AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ
ಶಿವಮೊಗ್ಗ ವಿಮಾನ ನಿಲ್ದಾಣ
Follow us
Ganapathi Sharma
|

Updated on: Jul 27, 2023 | 4:02 PM

ಬೆಂಗಳೂರು: ಶಿವಮೊಗ್ಗದಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದಿಂದ (Shivamogga Airport) ವಿಮಾನ ಸಂಚಾರ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11 ರಂದು ವಿಮಾನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಈ ಹಿಂದೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದರು. ಆದರೆ, ಇದೀಗ ಆಗಸ್ಟ್ 31ರಿಂದ ಬೆಂಗಳೂರು ಶಿವಮೊಗ್ಗ ಮಧ್ಯೆ ವಿಮಾನ ಸಂಚಾರ ಆರಂಭವಾಗುವ ಬಗ್ಗೆ ಮಾಹಿತಿ ದೊರೆತಿದೆ. ಈ ವಿಚಾರವಾಗಿ ಇಂಡಿಗೊ (IndiGo) ವಿಮಾನಯಾನ ಸಂಸ್ಥೆಯ ವೆಬ್​ಸೈಟ್​ನಲ್ಲೂ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಯ ಟಿಕೆಟ್ ಬುಕಿಂಗ್ ವಿಂಡೋದಲ್ಲಿರುವ ಮಾಹಿತಿಯಿಂದ ತಿಳಿದುಬಂದಿದೆ.

ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ ಬಂದಿಳಿದಿದ್ದಲ್ಲದೆ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದರು. ಶಿವಮೊಗ್ಗದಿಂದ 4 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ದೊರೆತಿದೆ ಎಂದು ಹೇಳಲಾಗಿದ್ದರೂ ಸದ್ಯ ಶಿವಮೊಗ್ಗ ಬೆಂಗಳೂರು ಮಧ್ಯೆ ಮೊದಲಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಆ ನಂತರ ಉಳಿದ ಮಾರ್ಗಗಳಲ್ಲಿಯೂ ಹಾರಾಟ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶಿವಮೊಗ್ಗ ಏರ್​ಪೋರ್ಟ್​ನಿಂದ ಇಂಡಿಗೋ ವಿಮಾನ ಹಾರಾಟ: 4 ಹೊಸ ಮಾರ್ಗಗಳಲ್ಲಿ ಹಾರಾಟಕ್ಕೆ ಅನುಮತಿ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಸೋಗಾನೆ ಬಳಿ ನಿರ್ಮಾಣವಾಗಿದೆ. ಇದರ ರನ್‌ ವೇ ಸುಮಾರು 3110 ಮೀಟ​ರ್‌ ಉದ್ದ, 45 ಮೀಟರ್‌ ಅಗಲ ಇದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಉಡಾನ್‌ ಯೋಜನೆಯಡಿ ಈ ನಿಲ್ದಾಣ ಸಾಕಾರಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Video: ಉತ್ತರಕಾಶಿಯಲ್ಲಿ ಮೇಘಸ್ಫೋಟ, 9 ಮಂದಿ ನಾಪತ್ತೆ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
Weekly Horoscope: ಜೂನ್​ 30 ರಿಂದ ಜುಲೈ 6 ರವರೆಗಿನ ವಾರ ಭವಿಷ್ಯ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಷಾಢ ಮಾಸದಲ್ಲಿ ಶುಭ ಕಾರ್ಯಗಳನ್ನ ಯಾಕೆ ಮಾಡಬಾರದು ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಆಶ್ಲೇಷ ನಕ್ಷತ್ರದಲ್ಲಿ ಚಂದ್ರ ಸಂಚಾರ, ಈ ದಿನ ಯಾರಿಗೆಲ್ಲಾ ಶುಭ ತಿಳಿಯಿರಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಉತ್ತರಾಖಂಡದಲ್ಲಿ ಪ್ರವಾಹ; ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಸರಯೂ ನದಿ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಜೈನ ಮುನಿಗಳಿಂದ ಪ್ರಧಾನಿ ಮೋದಿಗೆ ಧರ್ಮ ಚಕ್ರವರ್ತಿ ಬಿರುದು ಪ್ರದಾನ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಧೂಮಪಾನ ಮತ್ತು ಡ್ರಗ್ಸ್ ಸೇವನೆ ಅಪಾಯಕಾರಿಯಾಗಿ ಪರಿಣಮಿಸುತ್ತಿದೆ: ಡಾ ಸದಾನಂದ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಮಳೆಯಿಂದ ಚಾರ್ ಧಾಮ್ ಯಾತ್ರೆಗೆ ಅಡ್ಡಿ; ಕೇದಾರನಾಥ ಮಾರ್ಗದಲ್ಲಿ ಭೂಕುಸಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಸ್ಕಂದಗಿರಿ ಮತ್ತು ಬಹುನಂದೀಶ್ವವರ ದೇವಸ್ಥಾನಕ್ಕೂ ನೋ ಎಂಟ್ರಿ: ಜಿಲ್ಲಾಡಳಿತ
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್
ಬೌಲಿಂಗ್ ಕೋಚ್ ಜೊತೆ WWE ಆಡಿ ಸೋತ ಅರ್ಷದೀಪ್, ಆಕಾಶ್