AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ

Shivamogga Airport: ಶಿವಮೊಗ್ಗ ಬೆಂಗಳೂರು ಮಧ್ಯೆ ಇಂಡಿಗೊ ವಿಮಾನ ಸಂಚಾರಕ್ಕೆ ಕೊನೆಗೂ ಮುಹೂರ್ತ ನಿಗದಿ; ಇಲ್ಲಿದೆ ವಿವರ
ಶಿವಮೊಗ್ಗ ವಿಮಾನ ನಿಲ್ದಾಣ
Ganapathi Sharma
|

Updated on: Jul 27, 2023 | 4:02 PM

Share

ಬೆಂಗಳೂರು: ಶಿವಮೊಗ್ಗದಲ್ಲಿ ಇತ್ತೀಚೆಗೆ ನೂತನವಾಗಿ ನಿರ್ಮಾಣಗೊಂಡು ಉದ್ಘಾಟನೆಯಾಗಿರುವ ವಿಮಾನ ನಿಲ್ದಾಣದಿಂದ (Shivamogga Airport) ವಿಮಾನ ಸಂಚಾರ ಆರಂಭಕ್ಕೆ ಕೊನೆಗೂ ಮುಹೂರ್ತ ನಿಗದಿಯಾಗಿದೆ. ಆಗಸ್ಟ್ 11 ರಂದು ವಿಮಾನ ಕಾರ್ಯಾಚರಣೆ ಆರಂಭವಾಗಲಿದೆ ಎಂದು ಈ ಹಿಂದೆ ಶಿವಮೊಗ್ಗ ಸಂಸದ ಬಿವೈ ರಾಘವೇಂದ್ರ ಹೇಳಿದ್ದರು. ಆದರೆ, ಇದೀಗ ಆಗಸ್ಟ್ 31ರಿಂದ ಬೆಂಗಳೂರು ಶಿವಮೊಗ್ಗ ಮಧ್ಯೆ ವಿಮಾನ ಸಂಚಾರ ಆರಂಭವಾಗುವ ಬಗ್ಗೆ ಮಾಹಿತಿ ದೊರೆತಿದೆ. ಈ ವಿಚಾರವಾಗಿ ಇಂಡಿಗೊ (IndiGo) ವಿಮಾನಯಾನ ಸಂಸ್ಥೆಯ ವೆಬ್​ಸೈಟ್​ನಲ್ಲೂ ಮಾಹಿತಿ ನೀಡಲಾಗಿದೆ.

ಬೆಂಗಳೂರಿನಿಂದ ಬೆಳಗ್ಗೆ 9.50ಕ್ಕೆ ಹೊರಡಲಿರುವ ವಿಮಾನ 11.05ಕ್ಕೆ ಶಿವಮೊಗ್ಗ ತಲುಪಲಿದೆ. ಶಿವಮೊಗ್ಗದಿಂದ 11.25ಕ್ಕೆ ಹೊಡಲಿರುವ ವಿಮಾನ 12.25ಕ್ಕೆ ಬೆಂಗಳೂರು ತಲುಪಲಿದೆ ಎಂದು ಇಂಡಿಗೊ ವಿಮಾನಯಾನ ಸಂಸ್ಥೆಯ ಟಿಕೆಟ್ ಬುಕಿಂಗ್ ವಿಂಡೋದಲ್ಲಿರುವ ಮಾಹಿತಿಯಿಂದ ತಿಳಿದುಬಂದಿದೆ.

ಫೆಬ್ರವರಿ 27 ರಂದು ಪ್ರಧಾನಿ ನರೇಂದ್ರ ಮೋದಿ ದೆಹಲಿಯಿಂದ ಶಿವಮೊಗ್ಗಕ್ಕೆ ವಿಮಾನದಲ್ಲಿ ಬಂದಿಳಿದಿದ್ದಲ್ಲದೆ ನಿಲ್ದಾಣವನ್ನು ಲೋಕಾರ್ಪಣೆಗೊಳಿಸಿದ್ದರು. ಶಿವಮೊಗ್ಗದಿಂದ 4 ಮಾರ್ಗಗಳಲ್ಲಿ ವಿಮಾನ ಹಾರಾಟಕ್ಕೆ ಅನುಮತಿ ದೊರೆತಿದೆ ಎಂದು ಹೇಳಲಾಗಿದ್ದರೂ ಸದ್ಯ ಶಿವಮೊಗ್ಗ ಬೆಂಗಳೂರು ಮಧ್ಯೆ ಮೊದಲಿಗೆ ವಿಮಾನ ಹಾರಾಟ ಆರಂಭವಾಗಲಿದೆ. ಆ ನಂತರ ಉಳಿದ ಮಾರ್ಗಗಳಲ್ಲಿಯೂ ಹಾರಾಟ ಆರಂಭಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ಶಿವಮೊಗ್ಗ ಏರ್​ಪೋರ್ಟ್​ನಿಂದ ಇಂಡಿಗೋ ವಿಮಾನ ಹಾರಾಟ: 4 ಹೊಸ ಮಾರ್ಗಗಳಲ್ಲಿ ಹಾರಾಟಕ್ಕೆ ಅನುಮತಿ

