AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ಕಚೇರಿಗೆ ನುಗ್ಗಿ ಮಹಿಳಾ ಅಧಿಕಾರಿ ಮೇಲೆ ಪತಿ ಹಲ್ಲೆ, ಮಹಿಳಾ ಠಾಣೆಯಲ್ಲಿ ದೂರು ದಾಖಲು

ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಅವರ ಮೇಲೆ ಅವರ ಪತಿ ಶ್ರೀನಿವಾಸ್ ಮೂರ್ತಿ‌ ಬೋರ್ಗಿ‌ ಅವರು ಹಲ್ಲೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಮಹಿಳಾ ಠಾಣೆಗೆ ಪತಿ ಶ್ರೀನಿವಾಸಮೂರ್ತಿ‌ ವಿರುದ್ಧ ಶಿಲ್ಪಾ ದೂರು ದಾಖಲಿಸಿದ್ದಾರೆ.

ಸರ್ಕಾರಿ ಕಚೇರಿಗೆ ನುಗ್ಗಿ ಮಹಿಳಾ ಅಧಿಕಾರಿ ಮೇಲೆ ಪತಿ ಹಲ್ಲೆ, ಮಹಿಳಾ ಠಾಣೆಯಲ್ಲಿ ದೂರು ದಾಖಲು
ಶಿವಮೊಗ್ಗ (ಸಾಂದರ್ಭಿಕ ಚಿತ್ರ)
Follow us
Basavaraj Yaraganavi
| Updated By: ಆಯೇಷಾ ಬಾನು

Updated on: Aug 05, 2023 | 11:58 AM

ಶಿವಮೊಗ್ಗ, ಆ.05: ಕಚೇರಿಗೆ ತೆರಳಿ ಮಹಿಳಾ ಅಧಿಕಾರಿ ಮೇಲೆ ಪತಿ ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಶಿಲ್ಪಾ ದೊಡ್ಡಮನಿ ಅವರ ಮೇಲೆ ಅವರ ಪತಿ ಶ್ರೀನಿವಾಸ್ ಮೂರ್ತಿ‌ ಬೋರ್ಗಿ‌ ಅವರು ಹಲ್ಲೆ ನಡೆಸಿದ್ದಾರೆ. ಸದ್ಯ ಘಟನೆ ಸಂಬಂಧ ಮಹಿಳಾ ಠಾಣೆಗೆ ಪತಿ ಶ್ರೀನಿವಾಸಮೂರ್ತಿ‌ ವಿರುದ್ಧ ಶಿಲ್ಪಾ ದೂರು ನೀಡಿದ್ದಾರೆ.

ಪತಿ ಶ್ರೀನಿವಾಸಮೂರ್ತಿ‌ ಹಾಗೂ ಶಿಲ್ಪಾ ಅವರ ವಿರುದ್ಧ ಜಗಳ ನಡೆದಿತ್ತು. ಕೌಟುಂಬಿಕ ಕಲಹ ಹಿನ್ನೆಲೆ ಕಚೇರಿಗೆ ಬಂದ ಪತಿ ಸರ್ಕಾರಿ ಕಚೇರಿ ಎಂದೂ ಲೆಕ್ಕಿಸದೆ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಮೊಬೈಲ್ ಹೊಡೆದು ಹಾಕಿ ರಂಪಾ ಮಾಡಿದ್ದಾರೆ. ಈ ವೇಳೆ ಕಚೇರಿಯ ಸಿಬ್ಬಂದಿ ನಡೆದಿದ್ದು ಘಟನೆಗೆ ಬಳಿಕ ದೂರು ದಾಖಲಾಗಿದೆ.

