AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗದಲ್ಲಿ ಗೆದ್ದೇ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು, ಈಗಾಗಲೇ ಟಿಕೆಟ್ ಪಡೆದುಕೊಂಡಿರುವ ಅಭ್ಯರ್ಥಿಗಳು ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಶಿವಮೊಗ್ಗದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್​ಕುಮಾರ್ ಅವರು ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಶಿವಮೊಗ್ಗದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ. ಓಡಾಟಕ್ಕೆ ಸಮಸ್ಯೆ ಇಲ್ಲ. ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದಿದ್ದಾರೆ. ಹಾಗಾದರೆ, ನಟ ಶಿವರಾಜ್ ಕುಮಾರ್ ಅವರು ತಮ್ಮ ಪತ್ನಿ ಗೀತಾ ಬಗ್ಗೆ ಹೇಳಿದ್ದೇನು? ಇಲ್ಲಿದೆ ಮಾಹಿತಿ.

ಶಿವಮೊಗ್ಗದಲ್ಲಿ ಗೆದ್ದೇ ಗೆಲ್ಲುತ್ತೇನೆ: ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್
ಗೀತಾ ಶಿವರಾಜ್ ಕುಮಾರ್
Malatesh Jaggin
| Updated By: Rakesh Nayak Manchi|

Updated on:Mar 10, 2024 | 9:25 PM

Share

ಬೆಂಗಳೂರು, ಮಾ.10: ನಾನು ಲೋಕಸಭೆ ಚುನಾವಣೆಯಲ್ಲಿ ಗೆದ್ದೇ ಗೆಲ್ಲುತ್ತೇನೆ ಎಂದು ಶಿವಮೊಗ್ಗ (Shivamogga) ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ​ಕುಮಾರ್ (Geetha Shivaraj Kumar) ಹೇಳಿದ್ದಾರೆ. ಕಾಂಗ್ರೆಸ್​​ ಪಕ್ಷದಿಂದ ಟಿಕೆಟ್ ಪಡೆದ ಹಾಗೂ ಸಿದ್ಧತೆಗಳ ಬಗ್ಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ ಎಲ್ಲರೂ ಪರಿಚಿತರೇ ಇದ್ದಾರೆ. ಹೊಸಬರು ಯಾರಿಲ್ಲ. ಹೀಗಾಗಿ ಗೆಲ್ಲುವ ಭರವಸೆ ಇದೆ ಎಂದರು.

ಕಳೆದ ಒಂಬತ್ತು ವರ್ಷಗಳ ಹಿಂದೆ ಚುನಾವಣೆಗೆ ನಿಂತಿದ್ದೆ. ಆದರೆ ನಾನು 17 ದಿನ ಕೆಲಸ ಮಾಡಿದ್ದೆ. ಹೀಗಾಗಿ ಸೋಲಾಗಿತ್ತು ಅನಿಸುತ್ತದೆ. ಈ ಬಾರಿ ಹೆಚ್ಚಿನ ಸಮಯ ಶಿವಮೊಗ್ಗದಲ್ಲಿ ಇರುತ್ತೇನೆ. ನನ್ನ ಸಹೋದರ ಸಹ ಬೆಂಬಲವಾಗಿ ಇದ್ದಾನೆ. ಶಿವಮೊಗ್ಗದಲ್ಲಿ ಈಗಾಗಲೇ ಮನೆ ಮಾಡಿದ್ದೇನೆ. ಓಡಾಟಕ್ಕೆ ಸಮಸ್ಯೆ ಇಲ್ಲ. ಚುನಾವಣೆಯಲ್ಲಿ ಯಾರು ಭಾಗಿ ಆಗುತ್ತಾರೆ ಎಂದು ಇನ್ನೂ ಪ್ಲಾನ್ ಮಾಡಿಲ್ಲ, ಶಿವಣ್ಣ ಬರುವುದು ಖಚಿತ ಎಂದರು.

ಇದನ್ನೂ ಓದಿ: ಲೋಕಸಭಾ ಚುನಾವಣೆ: ಕರ್ನಾಟಕ ಸೇರಿದಂತೆ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಗೀತಾಗೆ ನನ್ನ ಫುಲ್ ಸಪೋರ್ಟ್: ಶಿವರಾಜ್ ಕುಮಾರ್

ಪತ್ನಿ ಗೀತಾಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರುವ ಬಗ್ಗೆ ಮಾತನಾಡಿದ ನಟ ಶಿವರಾಜ್ ಕುಮಾರ್, ಗೀತಾಗೆ ರಾಜಕೀಯ ಎಷ್ಟು ಮುಖ್ಯವೋ ನನಗೆ ಸಿನಿಮಾ ಅಷ್ಟೇ ಮುಖ್ಯ. ನನ್ನ ಬೆಂಬಲ ಖಂಡಿತ ಇರುತ್ತದೆ. ಇದು ಚುನಾವಣೆ ಮಾತ್ರ, ನಾನು ಗೆಲ್ಲುತ್ತೇನೆ ಎಂಬ ಭರವಸೆ ಇರಲೇಬೇಕು ಎಂದರು. ಪ್ರಚಾರದ ಬಗ್ಗೆ ಮಾತನಾಡಿದ ಅವರು, ನನ್ನ ಒತ್ತಾಯಕ್ಕೆ ಯಾರು ಕೂಡ ಗೀತಾ ಪರ ಪ್ರಚಾರಕ್ಕೆ ಬರುವುದು ಬೇಡ ಎಂದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:22 pm, Sun, 10 March 24

ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಹೇಗೆ ಹೆಣ ಎಸೆದು ಹೋದ ನೋಡಿ ಆಂಬ್ಯುಲೆನ್ಸ್​ ಚಾಲಕ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಜಿಪಂ ಕಚೇರಿ ಆವರಣದಲ್ಲಿ ನೇಣು ಬಿಗಿದುಕೊಂಡು ಗುತ್ತಿಗೆ ನೌಕರ ಸಾವಿಗೆ ಶರಣು
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
ಕಿತ್ತೂರು ಚನ್ನಮ್ಮ ಮತ್ತು ಸಂಗೊಳ್ಳಿ ರಾಯಣ್ಣ ಈ ಸಲ ಫ್ಲಾವರ್​ ಶೋ ಥೀಮ್
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
100 ಎಸೆತಗಳ ಪಂದ್ಯ: 99ನೇ ಎಸೆತದಲ್ಲಿ 1 ವಿಕೆಟ್​ನ ರೋಚಕ ಗೆಲುವು..!
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ಕಂದಕಕ್ಕೆ ಉರುಳಿದ ವಾಹನ,ಮೂವರು ಸಿಆರ್​​ಪಿಎಫ್​ ಸಿಬ್ಬಂದಿ ಸಾವು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
ರಾತ್ರಿ ಸುರಿದ ಭಾರೀ ಮಳೆಯಿಂದ ನೀರು ಜಮೀನಿಗೆ ನುಗ್ಗಿ ರೈತ ರಾಜಣ್ಣ ಕಂಗಾಲು
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
VIDEO: ಕೆಣಕಿದ ದಿಗ್ವೇಶ್ ರಾಥಿಯ ಬೆಂಡೆತ್ತಿದ ಅಂಕಿತ್
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ಚಿನ್ನಾಭರಣ ಖರೀದಿಗೆ ಬಂದು ಮಗುವನ್ನೇ ಮರೆತ ತಾಯಿ; ಮುಂದೇನಾಯ್ತು ಗೊತ್ತಾ?
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್
ತೆಲುಗು ವೇದಿಕೆ ಮೇಲೆ ‘ಬಾವ’ ಹಾಡಿಗೆ ರಾಜ್, ಜೆಪಿ, ಶನೀಲ್ ಭರ್ಜರಿ ಸ್ಟೆಪ್