AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನೈತಿಕ ಸಂಬಂಧ: ಪರಸ್ಪರ ಕಿತ್ತಾಟ, ಇಬ್ಬರು ಆಸ್ಪತ್ರೆ ಪಾಲು, ಮಚ್ಚಿನೇಟು ತಿಂದ ಯುವಕನ ಸ್ಥಿತಿ ಗಂಭೀರ

ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ತಾಲೂಕಿನ ಕರಕುಂಚಿ ಗ್ರಾಮದಲ್ಲಿ ಜ್ಯೋತಿ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆಯರು ಅನೈತಿಕ ಸಂಬಂಧ ಊರತುಂಬೆಲ್ಲ ಹಬ್ಬಿಸಿದ್ದಕ್ಕೆ ಆಕ್ರೋಶಗೊಂಡಿದ್ದಳು. ಇಬ್ಬರ ನಡುವೆ ಗಲಾಟೆ ನಡೆದಿದೆ. ಸಿಟ್ಟಿಗೆದ್ದ ಮಹಿಳೆಯು ಮಚ್ಚಿನಿಂದ ನವೀನ್ ತಲೆಗೆ ಏಟು ಕೊಟ್ಟಿದ್ದಾಳೆ. ನವೀನ್ ಕೂಡಾ ಅದೇ ಮಚ್ಚಿನಿಂದ ಜ್ಯೋತಿ ಮೇಲೆ ಪ್ರತಿದಾಳಿ ಮಾಡಿದ್ದಾನೆ. 

ಅನೈತಿಕ ಸಂಬಂಧ: ಪರಸ್ಪರ ಕಿತ್ತಾಟ, ಇಬ್ಬರು ಆಸ್ಪತ್ರೆ ಪಾಲು, ಮಚ್ಚಿನೇಟು ತಿಂದ ಯುವಕನ ಸ್ಥಿತಿ ಗಂಭೀರ
ಅನೈತಿಕ ಸಂಬಂಧ: ಪರಸ್ಪರ ಕಿತ್ತಾಟ, ಇಬ್ಬರು ಆಸ್ಪತ್ರೆ ಪಾಲು
Follow us
Basavaraj Yaraganavi
| Updated By: ಸಾಧು ಶ್ರೀನಾಥ್​

Updated on:Jan 03, 2024 | 5:27 PM

ಆ ಇಬ್ಬರೂ ಸಂಬಂಧಿಗಳು. ಮಹಿಳೆಗೆ ಮದುವೆಯಾಗಿ ಮಕ್ಕಳಿದ್ದಾರೆ. ಈ ನಡುವೆ ಸಂಬಂಧಿಯನ್ನು ಮದುವೆಯಾಗಿರುವ ಯುವಕನ ಜೊತೆ ಮಹಿಳೆಯೊಬ್ಬಳಿಗೆ ಅನೈತಿಕ ಸಂಬಂಧ (Illicit relationship) ಇದೆ ಎನ್ನುವ ಪುಕಾರು ಎಲ್ಲಡೆ ಹಬ್ಬಿತ್ತು. ಇದೇ ವಿಚಾರವಾಗಿ ಇಬ್ಬರ ನಡುವೆ ಬಿಗ್ ಫೈಟ್ ನಡೆಯಿತು. ಮಹಿಳೆಯು ಮಚ್ಚಿನಿಂದ ವ್ಯಕ್ತಿಯ ಮೇಲೆ ದಾಳಿ ಮಾಡಿದ್ರೆ, ಆತನು ಮಹಿಳೆಗೆ ಮಚ್ಚಿನಿಂದಲೇ ತಿರುಗೇಟು ಕೊಟ್ಟಿದ್ದಾನೆ. ಅನೈತಿಕತೆ ತಂದ ಅವಾಂತರ ಕುರಿತು ಒಂದು ವರದಿ ಇಲ್ಲಿದೆ.

