AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಮೊಗ್ಗ: ತೀರ್ಥಹಳ್ಳಿಯ ಮೂರು ಸಹಕಾರ ಸಂಸ್ಥೆಗಳ ಮೇಲೆ ಐಟಿ ದಾಳಿ, ಅಕ್ರಮ ಬಯಲಿಗೆ

ಅಕ್ರಮದ ಆರೋಪದ ಕಾರಣ ತೀರ್ಥಹಳ್ಳಿಯ ಮೂರು ಸಹಕಾರ ಸಂಸ್ಥೆಗಳ ಬುಧವಾರ ಸಂಜೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಅಕ್ರಮ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಇವುಗಳು ರಾಜಕಾರಣಿಯೊಬ್ಬರ ಬೆಂಬಲಿಗರು ಇರುವ ಸಹಕಾರ ಸಂಸ್ಥೆ ಎನ್ನಲಾಗಿದೆ.

ಶಿವಮೊಗ್ಗ: ತೀರ್ಥಹಳ್ಳಿಯ ಮೂರು ಸಹಕಾರ ಸಂಸ್ಥೆಗಳ ಮೇಲೆ ಐಟಿ ದಾಳಿ, ಅಕ್ರಮ ಬಯಲಿಗೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on:Apr 12, 2023 | 7:56 PM

Share

ಶಿವಮೊಗ್ಗ: ಅಕ್ರಮದ ಆರೋಪದ ಕಾರಣ ತೀರ್ಥಹಳ್ಳಿ(Thirthahalli) ಮೂರು ಸಹಕಾರ ಸಂಸ್ಥೆಗಳ ಬುಧವಾರ ಸಂಜೆ ಆದಾಯ ತೆರಿಗೆ ಇಲಾಖೆ (IT Raid) ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿ ತಪಾಸಣೆ ನಡೆಸಿದ್ದಾರೆ. ಇದೇ ವೇಳೆ, ಅಕ್ರಮ ವಹಿವಾಟು ನಡೆದಿರುವುದು ಪತ್ತೆಯಾಗಿದೆ. ಇವುಗಳು ರಾಜಕಾರಣಿಯೊಬ್ಬರ ಬೆಂಬಲಿಗರು ಇರುವ ಸಹಕಾರ ಸಂಸ್ಥೆ ಎನ್ನಲಾಗಿದೆ. ಚುನಾವಣೆ ವೇಳೆ ಅಕ್ರಮ ವಹಿವಾಟು ಬಗ್ಗೆ ಮಾಹಿತಿ ಹಿನ್ನೆಲೆಯಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಂಸ್ಥೆಗಳ ಲೆಕ್ಕ ಪತ್ರ ಮತ್ತು ನಗದು ವಹಿವಾಟಿನ ವಿವರ ಪರಿಶೀಲಿಸುತ್ತಿರುವನ್ನು ಐಟಿ ಅಧಿಕಾರಿಗಳ ತಂಡ ಪರಿಶೀಲಿಸುತ್ತಿದೆ.

ತೀರ್ಥಹಳ್ಳಿ ಪಟ್ಟಣದಲ್ಲಿರುವ ಮೂರ್ನಾಲ್ಕು ಸಹಕಾರ ಸಂಘಗಳ ಮೇಲೆ ದಾಳಿ ಆಗಿದೆ. ಸ್ಥಳದಲ್ಲಿ ಚುನಾವಣಾಧಿಕಾರಿ, ತೀರ್ಥಹಳ್ಳಿ ಡಿವೈಎಸ್ಪಿ, ತಹಶೀಲ್ದಾರ್ ಕೂಡ ಇದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಂದರ್ಭವಾದ ಕಾರಣ ಹಣಕಾಸಿನ ವಹಿವಾಟಿನ ಮೇಲೆ ಹೆಚ್ಚಿನ ನಿಗಾ ಇರಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಹಣದ ಅಕ್ರಮ ವಹಿವಾಟು ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Karnataka Elections: ಪದ್ಮನಾಭನಗರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಗುರಪ್ಪ ನಾಯ್ಡು ಮನೆ ಮೇಲೆ ಐಟಿ ದಾಳಿ

