AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇದೀಗ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
Basavaraj Yaraganavi
| Edited By: |

Updated on:Sep 06, 2024 | 5:53 PM

Share

ಶಿವಮೊಗ್ಗ, ಸೆ.06: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸದಾನಂದ ಭಟ್ ಆತ್ಮಹತ್ಯೆ ಮಾಡಿಕೊಂಡ ಪತಿ. ಹಲ್ಲೆಗೊಳಗಾದ ಪತ್ನಿ ಸಬೀತಾಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ(ಸೆ.05) ಪಟಗುಪ್ಪ ಸೇತುವೆ ಮೇಲಿಂದ ಸದಾನಂದ ಭಟ್ ಹಾರಿದ್ದರು. ಇಂದು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ರಿಪ್ಪನ್ ಪೇಟೆ ಹಾಗೂ ಹೊಸನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತಕ್ಕೆ ಪೊಲೀಸ್ ಹೆಡ್ ಕಾನಸ್ಟೇಬಲ್ ಸಾವು

ಗದಗ: ನಗರದ ಭೂಮರೆಡ್ಡಿ ಸರ್ಕಲ್​ನಲ್ಲಿ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ(42) ಎಂಬುವವರು ಸಾವನ್ನಪ್ಪಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯ ಹೆಡ್​ಕಾನ್​​ಸ್ಟೇಬಲ್ ಆಗಿದ್ದ ರಮೇಶ್, ಮನೆಯಲ್ಲಿ ನಾಳೆ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಹೊಂಡಾ ಎಕ್ಟಿವಾ ವಾಹನದಲ್ಲಿ ಹೆಡ್ ಕಾನಸ್ಟೇಬಲ್ ಹಾಗೂ ಆತ ಸಾಕಿದ ನಾಯಿ ಕರೆದುಕೊಂಡು ಹೂವು-ಹಣ್ಣು ಸೇರಿ ಪೂಜೆ ಸಾಮಾಗ್ರಿಗಳನ್ನು ಖರೀದಿ ಮಾಡಿಕೊಂಡು ಮನೆ‌ಗೆ ಹೊರಟ್ಟಿದ್ದರು.

ಮೃತ ಹೆಡ್​ಕಾನ್​​ಸ್ಟೇಬಲ್

ಇದನ್ನೂ ಓದಿ:ಪೋಷಕರಿಗೆ ಕ್ಷಮೆ ಕೋರಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ, ದೇಹದ ಅರ್ಧ ಭಾಗಕ್ಕೆ ಹುಡುಕಾಟ

ಈ ವೇಳೆ ಯಮನಂತೆ ಆಗಮಿಸಿದ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಘಟನೆಯಲ್ಲಿ ಮಾಲೀಕ ಸಾವನ್ನಪ್ಪಿದರೆ, ಸಾಕಿದ ನಾಯಿ ಬಚಾವ್ ಆಗಿದೆ. ಇತ್ತ ಮಾಲೀಕನ ಸಾವಿನಿಂದ ನಾಯಿ ಕಂಗಾಲಾಗಿದ್ದು, ಮನೆಯವರ ದುಖಃ ಮುಗಿಲುಮುಟ್ಟಿದೆ. ಸ್ಥಳಕ್ಕೆ ಡಿವೈಎಸ್​ಪಿ ಜೆ.ಹೆಚ್​.ಇನಾಮದಾರ, ಸಿಪಿಐ ಶಿವಯೋಗಿ ಹಾಗೂ ಪಿಎಸ್ಐ ಶಕುಂತಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Fri, 6 September 24

Follow Us
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಇರಾನ್ ಯುದ್ಧನೌಕೆ ಮೇಲೆ ದಾಳಿ ಹೇಗಿತ್ತು? ವಿಡಿಯೋ ಬಿಡುಗಡೆ ಮಾಡಿದ ಅಮೆರಿಕ
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ಹೊರ್ಮುಜ್ ಜಲಸಂಧಿಯಲ್ಲಿ 10 ತೈಲ ಹಡಗುಗಳನ್ನು ಉಡಾಯಿಸಿದ ಇರಾನ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ವೈರಲ್ ವಿಡಿಯೋಗೆ ನಟಿಯರ ಆಕ್ರೋಶ; ಪ್ರತಿಕ್ರಿಯೆ ನೀಡಿದ ಎಸ್. ನಾರಾಯಣ್
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಳಾದ ಲಿಫ್ಟ್​​ನಲ್ಲಿ ಸಿಲುಕಿದ ವ್ಯಕ್ತಿಯ ಶಾಕಿಂಗ್ ವಿಡಿಯೋ ಇಲ್ಲಿದೆ
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಕ್ಲಾಸ್ ರೂಂನಲ್ಲೇ ಶಿಕ್ಷಕನಿಗೆ ಹೊಡೆದ 10ನೇ ತರಗತಿ ವಿದ್ಯಾರ್ಥಿ!
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಆಗ್ರಾ-ಲಖನೌ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: ವಿಡಿಯೋ ವೈರಲ್
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಪ್ರತಿದಿನ ಆಕೆ ಹಿಂಸೆ ನೀಡುತ್ತಾಳೆ ಎಂದ ಶಾಲೆ ಮುಖ್ಯ ಶಿಕ್ಷಕ
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ಹಾರ್ಮುಜ್ ಜಲಸಂಧಿ ಕ್ಲೋಸ್: ಪರ್ಷಿಯನ್ ಕೊಲ್ಲೀಲಿ ಸಿಲುಕಿದ ಭಾರತದ 37 ಹಡಗು
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಾವಣಗೆರೆ ಜಿಲ್ಲಾಧಿಕಾರಿ ನಿವಾಸಕ್ಕೆ ಬಾಂಬ್ ಬೆದರಿಕೆ
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?
ದಂಪತಿ ಜಗಳ ಶಾಲೆ ತನಕ:ಶಿಕ್ಷಕನಿಗಾಗಿ ಗಲಾಟೆ ಮಾಡಿದ ಪತ್ನಿ ಹೇಳಿದ್ದೇನು?