AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಲು ಪರದಾಡಿದ ಯಡಿಯೂರಪ್ಪ ಇದ್ದ ವಿಮಾನ

ಹವಾಮಾನ ಸಮಸ್ಯೆಯಿಂದಾಗಿ ಇತ್ತೀಚೆಗಷ್ಟೇ ವಿಮಾನವೊಂದು ಶಿವಮೊಗ್ಗ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿತ್ತು. ಇದೀಗ ಮತ್ತದೇ ಹವಾಮಾನ ವೈಪರೀತ್ಯದಿಂದಾಗಿ ಶಿವಮೊಗ್ಗ ನಿಲ್ದಾಣದಲ್ಲಿ ವಿಮಾನ ಲ್ಯಾಂಡ್​ ಆಗಲು ಪರದಾಡಿರುವ ಘಟನೆ ನಡೆದಿದೆ.

ಶಿವಮೊಗ್ಗ ಏರ್​ಪೋರ್ಟ್​ನಲ್ಲಿ ಲ್ಯಾಂಡ್ ಆಗಲು ಪರದಾಡಿದ ಯಡಿಯೂರಪ್ಪ ಇದ್ದ ವಿಮಾನ
ಪ್ರಾತಿನಿಧಿಕ ಚಿತ್ರ
Basavaraj Yaraganavi
| Edited By: |

Updated on: Oct 12, 2023 | 12:24 PM

Share

ಶಿವಮೊಗ್ಗ, (ಅಕ್ಟೋಬರ್ 12): ಇತ್ತೀಚೆಗಷ್ಟೇ ಬೆಂಗಳೂರಿನಿಂದ ಶಿವಮೊಗ್ಗ ನಿಲ್ದಾಣಕ್ಕೆ (Shivamogga Airport) ಬಂದಿದ್ದ ವಿಮಾನವೊಂದು (Flight) ಲ್ಯಾಂಡ್ ಆಗದೇ ಬೆಂಗಳೂರಿಗೆ(Bengaluru) ವಾಪಸ್ ಆಗಿತ್ತು. ಹವಾಮಾನ (Weather) ವೈಪರೀತ್ಯದಿಂದಾಗಿ ಶಿವಮೊಗ್ಗ (Shivamogga) ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಮಾಡಲಾಗದೇ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಹೋಗಿತ್ತು. ಇದರ ಬೆನ್ನಲ್ಲೇ ಇದೀಗ ಅಂತಹದ್ದೇ ಘಟನೆ ನಡೆದಿದೆ. ಹೌದು..ಬೆಂಗಳೂರು-ಶಿವಮೊಗ್ಗ ಇಂಡಿಗೋ ವಿಮಾನ ಹವಾಮಾನ ವೈಪರೀತ್ಯದಿಂದಾಗಿ 20 ನಿಮಿಷ ತಡವಾಗಿ ಲ್ಯಾಂಡ್ ಆಗಿದೆ.

ಇಂದು (ಅಕ್ಟೋಬರ್ 12) ಬೆಳಿಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಟ ವಿಮಾನ 11.05ಕ್ಕೆ ಶಿವಮೊಗ್ಗದ ಸೋಗಾನೆ ಬಳಿ ಇರುವ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗಬೇಕಿತ್ತು. ಆದ್ರೆ, ಹವಾಮಾನ ವೈಪರೀತ್ಯದಿಂದಾಗಿ ವಿಮಾನ 20 ನಿಮಿಷ ತಡವಾಗಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿದಿದೆ.

ಇದನ್ನೂ ಒದಿ: ಹವಾಮಾನ ವೈಪರೀತ್ಯ: ಶಿವಮೊಗ್ಗ ಏರ್‌ಪೋರ್ಟ್‌ನಲ್ಲಿ ಲ್ಯಾಂಡ್​ ಆಗದೆ ಬೆಂಗಳೂರಿಗೆ ವಾಪಸ್ ಆದ ವಿಮಾನ

ಮೋಡ ಕವಿದ ವಾತಾವರಣ ಇರುವುದರಿಂದ  ವಿಸಿಬಲಿಟಿ ಇಲ್ಲದಿರುವ ಹಿನ್ನೆಲೆಯಲ್ಲಿ ಇಂಡಿಗೋ ವಿಮಾನ ಲ್ಯಾಂಡ್​ ವಿಳಂಬವಾಗಿದೆ. ಇನ್ನು ಮಾಜಿ ಮುಖ್ಯಮಂತ್ರಿ ಬಿಎಸ್  ಯಡಿಯೂರಪ್ಪ ಕೂಡ ಇದೇ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಿದ್ದಾರೆ.

ಕಳೆದ ಭಾನುವಾರ ಅಂದರೆ ಅಕ್ಟೋಬರ್ 8ರಂದು ಹವಾಮಾನ ವೈಪರೀತ್ಯದಿಂದಾಗಿ ಇಂಡಿಗೋ ವಿಮಾನ ಶಿವಮೊಗ್ಗ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ಬೆಂಗಳೂರಿಗೆ ವಾಪಸ್ ಆಗಿತ್ತು. ಅಂದು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ತುಂತುರು ಮಳೆ ಆಗುತ್ತಿತ್ತು. ಜೊತೆಗೆ ಭಾರೀ ಪ್ರಮಾಣದ ಮೋಡ ಆವರಿಸಿತ್ತು. ಹೀಗಾಗಿ ಪೈಲೆಟ್​​ಗೆ ರನ್​ ವೇ ಸರಿಯಾಗಿ ಕಾಣಿಸಿಲ್ಲ. ಇದರಿಂದ ಆಗಸದಲ್ಲಿ ಸುತ್ತಾಡಿತ್ತು. ಆದರೂ ರನ್​ ವೇ ಸರಿಯಾಗಿ ಕಾಣಿಸದಿರುವುದರಿಂದ ಕೊನೆ ವಿಮಾನ ಬೆಂಗಳೂರಿಗೆ ವಾಪಸ್​ ಆಗಿದ್ದನ್ನು ಇಲ್ಲಿ ಸ್ಮರಿಸಬಹುದು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