ರಾಜ್ಯದ ಹಲವು ಸಹಕಾರಿ ಬ್ಯಾಂಕ್‌ಗಳಲ್ಲಿ 1,000 ಕೋಟಿ ರೂಪಾಯಿಗೂ ಹೆಚ್ಚಿನ ಮೊತ್ತದ ಅಕ್ರಮ ನಡೆದಿರುವುದನ್ನು ಆದಾಯ ತೆರಿಗೆ ಇಲಾಖೆ ಕೆಲವು ದಿನಗಳ ಹಿಂದೆ ಬಯಲಿಗೆಳೆದಿರುವ ಬಗ್ಗೆ ವರದಿಯಾದ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿಯೂ ಐಟಿ ದಾಳಿ ನಡೆದಿದೆ. ಸಾಮಾನ್ಯವಾಗಿ ಚುನಾವಣಾ ಸಂದರ್ಭದಲ್ಲಿ ಮೊತ್ತದ ನಗದು ಸಂಗ್ರಹಿಸಲು ಸಹಕಾರಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದ್ದು, ಈ ಬಾರಿ ಚುನಾವಣೆ ಘೋಷಣೆಗೂ ಮುನ್ನವೇ ಅಕ್ರಮ ನಡೆದಿದೆ ಎಂದು ಐಟಿ ಅಧಿಕಾರಿಗಳು ತಿಳಿಸಿದ್ದರು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:28 pm, Wed, 12 April 23

ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಭತ್ತದ ಗಿಡ ನೆಟ್ಟು ಗಮನಸೆಳೆದ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮದುವೆಯಾಗದೆ ಗರ್ಭಿಣಿ, ಭಾವನ ರಾಮಣ್ಣ ತಂದೆ ಪ್ರತಿಕ್ರಿಯೆ ಏನಿತ್ತು?
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಮತ್ತೊಮ್ಮೆ ಬ್ಯಾಟ್ ಕೈಬಿಟ್ಟ ರಿಷಭ್ ಪಂತ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ಹತ್ತು ನಿಮಿಷಗಳಲ್ಲಿ ಅನುಮತಿ ತರುತ್ತೇನೆಂದವರು ಯಾಕೆ ಸುಮ್ಮನಿದ್ದಾರೆ?ಸುರೇಶ್
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ನನ್ನದು ಶಿಸ್ತು ಬದ್ಧ ಬದುಕು, ಊಟದಲ್ಲಿ ಬಹಳ ಕಟ್ಟುನಿಟ್ಟು: ಭಾವನಾ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಕುಸಿತ
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ಕುಮಾರಸ್ವಾಮಿ ಕುರಿತ ಪ್ರಶ್ನೆಯನ್ನು ಶಿವಕುಮಾರ್ ಅಸಡ್ಡೆ ಮಾಡಿದರು!
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ವಿಡಿಯೋ: ಪೊಲೀಸರೆದುರೇ ಗಾಳಿಯಲ್ಲಿ ಗುಂಡು ಹಾರಿಸಿದ ರಮೇಶ್ ಜಾರಕಿಹೊಳಿ ಪುತ್ರ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ಮದುವೆಯಾಗದೆ ತಾಯಿ ಆಗಲಿರುವ ಭಾವನ, ನಿರ್ಧಾರದ ಬಗ್ಗೆ ಮೊದಲ ಪ್ರತಿಕ್ರಿಯೆ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ
ರಸ್ತೆಯಲ್ಲಿ ನಿಂತಿದ್ದವನಿಗೆ ಅಟ್ಟಾಡಿಸಿಕೊಂಡು ಹಲ್ಲೆ: ವಿಡಿಯೋ ನೋಡಿ