ಶಿವಮೊಗ್ಗ: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ 42 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ

| Updated By: ಕಿರಣ್ ಹನುಮಂತ್​ ಮಾದಾರ್

Updated on: Aug 24, 2024 | 6:41 PM

ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ನಡೆದಿದ್ದು, ಈ ಕುರಿತು ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಶಿವಮೊಗ್ಗ: ಅಂಗನವಾಡಿಗೆ ನುಗ್ಗಿ ಕಾರ್ಯಕರ್ತೆಯ 42 ಗ್ರಾಂ ತೂಕದ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ
ಅಂಗನವಾಡಿ ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಕಳ್ಳ
Follow us on

ಶಿವಮೊಗ್ಗ, ಆ.24: ಅಂಗನವಾಡಿಗೆ ನುಗ್ಗಿದ ಕಳ್ಳನೊಬ್ಬ ಅಂಗನವಾಡಿ ‌ಕಾರ್ಯಕರ್ತೆಯ ಮಾಂಗಲ್ಯ ಸರ ಕಿತ್ತುಕೊಂಡು ಹೋದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ(Hosanagara) ತಾಲೂಕಿನ ಪುರಪ್ಪೆಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹೆಬೈಲಿನಲ್ಲಿ ಆಗಸ್ಟ್ 22 ರಂದು ನಡೆದಿದೆ. ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಬಂದಿದ್ದ ಖತರ್ನಾಕ್​ ಖದೀಮನೊಬ್ಬ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಎಂಬುವರನ್ನು ಬೆದರಿಸಿ 42 ಗ್ರಾಂ ತೂಕದ ಸುಮಾರು 3 ಲಕ್ಷದ 20 ಸಾವಿರ ಮೌಲ್ಯದ ಮಾಂಗಲ್ಯ ಸರವನ್ನು ಎಗರಿಸಿದ್ದಾನೆ. ಘಟನೆಯಿಂದ ಗ್ರಾಮಸ್ಥರಲ್ಲಿ ಆತಂಕ ಮೂಡಿದ್ದು, ಹೊಸನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈರುಳ್ಳಿ ಗೋಡೌನ್​ಗೆ ನುಗ್ಗಿ 300 ಚಿಲ್ಲರೆ ಹಣವನ್ನು ಬಿಡದೆ ಕಳ್ಳತನ

ಬೆಂಗಳೂರು: ಯಶವಂತಪುರ RMC ಯಾರ್ಡ್​ನಲ್ಲಿ ಖತರ್ನಾಕ್ ಕಳ್ಳನೊಬ್ಬ ಆಗಸ್ಟ್ 18 ರಂದು ಮಧ್ಯರಾತ್ರಿ ನಾಲ್ಕೈದು ಅಂಗಡಿಗಳಿಗೆ ನುಗ್ಗಿ ಕಳ್ಳ ಮಾಡಿದ್ದಾನೆ. ಹಣದ ಜೊತೆ ಈರುಳ್ಳಿ ಕದ್ದ ಕಳ್ಳ, 300 ರೂ ಚಿಲ್ಲರೆ ಹಣವನ್ನು ಬಿಡದೆ ಎಗರಿಸಿದ್ದಾನೆ. ಜೊತೆಗೆ ಇತರೆ ಅಂಗಡಿಗಳಲ್ಲಿ ಕೈಗೆ ಸಿಕ್ಕಷ್ಟು ಹಣ ದೋಚಿದ್ದಾನೆ. ಈ ಕುರಿತು ಆರ್​ಎಂಸಿ ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ರಾಯಚೂರು: CCTVಯಲ್ಲಿ ಸೆರೆಯಾಗಿದೆ ಲೋಕಲ್ ಬ್ರ್ಯಾಂಡ್ ಎಣ್ಣೆ ಕಳ್ಳತನ ಕೈಚಳಕ

ಕೊಡಗಿನಲ್ಲಿ ಮುಂದುವರಿದ ಅಸ್ಸಾಂ‌ ಕಾರ್ಮಿಕರ ದುಷ್ಕೃತ್ಯ

ಕೊಡಗು: ಮಡಿಕೇರಿ ನಗರದ ಹೃದಯ ಭಾಗದಲ್ಲಿರುವ ಕೋಟೆ ಮಾರಮ್ಮ ದೇವಸ್ಥಾನದಲ್ಲಿ ಆಗಸ್ಟ್​ 16ರಂದು ಅಸ್ಸಾಂ‌ ಮೂಲದ ಇಬ್ಬರು ಕಾರ್ಮಿಕರು ಕಳ್ಳತನ ಮಾಡಿದ್ದರು. ಈ ಕುರಿತು ದೂರು ಕೂಡ ದಾಖಲಾಗಿತ್ತು. ಇದೀಗ ಆರೋಪಿಗಳಾದ ಅಲ್ತಾಬ್ ಆಲಿ(27), ಮೀರ್ ಹುಸೇನ್(36) ಎಂಬುವವರನ್ನು ಮಡಿಕೇರಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರ ಬಳಿ ಇದ್ದ 3 ಗ್ರಾಂ ಚಿನ್ನದ ಮಾಂಗಲ್ಯ, 160 ಗ್ರಾಂ ಬೆಳ್ಳಿ ಆಭರಣ, 95 ಸಾವಿರ ನಗದು ಜಪ್ತಿ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