ್ಕೂಟರ್ ಮೇಲೆ ಡಾಕ್ಟರ್ ರಾಜಕುಮಾರ್ ರವರ ಭಾವಚಿತ್ರ ಹಾಗೂ ಕೆಂಪು ಹಳದಿ ಬಣ್ಣದ ಚಿತ್ರ ಹಾಕಿದ್ದು, ಈ ಸಲ ಕಪ್ ನಮ್ದೆ ಎಂದು ಬರೆದಿದ್ದಾರೆ. ಈ ವಾಹನ ಸದ್ಯ ನೋಡುಗರ ಗಮನಸೆಳೆಯುತ್ತಿದೆ.

RCB FAN

ಹೋಟೆಲ್​ ಬಿಲ್​ನಲ್ಲಿ ಈ ಸಲ ಕಪ್ ನಮ್ದೆ ಎಂಬ ಬರಹ

ಐಪಿಎಲ್ ಕ್ರಿಕೆಟ್ ಮೇಲೆ ಅಪಾರ ಆಸಕ್ತಿ ಹೊಂದಿರುವ ಸಂತೋಷ್ ಆರ್​ಸಿಬಿಗೆ ಈ ರೀತಿ ವಿಭಿನ್ನವಾಗಿ ಪ್ರೋತ್ಸಾಹಿಸುತ್ತಿದ್ದಾರೆ. ಅಲ್ಲದೆ ತಮ್ಮ ಹೋಟೆಲ್​ಗೆ ಬರುವ ಗ್ರಾಹಕರಿಗೆ ಹಾಗೂ ಪ್ರವಾಸಿಗರಿಗೆ ಈ ಸಲ ಕಪ್ ನಮ್ದೆ ಎನ್ನುವ ಬಜಾಜ್ ಸ್ಕೂಟರ್ ಮೇಲೆ ಕುಳಿತು ಫೋಟೋ ತೆಗೆಸಿಕೊಳ್ಳಲು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ.

ಸದ್ಯ ಹೊಟೇಲ್​ಗೆ ಬರುವ ಗ್ರಾಹಕರಿಗೆ ಬಿಲ್ ಮತ್ತು ಸ್ಕೂಟರ್ ಪ್ರಮುಖ ಆಕರ್ಷಣೆಯಾಗಿದ್ದು, ಹೊಟೆಲ್​ಗೆ ಬರುವ ಗ್ರಾಹಕರು ಆರ್​ಸಿಬಿಗೆ ಹೆಚ್ಚು ಬೆಂಬಲ ಸೂಚಿಸುತ್ತಿದ್ದಾರೆ.

ಇದನ್ನೂ ಓದಿ:

MI vs RCB Predicted Playing 11: ರಾಯಲ್ ಚಾಲೆಂಜರ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಮೊದಲ ಪಂದ್ಯದ ಸಂಭಾವ್ಯ ಆಟಗಾರರು ಇವರು

MI vs RCB, IPL 2021 Match 1 Result: ಆರ್​ಸಿಬಿಗೆ ಶುಭಾರಂಭ; ತಂಡವನ್ನು ಗೆಲುವಿನ ದಡ ಮುಟ್ಟಿಸಿದ ಡಿವಿಲಿಯರ್ಸ್

(Hotel owner who is supporting the RCB team in different ways in Shivamogga)

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಬೆಳಗಾವಿಯಲ್ಲಿ ಪ್ರತಿಷ್ಠಾಪಿಸಲಾಗಿದೆ ಹುಣಸೆ ಬೀಜದಿಂದ ತಯಾರಿಸಿದ ಗಣೇಶ
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!
ಸುಬ್ರಹ್ಮಣ್ಯದಲ್ಲಿ ಬ್ಯಾಂಕ್ ಮ್ಯಾನೇಜರ್ ಕರಕೌಶಲದಲ್ಲಿ ಮೂಡಿದ ಗಣಪ!