AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ
ಶಿವಮೊಗ್ಗ ವಿಮಾನ ನಿಲ್ದಾಣ
ಗಣಪತಿ ಶರ್ಮಾ
|

Updated on: Jul 27, 2023 | 4:02 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದಿಂದ (Shivamogga Airport) ವಿಮಾನ ಸಂಚಾರ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11 ರಂದು ವಿಮಾನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಈ ಹಿಂದೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದರು. ಆದರೆ, ಇದೀಗ ಆಗಸ್ಟ್ 31ರಿಂದ ಬೆಂಗಳೂರು ಶಿವಮೊಗ್ಗ ಮಧ್ಯೆ ವಿಮಾನ ಸಂಚಾರ ಆರಂಭವಾಗುವ ಬಗ್ಗೆ ಮಾಹಿತಿ ದೊರೆತಿದೆ. ಈ ವಿಚಾರವಾಗಿ ಇಂಡಿಗೊ (IndiGo) ವಿಮಾನಯಾನ ಸಂಸ್ಥೆಯ ವೆಬ್​ಸೈಟ್​ನಲ್ಲೂ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಯ ಟಿಕೆಟ್ ಬುಕಿಂಗ್ ವಿಂಡೋದಲ್ಲಿರುವ ಮಾಹಿತಿಯಿಂದ ತಿಳಿದುಬಂದಿದೆ.

ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ ಬಂದಿಳಿದಿದ್ದಲ್ಲದೆ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದರು. ಶಿವಮೊಗ್ಗದಿಂದ 4 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ದೊರೆತಿದೆ ಎಂದು ಹೇಳಲಾಗಿದ್ದರೂ ಸದ್ಯ ಶಿವಮೊಗ್ಗ ಬೆಂಗಳೂರು ಮಧ್ಯೆ ಮೊದಲಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಆ ನಂತರ ಉಳಿದ ಮಾರ್ಗಗಳಲ್ಲಿಯೂ ಹಾರಾಟ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶಿವಮೊಗ್ಗ ಏರ್​ಪೋರ್ಟ್​ನಿಂದ ಇಂಡಿಗೋ ವಿಮಾನ ಹಾರಾಟ: 4 ಹೊಸ ಮಾರ್ಗಗಳಲ್ಲಿ ಹಾರಾಟಕ್ಕೆ ಅನುಮತಿ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಸೋಗಾನೆ ಬಳಿ ನಿರ್ಮಾಣವಾಗಿದೆ. ಇದರ ರನ್‌ ವೇ ಸುಮಾರು 3110 ಮೀಟ​ರ್‌ ಉದ್ದ, 45 ಮೀಟರ್‌ ಅಗಲ ಇದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಉಡಾನ್‌ ಯೋಜನೆಯಡಿ ಈ ನಿಲ್ದಾಣ ಸಾಕಾರಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?