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಮಹತ್ವಾಕಾಂಕ್ಷೆಯ ಯೋಜನೆಯಾಗಿದ್ದ ಶಿವಮೊಗ್ಗ ವಿಮಾನ ನಿಲ್ದಾಣ ಸೋಗಾನೆ ಬಳಿ ನಿರ್ಮಾಣವಾಗಿದೆ. ಇದರ ರನ್‌ ವೇ ಸುಮಾರು 3110 ಮೀಟ​ರ್‌ ಉದ್ದ, 45 ಮೀಟರ್‌ ಅಗಲ ಇದೆ. ಸುಮಾರು 220 ಕೋಟಿ ರೂ. ವೆಚ್ಚದಲ್ಲಿ 662.38 ಎಕರೆ ಪ್ರದೇಶದಲ್ಲಿ ವಿಮಾನ ನಿಲ್ದಾಣ ನಿರ್ಮಾಣವಾಗಿದೆ. ಉಡಾನ್‌ ಯೋಜನೆಯಡಿ ಈ ನಿಲ್ದಾಣ ಸಾಕಾರಗೊಂಡಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ರಾಜಣ್ಣ ಹೈಕಮಾಂಡ್ ವಿರುದ್ಧ ಮಾತಾಡಿಲ್ಲ, ಅದು ಸುಳ್ಳು ವದಂತಿ: ಖರ್ಗೆ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ನೇರ ಮಾತುಗಾರಿಕೆ ಸಹಿಸದ ರಾಹುಲ್ ಗಾಂಧಿ ಪ್ರಜಾಪ್ರಭುತ್ವದ ರಕ್ಷಕರೇ? ಅಶೋಕ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ಸಿಎಂ ಸಿದ್ದರಾಮಯ್ಯ ಪರ ಇದ್ದ ರಾಜಣ್ಣ ರಾಜೀನಾಮೆ ಏಕೆ? ಅಶೋಕ್​ ಪ್ರಶ್ನೆ
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ವಿಷ್ಣುವರ್ಧನ್ ಸಮಾಧಿ ನೆಲಸಮ: ವಾಣಿಜ್ಯ ಮಂಡಳಿಗೆ ಧಿಕ್ಕಾರ ಕೂಗಿದ ಫ್ಯಾನ್ಸ್
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಸಚಿವ ಸ್ಥಾನಕ್ಕೆ ರಾಜೀನಾಮೆ ವಿಚಾರವಾಗಿ ಸದನದಲ್ಲಿ ​ರಾಜಣ್ಣ ಹೇಳಿದ್ದಿಷ್ಟು
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಬೆಳಗ್ಗೆಯಿಂದ ಬ್ಯೂಸಿ, ಮೊಗಸಾಲೆಗೆ ಬಂದಾಗಲೇ ವಿಷಯ ಗೊತ್ತಾಗಿದ್ದು: ಸಚಿವೆ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಮತಗಳ್ಳತನ, ಕಾಲ್ತುಳಿತ ಪ್ರಕರಣಗಳನ್ನೂ ಸದನದಲ್ಲಿ ಚರ್ಚಿಸುತ್ತೇವೆ: ಬಿವೈವಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ಇವತ್ತು ರಾಯರ ದರ್ಶನ ಮಾಡುವ ಭಕ್ತರಿಗೆ ವಿಶೇಷ ಅನುಗ್ರಹ ಪ್ರಾಪ್ತಿ
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ರಾಹುಲ್ ಗಾಂಧಿಯನ್ನು ವಶಕ್ಕೆ ಪಡೆದ ಪೊಲೀಸರು
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್
ಬಿಜೆಪಿ ಸಂಸದರಿಗೆ ಖಾಲಿ ಡಬ್ಬಗಳಂತೆ ಸದ್ದು ಮಾಡೋದು ಮಾತ್ರ ಗೊತ್ತು: ಡಿಕೆಎಸ್