ಶಿವಮೊಗ್ಗ (Shivamogga) ಮೆಗ್ಗಾನ್ ಜಿಲ್ಲಾಸ್ಪತ್ರೆಯಲ್ಲಿ ಹೀಗೆ ಗಾಯಗೊಂಡು ಮಲಗಿರುವ ಮಹಿಳೆಯ ಹೆಸರು ಜ್ಯೋತಿ. ಮಹಿಳೆಯ ತಲೆ ಮತ್ತು ಕೈ ಭಾಗಕ್ಕೆ ಮಹಿಳೆಯ ಸಂಬಂಧಿ ನವೀನ್ ಎನ್ನುವ ವ್ಯಕ್ತಿಯು ಮಚ್ಚಿನಿಂದ ದಾಳಿ ಮಾಡಿದ್ದಾನೆ. ಘಟನೆಯಲ್ಲಿ ಗಾಯಗೊಂಡ ಮಹಿಳೆಯನ್ನು ಶಿವಮೊಗ್ಗ ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ. ಸದ್ಯ ತಲೆಗೆ ಬಿದ್ದ ಗಾಯಕ್ಕೆ ವೈದ್ಯರು ಹೊಲಿಗೆ ಹಾಕಿ ಚಿಕಿತ್ಸೆ ನೀಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಮಹಿಳೆಯ ದಾಖಲಾಗಿದ್ದು ಚಿಕಿತ್ಸೆ ಮುಂದುವೆದಿದೆ. ಜ್ಯೋತಿ ಮತ್ತು ನವೀನ್ ಇಬ್ಬರು ಸಂಬಂಧಿಕರು. ಇಬ್ಬರ ನಡುವೆ ಅನೈತಿಕ ಸಂಬಂಧವಿತ್ತಂತೆ. ಇಬ್ಬರದ್ದು ಮದುವೆಯಾಗಿ ಮಕ್ಕಳಿದ್ದಾರೆ.

ಈ ನಡುವೆ ಅನೈತಿಕ ಸಂಬಂಧ ಇರುವ ವಿಚಾರ ಊರಿನ ತುಂಬೆಲ್ಲಾ ನವೀನ್ ಹಬ್ಬಿಸಿದ್ದನಂತೆ. ಈ ವಿಚಾರವಾಗಿ ನಿನ್ನೆ ಚಿಕ್ಕಮಗಳೂರು ಜಿಲ್ಲೆಯ ತರಿಕೇರಿ ತಾಲೂಕಿನ ಕರಕುಂಚಿ ಗ್ರಾಮದಲ್ಲಿ ಜ್ಯೋತಿ ಮನೆಯಲ್ಲಿ ಘಟನೆ ನಡೆದಿದೆ. ಮಹಿಳೆಯರು ಅನೈತಿಕ ಸಂಬಂಧ ಊರತುಂಬೆಲ್ಲ ಹಬ್ಬಿಸಿದ್ದಕ್ಕೆ ಆಕ್ರೋಶಗೊಂಡಿದ್ದಳು. ಇಬ್ಬರ ನಡುವೆ ಗಲಾಟೆ ನಡೆದಿದೆ. ಸಿಟ್ಟಿಗೆದ್ದ ಮಹಿಳೆಯು ಮಚ್ಚಿನಿಂದ ನವೀನ್ ತಲೆಗೆ ಏಟು ಕೊಟ್ಟಿದ್ದಾಳೆ. ನವೀನ್ ಕೂಡಾ ಅದೇ ಮಚ್ಚಿನಿಂದ ಜ್ಯೋತಿ ಮೇಲೆ ಪ್ರತಿದಾಳಿ ಮಾಡಿದ್ದಾನೆ. ಮಹಿಳೆಯು ಮೆಗ್ಗಾನ್ ಜಿಲ್ಲಾಸ್ಪತ್ರೆಗೆ ದಾಖಲು ಆದ್ರೆ ನವೀನ್ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಆಗಿದ್ದಾನೆ.

ಇದನ್ನೂ ಓದಿ: ಛೋಟಾ ಮುಂಬೈಯಲ್ಲಿ ಮಾವ-ನಾದಿನಿ ಸೆಲ್ಫಿ ಸುಸೈಡ್ ಕಥೆ: ಬೆಂಗಳೂರು ಮೂಲದ ವಿವಾಹಿತರ ನಡುವಣ ವಿಲಕ್ಷಣ ಪ್ರೇಮ ಕಥೆ!

