AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ

ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಳ್ಳುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಅದರಂತೆ ಇದೀಗ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಕೌಟುಂಬಿಕ ಕಲಹ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಆತ್ಮಹತ್ಯೆಗೆ ಶರಣಾದ ಪತಿ
Basavaraj Yaraganavi
| Updated By: ಕಿರಣ್ ಹನುಮಂತ್​ ಮಾದಾರ್|

Updated on:Sep 06, 2024 | 5:53 PM

Share

ಶಿವಮೊಗ್ಗ, ಸೆ.06: ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪತಿ ಸೇತುವೆ ಮೇಲಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗ(Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಸುರುಳಿಕೊಪ್ಪ ಗ್ರಾಮದಲ್ಲಿ ನಡೆದಿದೆ. ಸದಾನಂದ ಭಟ್ ಆತ್ಮಹತ್ಯೆ ಮಾಡಿಕೊಂಡ ಪತಿ. ಹಲ್ಲೆಗೊಳಗಾದ ಪತ್ನಿ ಸಬೀತಾಗೆ ರಿಪ್ಪನ್ ಪೇಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ನಿನ್ನೆ(ಸೆ.05) ಪಟಗುಪ್ಪ ಸೇತುವೆ ಮೇಲಿಂದ ಸದಾನಂದ ಭಟ್ ಹಾರಿದ್ದರು. ಇಂದು ಸೇತುವೆ ಬಳಿ ಮೃತದೇಹ ಪತ್ತೆಯಾಗಿದೆ. ಈ ಕುರಿತು ರಿಪ್ಪನ್ ಪೇಟೆ ಹಾಗೂ ಹೊಸನಗರ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಾಗಿದೆ.

ಭೀಕರ ಅಪಘಾತಕ್ಕೆ ಪೊಲೀಸ್ ಹೆಡ್ ಕಾನಸ್ಟೇಬಲ್ ಸಾವು

ಗದಗ: ನಗರದ ಭೂಮರೆಡ್ಡಿ ಸರ್ಕಲ್​ನಲ್ಲಿ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಹೆಡ್​ ಕಾನ್​ಸ್ಟೇಬಲ್​ ರಮೇಶ್ ಡಂಬಳ(42) ಎಂಬುವವರು ಸಾವನ್ನಪ್ಪಿದ್ದಾರೆ. ಗಜೇಂದ್ರಗಡ ಪೊಲೀಸ್ ಠಾಣೆಯ ಹೆಡ್​ಕಾನ್​​ಸ್ಟೇಬಲ್ ಆಗಿದ್ದ ರಮೇಶ್, ಮನೆಯಲ್ಲಿ ನಾಳೆ ಗಣಪತಿ ಪ್ರತಿಷ್ಠಾಪನೆ ಹಿನ್ನೆಲೆ ಹೊಂಡಾ ಎಕ್ಟಿವಾ ವಾಹನದಲ್ಲಿ ಹೆಡ್ ಕಾನಸ್ಟೇಬಲ್ ಹಾಗೂ ಆತ ಸಾಕಿದ ನಾಯಿ ಕರೆದುಕೊಂಡು ಹೂವು-ಹಣ್ಣು ಸೇರಿ ಪೂಜೆ ಸಾಮಾಗ್ರಿಗಳನ್ನು ಖರೀದಿ ಮಾಡಿಕೊಂಡು ಮನೆ‌ಗೆ ಹೊರಟ್ಟಿದ್ದರು.

ಮೃತ ಹೆಡ್​ಕಾನ್​​ಸ್ಟೇಬಲ್

ಇದನ್ನೂ ಓದಿ:ಪೋಷಕರಿಗೆ ಕ್ಷಮೆ ಕೋರಿ ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ, ದೇಹದ ಅರ್ಧ ಭಾಗಕ್ಕೆ ಹುಡುಕಾಟ

ಈ ವೇಳೆ ಯಮನಂತೆ ಆಗಮಿಸಿದ ಕಾಂಕ್ರಿಟ್​​ ಮಿಕ್ಸಿಂಗ್ ವಾಹನ ಹರಿದು ಘಟನೆಯಲ್ಲಿ ಮಾಲೀಕ ಸಾವನ್ನಪ್ಪಿದರೆ, ಸಾಕಿದ ನಾಯಿ ಬಚಾವ್ ಆಗಿದೆ. ಇತ್ತ ಮಾಲೀಕನ ಸಾವಿನಿಂದ ನಾಯಿ ಕಂಗಾಲಾಗಿದ್ದು, ಮನೆಯವರ ದುಖಃ ಮುಗಿಲುಮುಟ್ಟಿದೆ. ಸ್ಥಳಕ್ಕೆ ಡಿವೈಎಸ್​ಪಿ ಜೆ.ಹೆಚ್​.ಇನಾಮದಾರ, ಸಿಪಿಐ ಶಿವಯೋಗಿ ಹಾಗೂ ಪಿಎಸ್ಐ ಶಕುಂತಲಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:36 pm, Fri, 6 September 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!