ಮಿಸ್​ ಫೈರಿಂಗ್ ಆಗಿ ವ್ಯಕ್ತಿಗೆ ಗಂಭೀರ ಗಾಯ

ಇನ್ನು ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಆರಗದ ಸಮೀಪದ ದಾಸನಗದ್ದೆಯಲ್ಲಿ ನಿನ್ನೆ ರಾತ್ರಿ ಮಿಸ್​ ಫೈರಿಂಗ್ ಆಗಿ ವ್ಯಕ್ತಿಗೆ ಗಂಭೀರ ಗಾಯಗಳಾಗಿವೆ. ಘಟನೆಯಲ್ಲಿ ರಾಕೇಶ್ ಎಂಬುವರ ತೊಡೆಗೆ ಗಾಯಗಳಾಗಿದ್ದು ಅವರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತೋಟದಲ್ಲಿ ಏನೂ ಶಬ್ಧ ಕೇಳಿ ಬರುತ್ತಿದೆ ಎಂದು ರಾಕೇಶ್ ಅವರು ನಾಡ ಬಂದೂಕು ತೆಗೆದುಕೊಂಡು ತೋಟಕ್ಕೆ ಹೋಗಿದ್ದರು. ಈ ವೇಳೆ ಮಿಸ್ ಫೈರಿಂಗ್ ಆಗಿದ್ದು ತೊಡೆಗೆ ಗುಂಡು ಬಿದ್ದಿದೆ ಎಂಬ ಮಾಹಿತಿ ಸಿಕ್ಕಿದೆ. ತೀರ್ಥಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ: ನೆಲಮಂಗಲ: ಶಾದಿ ಡಾಟ್ ಕಾಮ್​ನಲ್ಲಿ ನಕಲಿ ಫೋಟೋ ಹಾಕಿ ವ್ಯಕ್ತಿಗೆ 6 ಲಕ್ಷ ರೂ. ವಂಚನೆ

ಬಾತ್ ರೂಂನಲ್ಲಿ ಮೊಬೈಲ್ ಇಟ್ಟು ಸಿಕ್ಕಿಬಿದ್ದ ಯುವಕ

ಪಕ್ಕದ ಮನೆಯ ಯುವತಿಯ ಸ್ನಾನದ ವಿಡಿಯೋಗಾಗಿ ಬಾತ್ ರೂಂನಲ್ಲಿ ಮೊಬೈಲ್ ಇಟ್ಟು ಯುವತಿಯ ಅಣ್ಣನ ಕೈಗೆ ಯುವಕ ಸಿಕ್ಕಿ ಬಿದ್ದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ನಗರ ಹೊರವಲಯದ ಮುಲ್ಕಿಯ ಪಕ್ಷಿಕರೆಯಲ್ಲಿ ಸುಮಂತ್ ಪೂಜಾರಿ(22) ಎಂಬ ಯುವಕ ತನ್ನ ಪಕ್ಕದ ಮನೆಯ ಯುವತಿಯ ವಿಡಿಯೋ ಮಾಡಲು ಬಚ್ಚಲು ಮನೆಯಲ್ಲಿ ಮೊಬೈಲ್ ಇಟ್ಟಿದ್ದ. ಈ ವೇಳೆ ಯುವತಿ ಬದಲಿಗೆ ಯುವತಿಯ ಅಣ್ಣ ಸ್ನಾನಕ್ಕೆ ತೆರಳಿದ್ದರು. ಆಗ ಬಾತ್ ರೂಂನಲ್ಲಿ ಮೊಬೈಲ್​ ಇದ್ದದ್ದು ಕಂಡು ವಿಚಾರಿಸಿದಾಗ ಯುವಕ ಸಿಕ್ಕಿಬಿದ್ದಿದ್ದಾನೆ. ಸದ್ಯ ಯುವಕನನ್ನು ಪೊಲೀಸರಿಗೆ ಒಪ್ಪಿಸಲಾಗಿದೆ. ಸುಮಂತ್ ವಿರುದ್ದ ಮುಲ್ಕಿ ಠಾಣೆಯಲ್ಲಿ ದೂರು ದಾಖಲಾಗಿದ್ದು ಸುಮಂತ್ ಪೂಜಾರಿಯನ್ನು ಬಂಧಿಸಲಾಗಿದೆ. ಆರೋಪಿ ಸುಮಂತ್ ಹಿಂದೂ ಸಂಘಟನೆಯಲ್ಲಿ ಗುರುತಿಸಿಕೊಂಡಿದ್ದ ಎಂದು ತಿಳಿದುಬಂದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
‘ಸರಿಗಮಪ’ ಸೆಮಿ ಫೈನಲ್; ನಾಲ್ಕು ಸ್ಥಾನಕ್ಕೆ 9 ಸ್ಪರ್ಧಿಗಳ ಮಧ್ಯೆ ಬಿಗ್ ಫೈಟ್
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​