ಸಂಬಂಧಿಕರಾದ್ರೂ ಇಬ್ಬರ ಅನೈತಿಕ ಸಂಬಂಧ ಗುಟ್ಟಾಗಿ ಇರಬೇಕಿತ್ತು. ಕಾರಣ ಮಹಿಳೆಯ ಮದುವೆಯಾಗಿ ಎರಡು ದೊಡ್ಡ ಮಕ್ಕಳಿದ್ದಾರೆ. ಇನ್ನು ನವೀನ್ ಗೂ ಮದುವೆಯಾಗಿ ಮಕ್ಕಳಿದ್ದಾರೆ. ಈ ನಡುವೆ ನವೀನ್ ಅನೈತಿಕ ಸಂಬಂಧವನ್ನು ಊರತುಂಬೆಲ್ಲಾ ಪುಕಾರು ಹಬ್ಬಿಸಿಸಿದ್ದಾನೆ. ಇದರಿಂದ ಮಹಿಳೆಗೆ ಸಂಸಾರದಲ್ಲಿ ಸಮಸ್ಯೆಗಳು ಶುರುವಾಗಿದ್ದವು. ಕಂಡ ಕಂಡವರು ಬಾಯಿಯಲ್ಲಿ ಜ್ಯೋತಿಯ ನವೀನ್ ಅನೈತಿಕ ಸಂಬಂಧ ವಿಚಾರವಾಗಿ ಚರ್ಚೆ ನಡೆಯುತ್ತಿತ್ತು. ಇದರಿಂದ ಜ್ಯೋತಿ ಮಾನ ಮರ್ಯಾದೆ ಬೀದಿಯಲ್ಲಿ ಹರಾಜು ಆಗುತ್ತಿತ್ತು. ಇದರಿಂದ ಕೋಪಗೊಂಡ ಮಹಿಳೆಯ ಸಂಬಂಧಿ ನವೀನ್ ನ್ನು ಮನೆಗೆ ಭೇಟಿ ಯಾಗಲು ತಿಳಿಸಿದ್ದಳು. ಮನೆಗೆ ಬಂದಿದ್ದ ನವೀನ್ ಗೆ ಮಹಿಳೆಯು ಮಚ್ಚಿನಿಂದ ದಾಳಿ ಮಾಡಿ ತನ್ನ ಸಿಟ್ಟು ತೀರಿಸಿಕೊಂಡಿದ್ದಾಳೆ. ಇತ್ತ ನವೀನ್ ತಲೆಗೆ ಬಲವಾಗಿ ಪೆಟ್ಟು ಬಿದ್ದಿದೆ. ಆತನ ಸ್ಥಿತಿ ಗಂಭೀರವಾಗಿದೆ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನವೀನ್ ಸಂಬಂಧಿಕರು ಘಟನೆ ಕುರಿತು ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಈ ಗಲಾಟೆ ಕೇಸ್ ಲಕ್ಕೋಳ್ಳಿ ಪೊಲೀಸ್ ಠಾಣೆಯಲ್ಲಿ ದಾಖಲು ಆಗಿದೆ.

ಸಂಬಂಧಿ ಅಂತಾ ಸಲಿಗೆ ಕೊಟ್ಟಿದ್ದೇ ಇಲ್ಲಿ ಮಹಿಳೆಗೆ ಮುಳುವಾಗಿದೆ. ಇಬ್ಬರ ನಡುವೆ ಅನೈತಿಕ ಸಂಬಂಧ ಇರುವ ರಹಸ್ಯವನ್ನು ನವೀನ್ ಬಯಲು ಮಾಡಿದ್ದೆ ಇಲ್ಲಿ ದೊಡ್ಡ ಯಡವಟ್ಟಿಗೆ ಕಾರಣವಾಗಿದೆ. ಪರಸ್ಪರ ಗಲಾಟೆಯಲ್ಲಿ ಇಬ್ಬರು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಆದ್ರೆ ಇವರ ಗಲಾಟೆಯಲ್ಲಿ ಎರಡು ಕುಟುಂಬಸ್ಥರು ಈಗ ಆತಂಕ್ಕೊಳಗಾಗಿದ್ದಾರೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:26 pm, Wed, 3 January 24

ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಅಸಿಮ್ ಮುನೀರ್​​ಗೆ ಔತಣ ನೀಡಿದ ಟ್ರಂಪ್ ವಿರುದ್ಧ ಶಶಿ ತರೂರ್ ಲೇವಡಿ
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಒನ್​ ವೇನಲ್ಲಿ ಬಂದು ಡಿಸಿಗೆ ಅವಾಜ್ ಹಾಕಿದ ಬೈಕ್ ಸವಾರ: ಮುಂದೇನಾಯ್ತು?
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಪಕ್ಷ ಅಧಿಕಾರಕ್ಕೆ ಬರಬೇಕಾದರೆ ಸಾಮೂಹಿಕ ನಾಯಕತ್ವ ಬೇಕಾಗುತ್ತದೆ: ರಾಜಣ್ಣ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಜನಪ್ರಿಯ ಗೆಟ್ಟೋ ಕಿಡ್ಸ್​ಗೆ ಪ್ರೀತಿಯ ವಿದಾಯ ಹೇಳಿದ ಅರ್ಜುನ್ ಜನ್ಯ
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!
ಕಚೇರಿಗೆ ಗೈರುಹಾಜರಾದರೂ ಸಿಬ್ಬಂದಿಯಿಂದ ಸಿಎಲ್ ಅರ್ಜಿ ಇಲ್ಲ!