AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ

ಸಾಗರ ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ವಿದ್ಯಾರ್ಥಿಯೋರ್ವ, ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದು ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇತ್ತ ಮಗಳಿಗೆ ಬುತ್ತಿ ಕೊಡಲು ತೆರಳುತ್ತಿದ್ದ ಮಹಿಳೆ ಹಾಗೂ ಯುವಕನ ಬೈಕ್​ಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸ್ಥಳದಲ್ಲೆ ಸಾವನ್ನಪ್ಪಿದ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿ ನಡೆದಿದೆ.

ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್; ಮನನೊಂದ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ
ಮೃತ ವಿದ್ಯಾರ್ಥಿ ಮನುಷ್ ಡಿ
Basavaraj Yaraganavi
| Edited By: |

Updated on: Jul 14, 2024 | 6:15 PM

Share

ಶಿವಮೊಗ್ಗ, ಜು.14: ಸೆಮಿಸ್ಟರ್ ಪರೀಕ್ಷೆಯಲ್ಲಿ ಫೇಲ್​ ಆಗಿದ್ದಕ್ಕೆ ಮನನೊಂದ ವಿದ್ಯಾರ್ಥಿಯೋರ್ವ ಕಳೆನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸಾಗರ(Sagara) ತಾಲೂಕಿನ ಆನಂದಪುರ ಸಮೀಪದ ಅಡೂರು ಗ್ರಾಮದಲ್ಲಿ ನಡೆದಿದೆ. ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಬಿಎ ವ್ಯಾಸಾಂಗ ಮಾಡುತಿದ್ದ ವಿದ್ಯಾರ್ಥಿ ಮನುಷ್ ಡಿ (19) ಮೃತ ರ್ದುದೈವಿ. ಇತ ಸೆಮಿಸ್ಟರ್ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದ.

ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು

ಹೌದು, ಇತ್ತೀಚೆಗೆ ನಡೆದಿದ್ದ ಸೆಮಿಸ್ಟರ್​ ವಿಷಯದಲ್ಲಿ ಅನುತ್ತೀರ್ಣನಾಗಿದ್ದ. ಇದರಿಂದ ಬೇಸತ್ತು ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸದಲ್ಲಿ ಕಳೆನಾಶಕ ಸೇವಿಸಿದ್ದಾನೆ. ವಿಷಯ ತಿಳಿದ ಕೂಡಲೇ ವಿದ್ಯಾರ್ಥಿ ಮನುಷ್​ನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ, ದುರಾದೃಷ್ಟವಶಾತ್​ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಆನಂದಪುರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ಬೆಳೆ ಹಾನಿ, ಬರ; ಬಾಗಲಕೋಟೆ ಜಿಲ್ಲೆಯಲ್ಲಿ ಒಂದೂವರೆ ವರ್ಷದಲ್ಲಿ 24 ರೈತರು ಆತ್ಮಹತ್ಯೆಗೆ ಶರಣು

ಅಪರಿಚಿತ ವಾಹನ ಡಿಕ್ಕಿ; ಬೈಕ್​ನಲ್ಲಿದ್ದ ಮಹಿಳೆ, ಬಾಲಕ ಸಾವು

ಕೊಪ್ಪಳ: ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಬೈಕ್​ನಲ್ಲಿದ್ದ ಮಹಿಳೆ ಹಾಗೂ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನಡೆದಿದೆ. ಕಡೇಕೊಪ್ಪ ಗ್ರಾಮದ ರುಕ್ಮಿಣಿ(36), ವಿಜಯ್(13) ಮೃತ ದುರ್ದೈವಿಗಳು. ಕಡೇಕೊಪ್ಪ ಗ್ರಾಮದ ಬಳಿ ಡಾಬಾ ನಡೆಸುತ್ತಿದ್ದ ಮೃತ ರುಕ್ಮಿಣಿ, ಮಗಳಿಗೆ ಬುತ್ತಿ ಕೊಡಲು ಬಾಗಲಕೋಟೆ ಜಿಲ್ಲೆಯ ಇಳಕಲ್​​ಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ. ಸ್ಥಳಕ್ಕೆ ಕುಷ್ಟಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
‘ರಾಮ ಹಾಗೂ ಹನುಮನ ಭಕ್ತರು ಖುಷಿಯಿಂದ ನೋಡುವ ಸಿನಿಮಾ ಇದು’; ರಿಷಬ್ ಶೆಟ್ಟಿ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಮೆಕ್ಸಿಕೋದಲ್ಲಿ ಡ್ರಗ್ ಲಾರ್ಡ್​ ಎಲ್ ಮೆಂಚೊ ಹತ್ಯೆ, ಭುಗಿಲೆದ್ದ ಹಿಂಸಾಚಾರ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಜಬಲ್ಪುರ ಹೆದ್ದಾರಿಯಲ್ಲಿ ರೈಲ್ವೆ ಮೇಲ್ಸೇತುವೆಯ ದೊಡ್ಡ ಭಾಗ ಕುಸಿತ
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಪರ್ಸ್​​ನಲ್ಲಿ ಏನೇನು ಇರಬೇಕು ಯಾವ ವಸ್ತುಗಳು ಇರಬಾರದು?
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಇಂದು ಈ ರಾಶಿಯವರ ವ್ಯಾಪಾರದಲ್ಲಿ ಯಶಸ್ಸು
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು